September 6, 2026
Mumbai News Kannada
ಸುದ್ದಿ

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ





ಮಂಗಳೂರು ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ವತಿಯಿಂದ 6 ನವೆಂಬರ್ 2024 ರಂದು ಮಣಿಪಾಲ್ ಶಾಲೆ, ಅತ್ತಾವರದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳು ಮತ್ತು ಕೃತಕ ಬುದ್ಧಿಮತ್ತೆ (AI) ಉದ್ಯೋಗಾವಕಾಶಗಳ ಕುರಿತು ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಕ್ರತಕ ಬುದ್ದಿಮತ್ತೆ (AI ) ವೃತ್ತಿಯಲ್ಲಿ ಅಗತ್ಯವಿರುವ ಕೌಶಲ್ಯಗಳು ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಮೆಲುಕು ಹಾಕುವ ತಂತ್ರಗಳ ಕುರಿತು ಮಾಹಿತಿಯನ್ನು ನೀಡಲಾಯಿತು. ಇಂಟರಾಕ್ಟಿವ್ ಅಧಿವೇಶನಗಳ ಮೂಲಕ, ವಿದ್ಯಾರ್ಥಿಗಳು AI ಕ್ಷೇತ್ರದ ಅಭಿವೃದ್ಧಿ ಮತ್ತು ಅದರ ಉದ್ಯೋಗಾವಕಾಶಗಳ ಕುರಿತು ಅಮೂಲ್ಯ ಮಾರ್ಗದರ್ಶನವನ್ನು ಪಡೆದರು.

ಸಂಪನ್ಮೂಲ ವ್ಯಕ್ತಿಗಳಾಗಿ ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿಯಾದ ಅಕ್ಷತ ಕದ್ರಿ, ಲಕ್ಷ್ಮೀಶ ಪಿ ಕೋಟ್ಯಾನ್ ಮತ್ತು ಪ್ರಥಮ್ ರಾವ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಪ್ರಾಂಶುಪಾಲರು, ಅಧ್ಯಾಪಕರು ಭಾಗಿಯಾಗಿದ್ದು, ಶಿಬಿರ ಯಶಸ್ವಿಯಾಗಿ ನಡೆಯಿತು ಎಂದು ಟ್ರಸ್ಟಿನ ಅಧ್ಯಕ್ಷರಾದ ಪ್ರಕಾಶ್ ಮೂಲತ್ವ ತಿಳಿಸಿದ್ದಾರೆ.



Related posts

ಪರಿಯಾಳ ಸಮಾಜ ಮಹಾಸಭಾದ ಅಧ್ಯಕ್ಷರಾಗಿ ಸುನೀಲ್ ಕುಮಾರ್ ಹೆಜಮಾಡಿ

Mumbai News Desk

ಯುವ ಭಾರತದ ಮೇಲೆ ದೇಶಕ್ಕೆ ಅಪಾರ ನಂಬಿಕೆ: ಐಐಟಿ ದೆಹಲಿ ಘಟಿಕೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪೂರ್ತಿದಾಯಕ ನುಡಿ

Mumbai News Desk

ಕುಲಾಲ ಸಂಘ ಮುಂಬೈ  ಅಧ್ಯಕ್ಷರಾಗಿ ಮರು ಆಯ್ಕೆಗೊಂಡ   ರಘು ಮೂಲ್ಯ ಪಾದೆಬೆಟ್ಟು ಅವರಿಗೆ ಮಂಗಳೂರುನಲ್ಲಿ  ಗೌರವ,

Mumbai News Desk

ಚುನಾವಣಾ ಆಯೋಗದಿಂದ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ, ಪುದುಚೇರಿ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆ

Mumbai News Desk

ಮೊಳಹಳ್ಳಿ ಶಿವರಾವ್ ಸಹಕಾರಿ ಕ್ಷೇತ್ರಕ್ಕೆ ನೀಡಿದ ಕೊಡುಗೆಯ ಸಮಗ್ರ ದಾಖಲೀಕರಣ: ‘ತ್ಯಾಗಮಯಿ ಮೊಳಹಳ್ಳಿ’ ಗ್ರಂಥ ಯುವಪೀಳಿಗೆಗೆ ಸ್ಫೂರ್ತಿ – ಡಾ. ಎಂ.ಎನ್. ರಾಜೇಂದ್ರ ಕುಮಾರ್

Mumbai News Desk

ಸಿಜೆಪಿ–ಕೇಂದ್ರ ಜಂಟಿ ಸುದ್ದಿಗೋಷ್ಠಿ: ನೀಟ್ ಪೇಪರ್ ಸೋರಿಕೆ ಪ್ರತಿಭಟನೆ ವಾಪಸ್, ಹೊಸ ಕಾಯ್ದೆಗೆ ಸಂಪುಟ ಅಂಕಿತ

Mumbai News Desk