July 23, 2026
Mumbai News Kannada
ಸುದ್ದಿ

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ,







ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ

ಭುವನೇಶ್ವರ, ಅಕ್ಟೋಬರ್ 25: ಒಡಿಶಾ ಹಾಗೂ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತ ಉಗ್ರ ಸ್ವರೂಪ ತಾಳಿದೆ. ಗುರುವಾರ ತಡರಾತ್ರಿ ಡಾನಾ ಚಂಡಮಾರುತ ಒಡಿಶಾ ಕರಾವಳಿಗೆ ಅಪ್ಪಳಿಸಿದ್ದು, ಆ ಸಮಯದಲ್ಲಿ ಗಾಳಿಯ ವೇಗ ಗಂಟೆಗೆ 110-120 ಕಿಲೋಮೀಟರ್ ಆಗಿತ್ತು. ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಚಂಡಮಾರುತದ ಪರಿಣಾಮ ಒಡಿಶಾ, ಪಶ್ಚಿಮ ಬಂಗಾಳ ಮಾತ್ರವಲ್ಲದೆ ಅನೇಕ ರಾಜ್ಯಗಳಲ್ಲಿ ಕಂಡುಬಂದಿದೆ.
ಒಡಿಶಾದ ಭುವನೇಶ್ವರ್, ಪುರಿ, ಪರದೀಪ್ ಮತ್ತು ಧಮ್ರಾ ಬಂದರು ಪ್ರದೇಶಗಳಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದೆ. ಒಡಿಶಾದ ಸುಮಾರು 12 ಜಿಲ್ಲೆಗಳಲ್ಲಿ ಹೈ ಅಲರ್ಟ್ ಮುಂದುವರಿದಿದೆ. ಮುಂದಿನ ಎರಡು ದಿನಗಳ ಕಾಲ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಸೂಚಿಸಿದೆ. ಒಡಿಶಾ ಸರ್ಕಾರವು ಸುಮಾರು 800 ಪರಿಹಾರ ಕೇಂದ್ರಗಳನ್ನು ತೆರೆದಿದ್ದು, ಭಾರತೀಯ ಕರಾವಳಿ ಕಾವಲು ಪಡೆ, ಎನ್‌ಡಿಆರ್‌ಎಫ್ ಮತ್ತು ಒಡಿಆರ್‌ಎಫ್ ತಂಡಗಳು ರಕ್ಷಣೆ, ಪರಿಹಾರ ಕಾರ್ಯದಲ್ಲಿ ನಿರತವಾಗಿವೆ.
ದಾನಾ ಚಂಡಮಾರುತವು ಪಶ್ಚಿಮ ಬಂಗಾಳದಲ್ಲೂ ಭಾರಿ ಹಾನಿಯನ್ನು ಉಂಟುಮಾಡಿದೆ. ಸಿಎಂ ಮಮತಾ ಬ್ಯಾನರ್ಜಿ ರಾತ್ರಿಯಿಡೀ ಜಾಗರಣೆ ಮಾಡಿ ಪರಿಸ್ಥಿತಿ ಅವಲೋಕಿಸಿದರು. ಪಶ್ಚಿಮ ಬಂಗಾಳ, ಒಡಿಶಾ ಮತ್ತು ಛತ್ತೀಸ್‌ಗಢದ ಮೂಲಕ ಹಾದುಹೋಗುವ 300 ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ.

ದಾನಾ ಚಂಡಮಾರುತದ ಪ್ರಭಾವ ಜಾರ್ಖಂಡ್‌ನಲ್ಲೂ ಕಾಣಿಸಿಕೊಂಡಿದೆ. ಮುಂದಿನ ಎರಡು ದಿನಗಳಲ್ಲಿ ರಾಂಚಿ, ಜಮ್‌ಶೆಡ್‌ಪುರ, ಚೈಬಾಸಾ ಮತ್ತು ಸೆರೈಕೆಲಾ-ಖುಂಟಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಒಡಿಶಾ ರಾಜಧಾನಿ ಭುವನೇಶ್ವರದಲ್ಲಿರುವ ವಿಶೇಷ ಪರಿಹಾರ ಆಯುಕ್ತರ ಕಚೇರಿಯ ಬಳಿ ಗಾಳಿ ಮಳೆಗೆ ಮರಗಳು ಧರೆಗುರುಳಿವೆ. ನೆರೆಯ ಪಶ್ಚಿಮ ಬಂಗಾಳ, ಪೂರ್ವ ಮಿಡ್ನಾಪುರ ಕೂಡ ಚಂಡಮಾರುತದ ಪ್ರಭಾವಕ್ಕೆ ಸಾಕ್ಷಿಯಾಗಿವೆ.

ವಿಮಾನ ನಿಲ್ದಾಣ ಸೇವೆಗಳು ಪುನರಾರಂಭ
ಮುನ್ನೆಚ್ಚರಿಕೆ ಕ್ರಮಗಳ ಭಾಗವಾಗಿ ಗುರುವಾರ ಸಂಜೆ ಸ್ಥಗಿತಗೊಂಡಿದ್ದ ಭುವನೇಶ್ವರದ ಬಿಜು ಪಟ್ನಾಯಕ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕೋಲ್ಕತ್ತಾದ ನೇತಾಜಿ ಸುಭಾಷ್ ಚಂದ್ರ ಬೋಸ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸೇವೆಗಳು ಇಂದು ಬೆಳಿಗ್ಗೆ 8 ಗಂಟೆಗೆ ಪುನರಾರಂಭಗೊಂಡಿವೆ.



Related posts

ಆರ್ಯಭಟ ಪುರಸ್ಕೃತ ಕೆ.ಕೆ. ಶೆಟ್ಟರಿಗೆ ಹುಟ್ಟೂರ ಅಭಿನಂದನೆ

Mumbai News Desk

ಪಾಲ್ಘರ್ ರಘು ಶೆಟ್ಟಿ ನಿಧನ.

Mumbai News Desk

ನ್ಯೂ ಪನ್ವೇಲ್  ಶ್ರೀ ವೃಂದಾವನ ಬಾಬಾ ಅಯ್ಯಪ್ಪ ಭಕ್ತ ವೃಂದ19ನೇ ಶ್ರೀ ಅಯ್ಯಪ್ಪ ಮಹಾಪೂಜೆ

Mumbai News Desk

ಬಂಗಾಳದಲ್ಲಿ ಬಿಜೆಪಿ ಗೆಲುವು: ಹಲವು ವರ್ಷಗಳ ನಂತರ ತೆರೆದ ದುರ್ಗಾ ದೇವಸ್ಥಾನ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (30/05/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಯಕ್ಷ ಪ್ರೇಮಿಗಳ, ಕಲಾಭಿಮಾನಿಗಳ ಮನ ಗೆದ್ದ ಮಲಾಡ್ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯರ ಯಕ್ಷಗಾನ.

Mumbai News Desk