September 6, 2026
Mumbai News Kannada
ಸುದ್ದಿ

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ,





ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ

ಭುವನೇಶ್ವರ, ಅಕ್ಟೋಬರ್ 25: ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಉಗ್ರ ಸ್ವರೂಪ ತಾಳಿದೆ. ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 110-120 ಕಿಲೋಮೀಟರ್ ಆಗಿತ್ತು. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಚಂಡಮಾರುತದ ಪರಿಣಾಮ ಒಡಿಶಾ, ಪಶ್ಚಿಮ ಬಂಗಾಳ ಮಾತ್ರವಲ್ಲದೆ ಅನೇಕ ರಾಜ್ಯಗಳಲ್ಲಿ ಕಂಡುಬಂದಿದೆ.
ಒಡಿಶಾದ ಭುವನೇಶ್ವರ್, ಪುರಿ, ಪರದೀಪ್ ಮತ್ತು ಧಮ್ರಾ ಬಂದರು ಪ್ರದೇಶಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಒಡಿಶಾದ ಸುಮಾರು 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಒಡಿಶಾ ಸರ್ಕಾರವು ಸುಮಾರು 800 ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಭಾರತೀಯ ಕರಾವಳಿ ಕಾವಲು ಪಡೆ, ಎನ್‌ಡಿಆರ್‌ಎಫ್ ಮತ್ತು ಒಡಿಆರ್‌ಎಫ್ ತಂಡಗಳು ರಕ್ಷಣೆ, ಪರಿಹಾರ ಕಾರ್ಯದಲ್ಲಿ ನಿರತವಾಗಿವೆ.
ದಾನಾ ಚಂಡಮಾರುತವು ಪಶ್ಚಿಮ ಬಂಗಾಳದಲ್ಲೂ ಭಾರಿ ಹಾನಿಯನ್ನು ಉಂಟುಮಾಡಿದೆ. ಸಿಎಂ ಮಮತಾ ಬ್ಯಾನರ್ಜಿ ರಾತ್ರಿಯಿಡೀ ಜಾಗರಣೆ ಮಾಡಿ ಪರಿಸ್ಥಿತಿ ಅವಲೋಕಿಸಿದರು. ಪಶ್ಚಿಮ ಬಂಗಾಳ, ಒಡಿಶಾ ಮತ್ತು ಛತ್ತೀಸ್‌ಗಢದ ಮೂಲಕ ಹಾದುಹೋಗುವ 300 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ.

ದಾನಾ ಚಂಡಮಾರುತದ ಪ್ರಭಾವ ಜಾರ್ಖಂಡ್‌ನಲ್ಲೂ ಕಾಣಿಸಿಕೊಂಡಿದೆ. ಮುಂದಿನ ಎರಡು ದಿನಗಳಲ್ಲಿ ರಾಂಚಿ, ಜಮ್‌ಶೆಡ್‌ಪುರ, ಚೈಬಾಸಾ ಮತ್ತು ಸೆರೈಕೆಲಾ-ಖುಂಟಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಡಿಶಾ ರಾಜಧಾನಿ ಭುವನೇಶ್ವರದಲ್ಲಿರುವ ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಬಳಿ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ನೆರೆಯ ಪಶ್ಚಿಮ ಬಂಗಾಳ, ಪೂರ್ವ ಮಿಡ್ನಾಪುರ ಕೂಡ ಚಂಡಮಾರುತದ ಪ್ರಭಾವಕ್ಕೆ ಸಾಕ್ಷಿಯಾಗಿವೆ.

ವಿಮಾನ ನಿಲ್ದಾಣ ಸೇವೆಗಳು ಪುನರಾರಂಭ
ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಗುರುವಾರ ಸಂಜೆ ಸ್ಥಗಿತಗೊಂಡಿದ್ದ ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸೇವೆಗಳು ಇಂದು ಬೆಳಿಗ್ಗೆ 8 ಗಂಟೆಗೆ ಪುನರಾರಂಭಗೊಂಡಿವೆ.



Related posts

ವಿದ್ಯಾರ್ಥಿಗಳ ಹೆಸರಿನಲ್ಲಿ ಅರಾಜಕತೆ: ಆರ್ ಎ ಎಫ್, ಪೊಲೀಸರ ಮೇಲಿನ ದಾಳಿ ಖಂಡನೀಯ: ಬಿಜೆಪಿ ಮುಖಂಡ ಶ್ರೀನಿಧಿ ಹೆಗ್ಡೆ

Mumbai News Desk

ಕ್ರೀಡಾ ಪ್ರತಿಭೆಗಳಿಗೆ ಉದ್ಯೋಗ ಭದ್ರತೆ ಕಲ್ಪಿಸುವುದು ಅವಶ್ಯ : ಅಂತಾರಾಷ್ಟ್ರೀಯ ದೇಹದಾಡ್ಯ ಪಟು ರೇಮಂಡ್ ಡಿಸೋಜಾ

Mumbai News Desk

ಖ್ಯಾತ ಯಕ್ಷಗಾನ ಹಾಸ್ಯ ಕಲಾವಿದ ಮುಖ್ಯಪ್ರಾಣ ಕಿನ್ನಿಗೋಳಿ ನಿಧನ

Mumbai News Desk

ಹೋಟೆಲ್ ಎಸಿ ಸ್ಫೋಟ, ತಾರಾನಾಥ ವಿ ಬಂಜನ್ ಮೃತ್ಯು: ಮಾನವೀಯತೆ ಮೆರೆದ ಉದ್ಯಮಿ ಎನ್ ಟಿ ಪೂಜಾರಿ.

Mumbai News Desk

ನಮೋ ಮೋಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಉದ್ಯಾವರ ಶಾಲಾ ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾಗುವ ಮುದ್ರಣ ಯಂತ್ರ ಕೊಡುಗೆ

Mumbai News Desk

*ವಿಜಯ ಕಾಲೇಜು ಮುಲ್ಕಿ*,*ಜಾಗತಿಕ ಹಳೆ ವಿದ್ಯಾರ್ಥಿ ಸಂಘ,ಮುಂಬಯಿ*-ನೂತನ ಅಧ್ಯಕ್ಷರಾಗಿ ಅಡ್ವೊಕೇಟ್ ಶೇಖರ್ ಭಂಡಾರಿ ಆಯ್ಕೆ.

Mumbai News Desk