September 6, 2026
Mumbai News Kannada
ಪ್ರಕಟಣೆ

ಶ್ರೀ ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ ಇಲ್ಲಿ ನವೆಂಬರ್ 13 ರಂದುತುಳಸೀ ಪೂಜೆ ಹಾಗೂ ಕಾರ್ತಿಕ ದೀಪೋತ್ಸವ





ಬೊಯಿಸರ್ : ವರ್ಷದುದ್ದಕ್ಕೂ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಪರಿಸರದಲ್ಲಿ ಆಧ್ಯಾತ್ಮಿಕ ಅನುಭೂತಿಯನ್ನುಂಟು ಮಾಡುತ್ತಾ ಪಾಲ್ಘರ್ ಜಿಲ್ಲೆಯಲ್ಲಿನ ತುಳು ಕನ್ನಡಿಗರ ಸಾಂಸ್ಕೃತಿಕ ಶೃದ್ಧಾ ಕೇಂದ್ರವೆನಿಸಿದ ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ ಇದೇ ಬರುವ ತಾ 13 ನೆಯ ನವೆಂಬರ್ ಬುಧವಾರದಂದು ಸಂಜೆ 5ಕ್ಕೆ ಮಂದಿರದ ಆವರಣದಲ್ಲಿ ತುಳಸೀ ವಿವಾಹ ಪೂಜಾ ಕಾರ್ಯಕ್ರಮ ಮತ್ತು ಕಾರ್ತಿಕ ವಿಶೇಷ ದೀಪೋತ್ಸವವನ್ನು ಭಕ್ತಾದಿಗಳಿಂದ ಆಚರಿಸಲಾಗುವುದು.
ಕಾರ್ತಿಕ ಮಾಸದಲ್ಲಿ ತಮ್ಮ ಮನೆಯಂಗಳ , ದ್ವಾರದಲ್ಲಿನ ಜೊತೆಗೆ ಮಂದಿರಗಳಲ್ಲಿ ಎಣ್ಣೆ ದೀಪ ಹಚ್ಚುವುದರಿಂದ ವಿಶೇಷ ದೈವಾನುಗ್ರಹ ಪ್ರಾಪ್ತಿಯಾಗುವುದು ಎಂಬ ನಂಬಿಕೆ ಇದೆ.
ಸದ್ಗುರು ಶ್ರೀ ಸ್ವಾಮಿ ನಿತ್ಯಾನಂದ
ಬಾಬಾ ಇವರ ದಿವ್ಯ ಕೃಪೆಯಿಂದ ಜರಗುವ ಈ ಕಾರ್ಯಕ್ರಮದಲ್ಲಿ ಭಕ್ತಾಭಿಮಾನಿಗಳೆಲ್ಲರೂ ಕುಟುಂಬ ಸಮೇತ ಬಂದು ಭಾಗವಹಿಸ ಬೇಕಾಗಿ ಶ್ರೀ ನಿತ್ಯಾನಂದ ಸ್ವಾಮಿ ಭಕ್ತ ವೃಂದದ ಸರ್ವಸದಸ್ಯರು ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.
ಸುದ್ದಿ : ಪಿ.ಆರ್.ರವಿಶಂಕರ್

.

.

.

.

.



Related posts

ಆ.9 ರಂದು ಇತಿಹಾಸ ಪ್ರಸಿದ್ಧ ನಂದಳಿಕೆ ನಾಲ್ಕು ಸ್ಥಾನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಮತ್ತು ಆದಿ ಆಲಡೆಗಳ ಜೀರ್ಣೋದ್ಧಾರ ಸಭೆ.

Mumbai News Desk

ಅ. 25, ತುಳು ವಲ್ ಫೇರ್  ಎಸೋಸಿಯೇಶನ್ ಡೊಂಬಿವಲಿ 27 ನೇ ವಾರ್ಷಿಕೋತ್ಸವ

Mumbai News Desk

ಜು 21 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ

Mumbai News Desk

ಮಾ. 8 ರಂದು ಜಗಜ್ಯೋತಿ ಕಲಾವೃಂದ ಕಚೇರಿಯಲ್ಲಿ ಮಹಾಶಿವರಾತ್ರಿ ಪೂಜೆ

Mumbai News Desk

ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿಡಿ. 3 ರಂದು 35 ನೇ ವಾರ್ಷಿಕ ಮಹಾಸಭೆ

Mumbai News Desk

ದೊಡ್ಡಣ್ಣ ಗುಡ್ಡೆಯ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

Mumbai News Desk