32 C
Mumbai
March 7, 2026
Mumbai News Kannada
ಪ್ರಕಟಣೆ

ಕರ್ನಾಟಕ ಸಂಘ ಡೊಂಬಿವಲಿ: ಅಕ್ಟೋಬರ್ 27ರಂದು 57 ನೇ ವಾರ್ಷಿಕ ಮಹಾಸಭೆ.   





               

  ಮುಂಬಯಿ ಹಾಗೂ ಉಪನಗರಗಳಲ್ಲಿಯ ಹೊರನಾಡ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆ ಎಂಬ ಹೆಗ್ಗಳಿಕೆ ಗೆ ಪಾತ್ರವಾದ ಕರ್ನಾಟಕ ಡೊಂಬಿವಲಿಯ 57ನೇಯ ವಾರ್ಷಿಕ ಮಹಾ ಸಭೆ ಅಕ್ಟೋಬರ್ 27ರಂದು  ರವಿವಾರ ಸಂಜೆ 4-30ಕ್ಕೆ ಡೊಂಬಿವಲಿ ಪೂರ್ವದ ಗೋಪಾಲ್ ನಗರ ಪರಿಸರದ ಮಂಜುನಾಥ್ ವಿಧ್ಯಾಲಯದ ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ಸುಕುಮಾರ ಎನ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಜರುಗಲಿದೆ. ಮಹಾ ಸಭೆಯ ನಿಗದಿತ ಸಮಯದಲ್ಲಿ ಸಭೆಗೆ ಅವಶ್ಯಕ ಸದಸ್ಯರ ಸಂಖ್ಯೆ ಕಡಿಮೆ ಇದ್ದರೆ ಅರ್ಧ ಗಂಟೆಯ ವರೆಗೆ ಸಭೆಯನ್ನು ಮುಂದೂಡಿ ನಂತರ ಅದೆ ಸ್ಥಳದಲ್ಲಿ ಮಹಾಸಭೆ ನಡೆಯಲಿದ್ದು, ಲೇಖ್ಖ ಪತ್ರ ಪರಿಶೋಧಕರ ಹೇಳಿಕೆಯ ಕುರಿತು ಸದಸ್ಯರಿಗೆ ಯಾವದೇ ಅನುಮಾನ , ಪ್ರಶ್ನೆ, ಸಲಹೆ ಸೂಚನೆಗಳು ಇದ್ದರೆ  ವಾರ್ಷಿಕ ಮಹಾಸಭೆಯ ಕನಿಷ್ಟ ಮೂರು ದಿನಗಳ ಮುಂಚಿತವಾಗಿ ಸಂಘದ ಗೌ.ಕಾರ್ಯದರ್ಶಿ ಅಥವಾ ಸಂಘದ ಮುಖ್ಯಾಲಯದಲ್ಲಿ ಸಾಯಂಕಾಲ 6ರಿಂದ ರಾತ್ರಿ 8ರ ವರೆಗೆ ಲಿಖಿತ ರೂಪದಲ್ಲಿ ತಿಳಿಸಬಹದಾಗಿದೆ ಅಲ್ಲದೆ ಸಂಘದ ವಾರ್ಷಿಕ ಮಹಾ ಸಭೆಗೆ ಬರುವಾಗ ಪ್ರತಿಯೋಬ್ಬ ಸದಸ್ಯರು 2023-2024 ನೇ ಸಾಲಿನ ವಾರ್ಷಿಕ ವರದಿಯನ್ನು ತರಬೇಕೆಂದು ಸಂಘದ ಗೌ ಕಾರ್ಯದರ್ಶಿ ಪ್ರೋ ಅಜೀತ ಉಮರಾಣಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.                                             

   ಮಹಾಸಭೆಯ 2023-2024 ನೇಯ ಸಾಲಿನ   ವಾರ್ಷಿಕ ವರದಿಯನ್ನು ಈಗಾಗಲೇ ಸರ್ವ ಸದಸ್ಯರಿಗೆ ಕೋರಿಯರ್ ಮುಖಾಂತರ ಕಳುಹಿಸಲಾಗಿದ್ದು,ಒಂದು ವೇಳೆ ತಲುಪದೆ ಇದ್ದಲ್ಲಿ ವಸಂತ  ಚೆಂಬರ್ಸ   ,ಎರಡನೇಯ ಮಹಡಿ ಘನಶ್ಯಾಮ ಗುಪ್ತೆ ಡೊಂಬಿವಲಿ  ಪಶ್ಚಿಮದ ಸಂಘದ ಮುಖ್ಯಾಲಯದಲ್ಲಿ ಮಧ್ಯಾಹ್ನ 1ರಿಂದ ರಾತ್ರಿ 8ರವರೆಗೆ ಸಂಪರ್ಕಿಸಿ ಪಡೆಯಬಹುದಾಗಿದೆ.                                               

  ಈ ಮಹತ್ವದ ವಾರ್ಷಿಕ ಮಹಾ ಸಭೆಗೆ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ತಿತರಿದ್ದು ತಮ್ಮ ಅಮೂಲ್ಯ ಸಲಹೆ ಸೂಚನೆಗಳನ್ನು ನೀಡಿ ವಾರ್ಷಿಕ ಮಹಾ ಸಭೆಯನ್ನು ಯಶಸ್ವಿ ಗೋಳಿಸಬೇಕೆಂದು ಸಂಘದ ಕಾರ್ಯಾಧ್ಯಕ್ಷ ಡಾ ಇಂದ್ರಾಳಿ ದಿವಾಕರ ಶೆಟ್ಟಿ,ಗೌ.ಪ್ರಧಾನ ಕಾರ್ಯದರ್ಶಿ ಪ್ರೋ ಅಜೀತ ಉಮರಾಣಿ ಹಾಗೂ ಕೋಶಾಧಿಕಾರಿ ತಾರಾನಾಥ ಎಸ್ ಅಮೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ. 



Related posts

ಪುನೀತ್ ನ ಚಿಕಿತ್ಸೆ ನೆರವಿಗಾಗಿ ಮನವಿ

Mumbai News Desk

ಮೀರಾ ದಹಾಣು ಬಂಟ್ಸ್ (ರಿ) ಅ10.ಆಟಿದ ಕೂಟ . ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ನವಂಬರ್ 10 ರಂದು ಸುರತ್ಕಲ್ ನಲ್ಲಿ ರಂಗ ಚಾವಡಿ ವರ್ಷದ ಹಬ್ಬ ಕಾರ್ಯಕ್ರಮ *ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ

Mumbai News Desk

ಡಿ. 14 ರಂದು ಭಾಯಂದರ್ ಅಯ್ಯಪ್ಪ ಭಕ್ತ ಮಂಡಲದ ಇಪ್ಪತ್ತನೇ ವರ್ಷದ ಮಹಾಪೂಜೆ

Mumbai News Desk

ನ.29 ರಂದು ಮುಂಬಯಿ ವಿವಿಯ ಕನ್ನಡ ವಿಭಾಗದಲ್ಲಿ ನಾಲ್ಕು ಕೃತಿಗಳ ಬಿಡುಗಡೆ ಸಮಾರಂಭ

Mumbai News Desk

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 

Mumbai News Desk