April 1, 2025
ಮುಂಬಯಿ

ಮುಂಬಯಿ : ಏನ್ ಸಿ ಪಿ ಮುಖಂಡ ಬಾಬಾ ಸಿದ್ಧಿಕ್ ಅವರನ್ನು ಗುಂಡಿಕ್ಕಿ ಹತ್ಯೆ


ಮುಂಬೈಯ ನ್ಯಾಷನಲಿಸ್ಟ್ ಕಾಂಗ್ರೇಸ್ ಪಕ್ಷದ (ಏನ್ ಸಿ ಪಿ )ನಾಯಕ ಬಾಬಾ ಸಿದ್ದಿಕ್ ಅವರನ್ನು ನಿನ್ನೆ ರಾತ್ರಿ( (12/10) 9.30 ಗಂಟೆಗೆ, ಮೂವರು ದಾಳಿಕೋರರು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಪೊಲೀಸರು ಘಟನೆಗೆ ಸಂಬಂಧಿಸಿದಂತ್ತೆ ಇಬ್ಬರನ್ನು ಬಂದಿಸಿದ್ದು, ಓರ್ವ ಉತ್ತರ ಪ್ರದೇಶ ಮತ್ತೊರ್ವ ಹರಿಯಾಣದವನು ಎಂದು ಗುರುತಿಸಲಾಗಿದ್ದು, ಮೂರನೇ ಹಂತಕನ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಾಬಾ ಸಿದ್ದಿಕ್ ಅವರ ಮಗನ ಬಾಂದ್ರ ಪೂರ್ವದ ಕಛೇರಿಯ ಹೊರಗೆ ಮೂರು ಜನ ಬಾಬಾ ಸಿದ್ದಿಕ್ ಅವರ ಮೇಲೆ ಗುಂಡು ಹಾರಿಸಿದ್ದು, ಅವರನ್ನು ಕೂಡಲೇ ಲೀಲಾವತಿ ಆಸ್ಪತ್ರೆಗೆ ಸಾಗಿಸಲಾಯಿತು, ಅವರು ಆಸ್ಪತ್ರೆಯಲ್ಲಿ ಸಾವನಪ್ಪಿದರು ಎಂದು ಬಲ್ಲ ಮೂಲಗಳು ತಿಳಿಸಿವೆ.
ಮುಂಬೈನ ಬಾಂದ್ರ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿದ್ದ ಬಾಬಾ ಸಿದ್ದಿಕ್ ಅವರು, ಮಹಾರಾಷ್ಟ್ರ ಸರಕಾರದ ಮಾಜಿ ಸಚಿವರಾಗಿದ್ದು, ಈ ವರ್ಷದ ಫೆಬ್ರವರಿಯಲ್ಲಿ ಕಾಂಗ್ರೆಸ್ ಒಡನಾಟ ತೊರೆದು ಅಜಿತ್ ಪವರ್ ನೇತೃತ್ವದ ಎನ್‌ಸಿಪಿ ಸೇರಿದ್ದರು.

Related posts

ಜ್ಞಾನ ವಿಕಾಸ ಮಂಡಳ ಶಿಕ್ಷಣ ಸಂಸ್ಥೆ ಕಲ್ವಾ : ನೂತನ ಅಧ್ಯಕ್ಷರಾಗಿ ವಿ ಎನ್ ಹೆಗಡೆ ಮರು ಆಯ್ಕೆ.

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಧಾರವಿ ಶಾಖೆಯಲ್ಲಿ 46 ನೇ ಸಂಸ್ಥಾಪನಾ ದಿನಾಚರಣೆ .

Mumbai News Desk

ವಸಯಿ ಕರ್ನಾಟಕ ಸಂಘ 38ನೇ ವಾರ್ಷಿಕೋತ್ಸವ ಸಂಭ್ರಮ ಸಾಧಕರಿಗೆ ಸನ್ಮಾನ, ನೃತ್ಯ ವೈಭವ, ನಾಟಕ

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ; ಆಷಾಢ ಹಬ್ಬ ಆಚರಣೆ,

Mumbai News Desk

ಮುಂಬೈಯ ಪತ್ರಕರ್ತರ ಹೆಸರಲ್ಲಿ ನಡೆಸುತ್ತಿರುವ ಸಂಘಟನೆ ಯಲ್ಲಿ ಗೊಂದಲ.

Mumbai News Desk

ಕಾಪು ಮೊಗವೀರ ಮಹಿಳಾ ಮಂಡಳಿ : ಹಳದಿ ಕುಂಕುಮ ಕಾರ್ಯಕ್ರಮ

Mumbai News Desk