32 C
Mumbai
April 24, 2026
Mumbai News Kannada
ಮುಂಬಯಿ

ನೀರನ್ನು ಕುದಿಸಿ, ಪಿಲ್ಟರ್ ಮಾಡಿ ಬಳಸಿ ಬಿ ಎಂ ಸಿಯಿಂದ ಮುಂಬೈ ಜನತೆಗೆ ಸಲಹೆ





ಕಳೆದ ಕೆಲವು ದಿನಗಳಿಂದ ಬಾಟ್ಸಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ ನೀರಿನ ಪ್ರಕ್ಷುಬ್ದತೆ ಹೆಚ್ಚಳದ ನಂತರ ಮುಂಬೈ ನಾಗರಿಕರು ನೀರನ್ನು ಕುದಿಸಿ, ಫಿಲ್ಟರ್ ಮಾಡಿ ಬಳಸುವಂತ್ತೆ ಬೃಹನ್ ಮುಂಬೈ ಮಹಾನಗರ ಪಾಲಿಕೆ ಸಲಹೆ ನೀಡಿದೆ.


ಕಳೆದ ಮೂರರಿಂದ ನಾಲ್ಕು ದಿನಗಳಿಂದ ಭಟ್ಸಾ ಜಲಾಶಯದ ಜಲನಯನ ಪ್ರದೇಶದಲ್ಲಿ ನಿರಂತರ ಮಳೆ ದಾಖಲಾಗಿರುವುದರ ಪರಿಣಾಮ ಅಕ್ಟೋಬರ್ 21ರಿಂದ ನದಿ ನಾಲೆಯಲ್ಲಿ ನೀರಿನ ಪ್ರಕ್ಷುಬ್ದತೆಯ ಹೆಚ್ಚಳವನ್ನು ಗಮನಿಸಲಾಗಿದ್ದು, ಮುಂಬೈನ ಪೂರ್ವ ಉಪನಗರಗಳು ಮತ್ತು ನಗರ ಪ್ರದೇಶದ ಕೆಲವು ಕಡೆಗಳಲ್ಲಿ ನೀರು ಕಲುಷಿತಗೊಂಡಿದ್ದು, ಈ ಬಗ್ಗೆ ಬಿ ಎಂ ಸಿ ಯ ಹೈಡ್ರಾಲಿಕ್ ಎಂಜಿನಿಯರಿಂಗ್ ವಿಭಾಗ ನೀರು ಶುದ್ದಿಕರಣ ಘಟಕದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡಿದೆ.


ಅದಾಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಬ್ರಹನ್ ಮುಂಬೈ ಮುನ್ಸಿಪಾಲ್ ಕಾರ್ಪೊರೇಷನ್ ನಾಗರಿಕರನ್ನು ಸೇವಿಸುವ ಮೊದಲು ನೀರನ್ನು ಫಿಲ್ಟರ್ ಮಾಡಿ ಮತ್ತು ಕುದಿಸಿ ಎಂದು ಒತ್ತಾಯಿಸುತದೆ.
ಬಹನ್ ಮುಂಬೈ ಮುನಿಸಿಪಲ್ ಕಾರ್ಪೊರೇಷನ್ ಮುಂಬೈ ನಾಗರಿಕರಿಗೆ ಏಳು ಜಲ ಮೂಲಗಳಿಂದ ನೀರನ್ನು ಪೂರೈಸುತ್ತಿದೆ, ಕಳೆದ ಮೂರು ನಾಲ್ಕು ದಿನಗಳಿಂದ ಭಟ್ಸಾ ನದಿಯ ಜಲನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ 2024ರ ಅಕ್ಟೋಬರ್ 21ರಿಂದ ನದಿ ಕಾಲುವೆಗಳಿಗೆ ಪ್ರವೇಶಿಸುವ ನೀರು ಹೆಚ್ಚಿದ ಪ್ರಕ್ಷುಬ್ದತೆ ತೋರಿಸಿದೆ.



Related posts

ಥಾಣೆಯಲ್ಲಿ ಶ್ರೀ ಕ್ಷೇತ್ರ ಒಡಿಯೂರಿನ  ಶ್ರೀ ಗುರುದೇವಾನಂದ ಸ್ವಾಮೀಜಿಯವರಿಗೆ ಗುರುವಂದನೆ –  ತನ್ನನ್ನು ತಾನು ಅರಿತುಕೊಳ್ಳುವುದೇಅಧ್ಯಾತ್ಮಿಕ :ಒಡಿಯೂರು ಶ್ರೀ 

Mumbai News Desk

ಬಿಲ್ಲವರ ಅಸೋಸಿಯೇಶನ್ ಕಲ್ಯಾಣ್ ಸ್ಥಳೀಯ ಕಛೇರಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಭಕ್ತಿ ವಿಜೃಂಭಣೆಯಿಂದ ಆಚರಣೆ

Mumbai News Desk

ಮೈಸೂರು ಅಸೋಸಿಯೇಷನ್‌ನಲ್ಲಿ ‘ಶ್ರೀರಂಗ ಸ್ಮರಣೆ’ ನಾಟಕೋತ್ಸವ: -ವೀಕ್ಷಕರನ್ನು ಮನರಂಜಿಸಿದ “ಕಾಲಜ್ಞಾನಿ ಕನಕ”

Mumbai News Desk

ಸಾಯನ್,ಗೋಕುಲ ಶ್ರೀ ಗೋಪಾಲಕೃಷ್ಣ ದೇವರ ಪ್ರತಿಷ್ಠಾಪನಾ ದಿನ

Mumbai News Desk

ಭವನ್ಸ್ ಕಾಲೇಜು ಕ್ಯಾಂಪಸ್‌ನಲ್ಲಿ ಅಯ್ಯಪ್ಪ ಸ್ವಾಮಿಯ 28ನೇ ವಾರ್ಷಿಕ ಮಹಾಪೂಜೆ

Mumbai News Desk

ಕುಲಾಲ ಸಂಘ ಮುಂಬಯಿ  ಇದರ 2024-26 ರ ಸಾಲಿನ ಅವಧಿಗೆ ಪದಾಧಿಕಾರಿಗಳ ಆಯ್ಕೆ

Mumbai News Desk