32 C
Mumbai
March 7, 2026
Mumbai News Kannada
ಮುಂಬಯಿ

ಇಲ್ಲಿ ಸ್ಥಳದ ಅಭಾವ ಇದೆ ಅದರೆ  ಶ್ರೀ ದುರ್ಗೆ ಯನ್ನು ಪೂಜಿಸಲು ಭಕ್ತರ  ಅಭಾವಿಲ್ಲ – ಪ್ರಭಾಕರ್ ಶೆಟ್ಟಿ





ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸ ಮಂಡಳಿ  ಏಳನೇ ದಿನದ‌ ಸಾಂಸ್ಕೃತಿಕ ಕಾರ್ಯಕ್ರಮ

ಇಲ್ಲಿ ಸ್ಥಳದ ಅಭಾವ ಇದೆ ಅದರೆ  ಶ್ರೀ ದುರ್ಗೆ ಯನ್ನು ಪೂಜಿಸಲು ಭಕ್ತರ  ಅಭಾವಿಲ್ಲ – ಪ್ರಭಾಕರ್ ಶೆಟ್ಟಿ

ಚಿತ್ರ ವರದಿ ರವಿ.ಬಿ.ಅಂಚನ್ ಪಡುಬಿದ್ರಿ


ಡೊಂಬಿವಲಿ ಅ.10: ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಗೆ ವಜ್ರ ಮಹೋತ್ಸವದ ಸಂಭ್ರಮ ನನ್ನನು ಡೊಂಬಿವಲಿ ನಗರಕ್ಕೆ ಪರಿಚಯಿಸಿದವರು ಗೋಪಾಲ ಶೆಟ್ಟಿಯವರು ನಾನು ಡೊಂಬಿವಲಿ ನಗರದಲ್ಲಿ ಉದ್ಯಮ ಪ್ರಾರಂಭಿಸಿ ಮೂರು ದಶಕಗಳು ಕಳೆದಿದೆ ಮೂವತ್ತು ವರ್ಷದಿಂದ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ವತಿಯಿಂದ ಜರಗುವ ನವರಾತ್ರ ಉತ್ಸವದಲ್ಲಿ ಪಾಲ್ಗೊಳ್ಳುತ್ತಿದ್ದೇನೆ ಇಲ್ಲಿ ಪ್ರತಿವರ್ಷ ಭಕ್ತರ ಸಂಖ್ಯೆ ಹೆಚ್ಚಾಗುತ್ತಾ ಇದೆ. ಇಲ್ಲಿ ಸ್ಥಳದ ಅಭಾವ ಇರಬಹುದು ಅದರೆ ಶ್ರೀ ದುರ್ಗೆಯನ್ನು ಪೂಜಿಸಲು  ಭಕ್ತರ  ಅಭಾವವಿಲ್ಲ, ಇಲ್ಲಿ  ಪ್ರಾರ್ಥಿಸಿ ತಮ್ಮ ಕಷ್ಟ ಗಳನ್ನು ಪರಿಹರಿಸಿ ಕೊಂಡವರ ಸಂಖ್ಯೆ ಬಹಳಷ್ಠಿದೆ. ಡೊಂಬಿವಲಿ ನಗರದಿಂದ  ವಲಸೆ ಹೋದವರು ನವರಾತ್ರಿ ಸುಸಂಧರ್ಬದಲ್ಲಿ ಅಗಮಿಸಿ ದೇವಿಯ ದರ್ಶನವನ್ನು ಪಡೆಯುವವರು ಬಹಳಷ್ಟು ಜನರಿದ್ದಾರೆ.ಈ ದಿವ್ಯ ಸಾನಿಧ್ಯದಲ್ಲಿ ಶ್ರೀ ದುರ್ಗೆಯ ಕೃಪೆ ಕಿಂಚಿತ್ತೂ ಕಡಿಮೆಯಾಗಲಿಲ್ಲ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸ ಮಂಡಳಿ ಯಿಂದಾಗಿ ಕನ್ನಡಿಗರು ಒಗ್ಗಟ್ಟಾಗಿದ್ದಾರೆ ಎಂದರೂ ತಪ್ಪಾಗಲಾರದು. ಶ್ರೀ ದುರ್ಗೆಯ ಆಶೀರ್ವಾದದಿಂದ ಎಲ್ಲರಿಗೂ ಒಳಿತನ್ನು ಬಯಸಿ ಒಳಿತನ್ನು ಮಾಡೋಣಾ  ನವರಾತ್ರೋತ್ಸವ ಮಂಡಳಿಯ ದುರ್ಗೆಯ ಕೃಪೆ ಮಹಾನಗರದಾಂತ್ಯ ತುಳು- ಕನ್ನಡಿಗರಿಗೆ ಲಭಿಸಲಿ ಎಂದು ಡೊಂಬಿವಲಿ ನಗರದ ಖ್ಯಾತ ಉದ್ಯಮಿ, ಸಮಾಜ ಸೇವಕ ಇನ್ನ ಕಚ್ಚೂರ ಪರಾರಿ ಪ್ರಭಾಕರ ಆರ್. ಶೆಟ್ಟಿ ನುಡಿದರು.
ಅವರು ಅಕ್ಟೋಬರ್ 9 ರ ಬುಧವಾರ ದಂದು ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿಯ ವಜ್ರ ಮಹೋತ್ಸವ ನಿಮಿತ್ತ ಜರಗಿದ ಏಳನೇ ದಿನದ ಸಾಂಸ್ಕೃತಿಕ ಕಾರ್ಯಕ್ರಮದ ವೇದಿಕೆಯನ್ನು ಅಲಂಕರಿಸಿ ಮಾತನಾಡುತ್ತಿದ್ದರು.


