36.8 C
Karnataka
March 29, 2025
ಕರಾವಳಿ

ಕೊಡೇರಿಯಲ್ಲಿ ಜರಗಿದ ಅಂಚೆ ಜನ ಸಂಪರ್ಕ ಅಭಿಯಾನ


ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗ ಮತ್ತು ಬಿಲ್ಲವ ಸಮಾಜ ಸೇವಾ ಸಂಘ [ರಿ] ಹಕ್ರೆಮಠ, ಕೊಡೇರಿ ಇವರ ಸಹಭಾಗಿತ್ವದಲ್ಲಿ ನವೆಂಬರ್ 1 ರಂದು ಶುಕ್ರವಾರ “ಡಾಕ್-ಸೇವಾ; ಜನ್-ಸೇವಾ-ಒಂದೇ ಸೂರು-ಸೇವೆ ಹಲವಾರು” ಎಂಬ ಆಶಯದ ಅಂಚೆ-ಜನ ಸಂಪರ್ಕ ಅಭಿಯಾನವು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊಡೇರಿಯಲ್ಲಿ ನಡೆಯಿತು.

ಅಭಿಯಾನದ ನೇತೃತ್ವ ವಹಿಸಿದ್ದ ಕುಂದಾಪುರ ಉತ್ತರ ಉಪ ಅಂಚೆ-ವಿಭಾಗದ ಹೆಚ್ಚುವರಿ ಸಹಾಯಕ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠ್ಠಲ ಭಟ್ಟರು ಮಾತನಾಡಿ, ಜನರಿಗೆ ಅನುಕೂಲವಾಗುವಂತೆ ಒಂದೇ ಸೂರಿನಡಿ ಹಲವಾರು ಅಂಚೆ-ಸೇವೆಗಳನ್ನು ನೀಡುವ ಸಲುವಾಗಿ ಇಂತಹ ಅಭಿಯಾನಗಳನ್ನು ಗ್ರಾಮ-ಗ್ರಾಮಗಳಲ್ಲಿ ಅಂಚೆ ಇಲಾಖೆಯು ನಡೆಸುತ್ತಿದ್ದು, ನೂರಾರು ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ ಎಂದು ತಿಳಿಸಿ, ವಿವಿಧ ಅಂಚೆ ಸೇವೆಗಳ ಮಾಹಿತಿ ನೀಡಿದರು.

ಈ ಅಭಿಯಾನದ ಅಧ್ಯಕ್ಷತೆ ವಹಿಸಿದ್ದ ಕಿರಿಮಂಜೇಶ್ವರ ಗ್ರಾಮ ಪಂಚಾಯತ್ ನ ಸದಸ್ಯ ಮತ್ತು ಕೊಡೇರಿ ಬಿಲ್ಲವ ಸಮಾಜ ಸೇವಾ ಸಂಘದ ಮಾಜಿ ಗೌರವ ಪ್ರಧಾನ ಕಾರ್ಯದರ್ಶಿ ಆನಂದ ಪೂಜಾರಿ ಕೊಡೇರಿ ಮಾತನಾಡುತ್ತಾ ಇಂತಹ ಜನಸ್ನೇಹಿ ಅಭಿಯಾನವನ್ನು ಆಯೋಜಿಸುತ್ತಿರುವ ಅಂಚೆ ಇಲಾಖೆಯನ್ನು ಶ್ಲಾಘಿಸಿ, ಅಭಿನಂದಿಸಿದರು. ಹಲವಾರು ಗ್ರಾಮಸ್ತರು ಆಧಾರ್-ಹೊಸ ನೋಂದಣಿ/ಪರಿಷ್ಕರಣೆ, ಆನ್-ಲೈನ್-ಅಪಘಾತ ವಿಮಾ ಸೌಲಭ್ಯ ಹಾಗು ವಿವಿಧ ಅಂಚೆ-ಸೌಲಭ್ಯಗಳ ಪ್ರಯೋಜನವನ್ನು ಪಡೆದುಕೊಂಡರು.


ಈ ಅಭಿಯಾನದಲ್ಲಿ ಅಂಚೆ ಇಲಾಖೆಯ ಕೊಡೇರಿ ಶಾಖೆಯ ಬಿಪಿಎಮ್ ರಾಜೇಶ್ವರಿ ಶಿವರಾಮ್. ಬಿಲ್ಲವ ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಸುಧೀರ್ ಪೂಜಾರಿ ಕಾಡ್ಕೇರಿ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು

.

Related posts

ಕಾಪು ಮೊಗವೀರ ಮಹಿಳಾ ಮಂಡಳಿಯ ರಚನೆಯ ಬಗ್ಗೆ ಪೂರ್ವಭಾವಿ ಸಭೆ ಹಾಗೂ ಸದಸ್ಯೆಯರ ಅರಸಿನ ಕುಂಕುಮ ಕಾರ್ಯಕ್ರಮ.

Mumbai News Desk

ಶಿಲಾಮಯಗೊಳ್ಳುತ್ತಿರುವ ಕಾಪು ಮಾರಿಯಮ್ಮನ ದೇಗುಲ ಕಾಮಗಾರಿ ವೀಕ್ಷಣೆ : ಆದ್ಯಾತ್ಮ ಗುರು ಶ್ರೀ ಶ್ರೀ ಶ್ರೀ ರವಿಶಂಕರ್ ಗುರೂಜಿ

Mumbai News Desk

 ಕಾಪು ಲೀಲಾಧರ ಶೆಟ್ಟಿ ಸ್ಮರಣಾರ್ಥ ರಕ್ತದಾನ ಶಿಬಿರ,

Mumbai News Desk

ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾದಿ ಶಕ್ತಿ ಕ್ಷೇತ್ರ ಸಂಭ್ರಮದ ನಿಧಿಕುಂಬ ಪ್ರತಿಷ್ಠಾಪನೆ.. ರುದ್ರ ಯಾಗ 

Mumbai News Desk

ಕುಲಶೇಖರ ಶ್ರೀ ವೀರನಾರಾಯಣ  ದೇವಸ್ಥಾನದ ಮೇಲ್ಟಾವಣಿಗೆ ಗುದ್ದಲಿ ಪೂಜೆ ,

Mumbai News Desk

ಮೂಲ್ಕಿ ಬಂಟರ ಸಂಘ (ರಿ) ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ,  ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ.

Mumbai News Desk