32 C
Mumbai
March 7, 2026
Mumbai News Kannada
ತುಳುನಾಡು

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ





ಜಗತ್ ಪ್ರಸಿದ್ಧ ಮಂಗಳೂರು ದಸರಾ ಮೆರವಣಿಗೆ ಭಾನುವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಸಂಜೆ 4 ಗಂಟೆಗೆ ಆರಂಭಗೊಂಡಿತು. ಸುಮಾರು 60ಕ್ಕೂ ಅಧಿಕ ಸ್ತಬ್ಧಚಿತ್ರಗಳು ಈ ದಸರಾ ಮೆರವಣಿಗೆಗೆ ಮೆರುಗು ನೀಡಿತು. ದೇಶ – ವಿದೇಶಗಳಿಂದ ಬಂದ ಲಕ್ಷಾಂತರ ಮಂದಿ ಭಕ್ತರು ಈ ದಸರಾ ಮೆರವಣಿಗೆಗೆ ಸಾಕ್ಷಿಯಾದರು.
ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕಳೆದ 10 ದಿನಗಳಿಂದ ಅದ್ಧೂರಿಯಾಗಿ ನಡೆದ ನವರಾತ್ರಿ ಮಹೋತ್ಸವಕ್ಕೆ ದಸರಾ ಮೆರವಣಿಗೆಯೊಂದಿಗೆ ತೆರೆ ಕಾಣಲಿದೆ. ಅಕ್ಟೋಬರ್ 3 ರಂದು ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ದೀಪ ಬೆಳಗಿಸುವುದರೊಂದಿಗೆ ಆರಂಭಗೊಂಡ ಈ ದಸರಾ ಮೆರವಣಿಗೆ ಇಂದು ಬೃಹತ್ ಮೆರವಣಿಗೆಯೊಂದಿಗೆ ಸಂಪನ್ನಗೊಳ್ಳಲಿದೆ. ಸಂಜೆ ಸುಮಾರು 4 ಗಂಟೆಗೆ ಕ್ಷೇತ್ರದಿಂದ ಹೊರಟ ಈ ಬೃಹತ್ ದಸರಾ ಮೆರವಣಿಗೆಯಲ್ಲಿ ವಿಘ್ನನಿವಾರಕ ಗಣೇಶ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯರ ಮೂರ್ತಿಗಳನ್ನು ಸ್ತಬ್ಧ ಚಿತ್ರದೊಂದಿಗೆ ಕೊಂಡೊಯ್ಯಲಾಯಿತು. ದಸರಾ ಮಹೋತ್ಸವದ ರೂವಾರಿ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ಈ ಬೃಹತ್ ದಸರಾ ಮೆರವಣಿಗೆ ನಡೆಯುತ್ತಿದೆ. ಸರ್ಕಾರದ ಯಾವುದೇ ಅನುದಾನವಿಲ್ಲದೆ ಇಷ್ಟು ಅಚ್ಚುಕಟ್ಟಾಗಿ ನಡೆಯುವ ಈ ದಸರಾವನ್ನು ಭಕ್ತರ ಸಹಕಾರದಿಂದ ಅದ್ಧೂರಿಯಾಗಿ ನಡೆಸಲಾಗುತ್ತದೆ.



Related posts

ಶ್ರೀ ಕ್ಷೇತ್ರ ಶಂಕರಪುರದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಯ ಅಂಗವಾಗಿ ಕಾಪು ಶ್ರೀ ಮಾರಿಯಮ್ಮನ ದರುಶನ

Mumbai News Desk

ಶ್ರೀ ಬಪ್ಪನಾಡು ಸೌಹರ್ದ ಸಹಕಾರಿ ಸಂಘ(ನಿ)ಇದರ ವಾರ್ಷಿಕ ಮಹಾಸಭೆಯಲ್ಲಿ ಹರಿಶ್ಚಂದ್ರ ಪಿ. ಸಾಲಿಯಾನ್‌ರವರಿಗೆ ಸನ್ಮಾನ

Mumbai News Desk

ಚಂದ್ರಶೇಖರ ಬೆಳ್ಚಡ ಸಾರಥ್ಯದಲ್ಲಿ ಕಟೀಲಿನಲ್ಲಿ 50ನೇ ವರ್ಷದ ಗಂಪ ಯಕ್ಷ ಸುವರ್ಣ ಸಂಭ್ರಮ.

Mumbai News Desk

ಕಾಪು : ಧರ್ಮಪಾಲ ಯು ದೇವಾಡಿಗ ಮತ್ತು ಪರಿವಾರದವರ ಹರಕೆ ಮಾರಿ ಪೂಜೆ ಯಶಸ್ವಿ ಸಂಪನ್ನ

Mumbai News Desk

ಮೂಳೂರು : ಸಂಜೀವಿ ಸುಂದರ ವಿದ್ಯಾನಿಧಿ ಟ್ರಸ್ಟ್ ಉದ್ಘಾಟನೆ, ವಿದ್ಯಾನಿಧಿ ವಿತರಣೆ

Mumbai News Desk

ಹೆಜಮಾಡಿ ಕೋಡಿಕರೆ ಬಿಲ್ಲವರ ಸಮಿತಿ – ವಿದ್ಯಾರ್ಥಿವೇತನ ವಿತರಣಾ ಹಾಗೂ ಪ್ರತಿಭಾ ಪುರಸ್ಕಾರ

Mumbai News Desk