ಅತಿಥಿ ದಾನಿ ಪ್ರಕಾಶ್ ಡಿ ಶೆಟ್ಟಿ ಮಾತನಾಡುತ್ತಾ  22 ವರ್ಷದ ಮೊದಲು ನಾವು ಡೊಂಬಿವಲಿ ನಿವಾಸಿಗರು ತದ ನಂತರ ನವಿ ಮುಂಬಯಿಗೆ ವಲಸೆ ಹೋಗಿ ನಮ್ಮ ಉದ್ಯಮವನ್ನು ಪ್ರಾರಂಭಿಸಿದವರು ಪ್ರತಿವರ್ಷ ಡೊಂಬಿವಲಿಗೆ ಅಗಮಿಸಿ ಶ್ರೀ ದುರ್ಗೆಯ ಅನುಗ್ರಹವನ್ನು ಪಡೆಯುತ್ತಾ ಇದ್ದೇವೆ. ಇತ್ತೀಚಿನ ದಿನಗಳಲ್ಲಿ ಡೊಂಬಿವಲಿ ಸಾಂಸ್ಕೃತಿಕ ನಗರವಾಗಿ ಬೆಳೆಯುತ್ತಿರುವುದನ್ನು ಕಂಡು ಸಂತೋಷವಾಗುತ್ತಿದೆ ಎಂದರು.
ಧರ್ಮದರ್ಶಿ ಅಶೋಕ್ ಶೆಟ್ಟಿ ಮಾತನಾಡುತ್ತಾ  ಅರವತ್ತು ವರ್ಷದ ಮೊದಲು ಡೊಂಬಿವಲಿಯಲ್ಲಿ  ಕೇವಲ 10-15 ಕುಟುಂಬಗಳು ವಾಸವಾಗಿದ್ದವು ಅ ಸಂದರ್ಭದಲ್ಲಿ ನಮ್ಮವರನ್ನು ಒಗ್ಗೂಡಿಸಿ ಭಜನಾ ಮಂಡಳಿಯನ್ನು ಸ್ಥಾಪಿಸಿ ಪೂಜೆ ಮಾಡಲು ಪ್ರಾರಂಬಿಸಿದ ನಂತರ ನವರಾತ್ರೋತ್ಸವವನ್ನು ಅಚರಿಸಲಾಯಿತು 1971 ರಿಂದ ಮಂಡಳಿಗೆ ಹೊಸ ಮುಖಗಳು ಸೇರ್ಪಡೆ ಗೊಂಡ ನಂತರ ಮಂಡಳಿಗೆ ಬಲ ಬಂತು ನಮ್ಮ ಹಿರಿಯರು ಮಂಡಳಿಯಲ್ಲಿ  ಸಲ್ಲಿಸಿದ ಸೇವೆ, ಹೂವಿನ‌ ಅಲಂಕಾರ ಅನನ್ಯ ಅವರೆಲ್ಲರ ಪರಿಶ್ರಮದ ಫಲವಾಗಿ ಮಂಡಳಿ ಇಷ್ಟು ಎತ್ತರಕ್ಕೆ ಬೆಳೆದಿದೆ ಎನ್ನಲು ಸಂತೋಷವಾಗುತ್ತಿದೆ ಎಂದರು.
ಇದೇ ಸಂದರ್ಭದಲ್ಲಿ  ಅಂಬಿಕಾ ಪ್ರಭಾಕರ್ ಶೆಟ್ಟಿ ಜ್ಯೋತಿ ಶೆಟ್ಟಿ ದಂಪತಿ ಮತ್ತು ಪ್ರಕಾಶ್ ಶೆಟ್ಟಿ  ಪೂರ್ಣಿಮಾ ಶೆಟ್ಟಿ ದಂಪತಿಯನ್ನು ವೇದಿಕೆಯ ಮೇಲಿದ್ದ ಗಣ್ಯರು ಸನ್ಮಾನಿಸಿದರು.
ಶ್ರೇಯಾ ಶ್ರೀನಿವಾಸನ್ ಇವರ ಪ್ರಾರ್ಥನೆಯೊಂದಿಗೆ ವೇದಿಕೆಯ ಮೇಲಿದ್ದ ಗಣ್ಯರು ದೀಪ ಪ್ರಜ್ವಲಿಸಿ ಸಭಾ ಕಾರ್ಯಕ್ರಮಕ್ಕೆ ಚಾಲನೆ ನಿಡಿದರು
ವೇದಿಕೆಯ ಮೇಲೆ ಧರ್ಮದರ್ಶಿ ಅಶೋಕ್ ಶೆಟ್ಟಿ, ಅಧ್ಯಕ್ಷ ಗೋಪಾಲ ಶೆಟ್ಟಿ, ಅಂಬಿಕಾ ಪ್ರಭಾಕರ್ ಶೆಟ್ಟಿ, ಜ್ಯೋತಿ ಶೆಟ್ಟಿ, ಪ್ರಕಾಶ್ ಡಿ. ಶೆಟ್ಟಿ, ಪೂರ್ಣಿಮಾ ಶೆಟ್ಟಿ, ವಿಲಾಸಿನಿ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
ಚಿನ್ಮಯ ಸಾಲ್ಯಾನ್ ಮತ್ತು ಪಾವನ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು



