April 1, 2025
ಮಹಾರಾಷ್ಟ್ರ

ಮುಂಬೈನಲ್ಲಿ ಟೋಲ್ ಇಲ್ಲ; ಮಹಾರಾಷ್ಟ್ರ ಸರ್ಕಾರದಿಂದ ಘೋಷಣೆ; ಲಕ್ಷಾಂತರ ವಾಹನ ಸವಾರರಿಗೆ ಅನುಕೂಲ

ಮಹಾರಾಷ್ಟ್ರದ ರಾಜಧಾನಿಯಾದ ವಾಣಿಜ್ಯ ನಗರಿ ಮುಂಬೈಗೆ ಹೋಗುವ ಕಾರುಗಳು ಇನ್ಮುಂದೆ ಟೋಲ್ ಕಟ್ಟಬೇಕಿಲ್ಲ. ಎಲ್ಲಾ ಹಗುರ ಮೋಟಾರು ವಾಹನಗಳಿಗೆ ಟೋಲ್​ನಿಂದ ವಿನಾಯಿತಿ ನೀಡಲಾಗುತ್ತಿದೆ ಎಂದು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂದೆ ಘೋಷಿಸಿದ್ದಾರೆ. ರಾಜ್ಯ ಸರ್ಕಾರದ ಕ್ಯಾಬಿನೆಟ್ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ಮಧ್ಯ ರಾತ್ರಿಯಿಂದಲೇ ಈ ಕ್ರಮ ಜಾರಿಗೆ ಬರಲಿದೆ. ಮಹಾರಾಷ್ಟ್ರದಲ್ಲಿ ಮುಂದಿನ ತಿಂಗಳು ವಿಧಾನಸಭಾ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಅದರ ಹೊಸ್ತಿಲಲ್ಲೇ ಸರ್ಕಾರ ತೆಗೆದುಕೊಂಡಿರುವ ಈ ಟೋಲ್ ವಿನಾಯಿತಿ ನಿರ್ಧಾರವನ್ನು ಎಲೆಕ್ಷನ್ ಗಿಮಿಕ್ ಎಂದು ವಿಪಕ್ಷಗಳು ಟೀಕಿಸಿವೆ.

ಮುಂಬೈ ನಗರವನ್ನು ಪ್ರವೇಶಿಸಲು ಇರುವ ಆರು ರಸ್ತೆಗಳಲ್ಲಿ ಟೋಲ್ ಬೂತ್​ಗಳಿವೆ. ದಹಿಸಾರ್, ಆನಂದ್ ನಗರ್, ವೈಶಾಲಿ, ಐರೋಲಿ ಮತ್ತು ಮುಲುಂದ್​ನಲ್ಲಿರುವ ಟೋಲ್​ಗಳಲ್ಲಿ ನಾಳೆಯಿಂದ ಲೈಟ್ ಮೋಟಾರು ವಾಹನಗಳು ಟೋಲ್ ಕಟ್ಟುವ ಅಗತ್ಯ ಇರುವುದಿಲ್ಲ. ಮುಕ್ತವಾಗಿ ಸಂಚರಿಸಬಹುದಾಗಿದೆ.

2002ರಿಂದಲೂ ಈ ಸ್ಥಳಗಳಲ್ಲಿರುವ ಟೋಲ್​ಗಳಲ್ಲಿ 45 ರೂನಿಂದ 75 ರೂವರೆಗೆ ಟೋಲ್ ವಸೂಲಿ ಮಾಡಲಾಗುತ್ತಿದೆ. 2026ರವರೆಗೂ ಈ ಟೋಲ್ ಜಾರಿಯಲ್ಲಿರುತ್ತದೆ. ಈಗ ಭಾರೀ ತೂಕದ ವಾಹನಗಳು ಮಾತ್ರವೇ ಟೋಲ್ ಕಟ್ಟಬೇಕಾಗುತ್ತದೆ. ಮುಂಬೈಗೆ ಸಾಗುವ ಈ ರಸ್ತೆಗಳಲ್ಲಿ ಒಟ್ಟು 3.5 ಲಕ್ಷ ವಾಹನಗಳು ಟೋಲ್ ಬಳಸುತ್ತವೆ. ಇವುಗಳಲ್ಲಿ 2.80 ಲಕ್ಷ ವಾಹನಗಳು ಎಲ್​ಎಂವಿಗಳಾಗಿವೆ.

ತಾಂತ್ರಿಕವಾಗಿ 3,500 ಕಿಲೋಗಿಂತ ಕಡಿಮೆ ತೂಕ ಇರುವ ವಾಹನಗಳನ್ನು ಹಗುರ ಮೋಟಾರು ವಾಹನಗಳೆಂದು ಪರಿಗಣಿಸಲಾಗುತ್ತದೆ. ಕಾರುಗಳಿಂದ ಹಿಡಿದು ಸಣ್ಣ ಟ್ರಕ್​ಗಳವರೆಗೆ ಎಲ್ಲಾ ರೀತಿಯ ವಾಹನಗಳು ಎಲ್​ಎಂವಿಗಳಾಗಿವೆ.

ಈ ಟೋಲ್ ಬೂತ್​ಗಳಲ್ಲಿ ವಾಹನಗಳು ಟೋಲ್ ಪಾವತಿಸಲು ಸರದಿಯಲ್ಲಿ ನಿಲ್ಲುತ್ತವೆ. ಕೆಲ ನಿಮಿಷಗಳ ವ್ಯಯವಾಗುತ್ತದೆ. ಈಗ ಟೋಲ್ ಅನ್ನೇ ರದ್ದು ಮಾಡಲಾಗಿರುವುದರಿಂದ ವಾಹನಗಳು ಅಡೆತಡೆಯಿಲ್ಲದೆ ಸಂಚರಿಸಬಹುದು.

Related posts

ಮಾಹಾರಾಷ್ಟ್ರ ವಿಧಾನ ಸಭಾ ಚುನಾವಣೆ : “ಎಣ್ಣೆ” ಪ್ರಿಯರಿಗೆ ವಿಶೇಷ ಮಾಹಿತಿ.

Mumbai News Desk

ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್, 21 ನೇ ವಾರ್ಷಿಕೋತ್ಸವ, ಕರ್ನಾಟಕ ರಾಜ್ಯೋತ್ಸವ ಅಚರಣೆ

Mumbai News Desk

ಮಹಾರಾಷ್ಟ್ರ : ಹೊಸ ಸರಕಾರ ರಚನೆಗೆ ಮುಂದುವರಿದ ಕುತೂಹಲ, ದಿಢೀರ್ ಸ್ವಗ್ರಾಮಕ್ಕೆ ಹೊರಟ ಏಕನಾಥ್ ಶಿಂಧೆ

Mumbai News Desk

ಬಿಜೆಪಿ ನಿರ್ಧಾರಕ್ಕೆ ನನ್ನ ಬೆಂಬಲವಿದೆ – ಮೌನ ಮುರಿದ ಏಕನಾಥ್ ಶಿಂಧೆ

Mumbai News Desk

ಕಲಂಬೋಲಿ  ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ದ  34 ನೆ  ವಾರ್ಷಿಕ ಮಹಾಪೂಜೆ .

Mumbai News Desk

ಡಿ. 5ರಂದು ಮಹಾಯುತಿ ಸರಕಾರ ಪ್ರಮಾಣ ವಚನ ಸ್ವೀಕಾರ – ಬಿಜೆಪಿ ಘೋಷಣೆ

Mumbai News Desk