30 C
Mumbai
September 9, 2026
Mumbai News Kannada
ತುಳುನಾಡು

ಅದ್ಧೂರಿಯಾಗಿ ನಡೆದ ಮಂಗಳೂರು ದಸರಾ; ದೇಶ-ವಿದೇಶಗಳಿಂದ ಲಕ್ಷಾಂತರ ಮಂದಿ





ಜಗತ್ ಪ್ರಸಿದ್ಧ ಮಂಗಳೂರು ದಸರಾ ಮೆರವಣಿಗೆ ಭಾನುವಾರ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಸಂಜೆ 4 ಗಂಟೆಗೆ ಆರಂಭಗೊಂಡಿತು. ಸುಮಾರು 60ಕ್ಕೂ ಅಧಿಕ ಸ್ತಬ್ಧಚಿತ್ರಗಳು ಈ ದಸರಾ ಮೆರವಣಿಗೆಗೆ ಮೆರುಗು ನೀಡಿತು. ದೇಶ – ವಿದೇಶಗಳಿಂದ ಬಂದ ಲಕ್ಷಾಂತರ ಮಂದಿ ಭಕ್ತರು ಈ ದಸರಾ ಮೆರವಣಿಗೆಗೆ ಸಾಕ್ಷಿಯಾದರು.
ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಕಳೆದ 10 ದಿನಗಳಿಂದ ಅದ್ಧೂರಿಯಾಗಿ ನಡೆದ ನವರಾತ್ರಿ ಮಹೋತ್ಸವಕ್ಕೆ ದಸರಾ ಮೆರವಣಿಗೆಯೊಂದಿಗೆ ತೆರೆ ಕಾಣಲಿದೆ. ಅಕ್ಟೋಬರ್ 3 ರಂದು ಕೇಂದ್ರ ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ದೀಪ ಬೆಳಗಿಸುವುದರೊಂದಿಗೆ ಆರಂಭಗೊಂಡ ಈ ದಸರಾ ಮೆರವಣಿಗೆ ಇಂದು ಬೃಹತ್ ಮೆರವಣಿಗೆಯೊಂದಿಗೆ ಸಂಪನ್ನಗೊಳ್ಳಲಿದೆ. ಸಂಜೆ ಸುಮಾರು 4 ಗಂಟೆಗೆ ಕ್ಷೇತ್ರದಿಂದ ಹೊರಟ ಈ ಬೃಹತ್ ದಸರಾ ಮೆರವಣಿಗೆಯಲ್ಲಿ ವಿಘ್ನನಿವಾರಕ ಗಣೇಶ, ಆದಿಶಕ್ತಿ, ನವದುರ್ಗೆಯರು ಹಾಗೂ ಶಾರದಾ ಮಾತೆಯರ ಮೂರ್ತಿಗಳನ್ನು ಸ್ತಬ್ಧ ಚಿತ್ರದೊಂದಿಗೆ ಕೊಂಡೊಯ್ಯಲಾಯಿತು. ದಸರಾ ಮಹೋತ್ಸವದ ರೂವಾರಿ ಬಿ.ಜನಾರ್ದನ ಪೂಜಾರಿ ನೇತೃತ್ವದಲ್ಲಿ ಈ ಬೃಹತ್ ದಸರಾ ಮೆರವಣಿಗೆ ನಡೆಯುತ್ತಿದೆ. ಸರ್ಕಾರದ ಯಾವುದೇ ಅನುದಾನವಿಲ್ಲದೆ ಇಷ್ಟು ಅಚ್ಚುಕಟ್ಟಾಗಿ ನಡೆಯುವ ಈ ದಸರಾವನ್ನು ಭಕ್ತರ ಸಹಕಾರದಿಂದ ಅದ್ಧೂರಿಯಾಗಿ ನಡೆಸಲಾಗುತ್ತದೆ.



Related posts

ಕೊಳಚಿಕಂಬಳ ಶ್ರೀ ಜಾರಂದಾಯ ಧೂಮಾವತಿ ಯೂತ್ ಕ್ಲಬ್ ನ 16ನೇ ವರ್ಷದ ವಾರ್ಷಿಕೋತ್ಸವ

Mumbai News Desk

ಇನ್ನಂಜೆ ಕನ್ನಡ ಮಾಧ್ಯಮ ಶಾಲೆಯ ಉಚಿತ ವಿದ್ಯಾಭ್ಯಾಸದ ಸಹಾಯಾರ್ಥವಾಗಿ  ಕ್ರಿಕೆಟ್ ಪಂದ್ಯಾಕೂಟ : ಶಾಲೆಗೆ ರೂಪಾಯಿ 1,67,875/ ಹಸ್ತಾಂತರ.

Mumbai News Desk

ಉಡುಪಿ ಇಂದ್ರಾಣಿ ನದಿ ಮಾಲಿನ್ಯ ನಿವಾರಣೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಜಿಲ್ಲಾಡಳಿತಕ್ಕೆ ತುರ್ತು ಮನವಿ

Mumbai News Desk

“ಭಗವಾನ್ ದತ್ತಾತ್ರೇಯರು ವಿಶ್ವವನ್ನು ವಿದ್ಯಾಲಯವಾಗಿಸಿದವರು”: ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ

Mumbai News Desk

ಹೆಜಮಾಡಿ ಬಿಲ್ಲವ ಸಂಘದಲ್ಲಿ ಉಚಿತ ವೈದ್ಯಕೀಯ ಹಾಗೂ ದಂತ ತಪಾಸಣಾ ಶಿಬಿರ

Mumbai News Desk

ಉಡುಪಿ : ಮನೆಯಲ್ಲಿ ಅಗ್ನಿ ಅವಘಡ, ಮನೆಯ ಯಜಮಾನ ಮೃತ್ಯು.

Mumbai News Desk