Related posts

ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕ. ರಜತ ಮಹೋತ್ಸವದ ಕಾರ್ಯ ಧ್ಯಕ್ಷರಾಗಿ  ಕಡಂದಲೆ ಪರಾರಿ ನ್ಯಾ, ಪ್ರಕಾಶ್ ಎಲ್ ಶೆಟ್ಟಿ ಆಯ್ಕೆ,

Mumbai News Desk

ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ ಡೊಂಬಿವಲಿ 32 ನೇ ವಾರ್ಷಿಕ ಸಾರ್ವಜನಿಕ ಶನಿಶ್ವರ ಪೂಜೆ ಸಂಪನ್ನ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ, ನೂತನ ಪದಾಧಿಕಾರಿಗಳ ಆಯ್ಕೆ. ಗೌ.ಅಧ್ಯಕ್ಷರಾಗಿ ಸುರೇಶ್ ಪೂಜಾರಿ, ಅಧ್ಯಕ್ಷರಾಗಿ ಸಿ.ಎ. ಪೂಜಾರಿ ಅಯ್ಕೆ

Mumbai News Desk

ಕರ್ನಾಟಕ : ಎಸ್ ಎಸ್ ಎಲ್ ಸಿ ಫಲಿತಾಂಶ- ಪ್ರೇಕ್ಷಾ ವಿ ಪೂಜಾರಿ ಗೆ ಶೇ.94.80 ಅಂಕ

Mumbai News Desk

ಗೋರೆಗಾಂವ್ ಕರ್ನಾಟಕ ಸ಼ಂಘ, “ರಂಗಸ್ಥಳ” ದಿಂದ ಆಟಿಡೊ಼ಂಜಿ ಬಯ್ಯದ ಪೋರ್ತು 2025

Mumbai News Desk

ಡೊಂಬಿವಲಿ ಮಂಜುನಾಥ ವಿದ್ಯಾಲಯ ಕನ್ನಡ, ಆಂಗ್ಲ ಮಾಧ್ಯಮ ಶಾಲೆ ಎಸ್. ಎಸ್. ಸಿ. ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Mumbai News Desk