30 C
Mumbai
April 24, 2026
Mumbai News Kannada
ಸುದ್ದಿ

ಪಕ್ಷಿಕೆರೆ : ಪತ್ನಿ ಮಗುವನ್ನು ಹತ್ಯೆಗೈದು ಪತಿ ರೈಲಿಗೆ ತಲೆಕಕೊಟ್ಟು ಅತ್ಮಹತ್ಯೆ





ಮೂಲ್ಕಿ ನ.9. ಪತ್ನಿ ಮಗುವನ್ನು ಹತ್ಯೆಗೈದು ತಾನೂ ಅತ್ಮಹತ್ಯೆ ಮಾಡಿದ ಘಟನೆ ಮೂಲ್ಕಿ ಸಮೀಪದ ಪಕ್ಷಿಕೆರೆಯಲ್ಲಿ ನಡೆದಿದೆ ಹತ್ಯೆಗೈದಾತನನ್ನು ಕಾರ್ತಿಕ್ ಭಟ್ (32)ಎಂದು ಗುರುತಿಸಲಾಗಿದೆ ಪತ್ನಿ ಪ್ರಿಯಾಂಕ ((28) ಮಗು ಹೃದಯ್ (4) ಎಂದು ಗುರುತಿಸಲಾಗಿದೆ. ಶುಕ್ರವಾರ ಈ ಘಟನೆ ನಡೆದಿದೆ ಎನ್ನಲಾಗಿದೆ. ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಮೂಲ್ಕಿಯ ಬೆಳ್ಳಾಯರು ನಲ್ಲಿ ರೈಲಿಗೆ ತಲೆಕೆಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದಾನೆ. ಶುಕ್ರವಾರ ಮದ್ಯಾಹ್ನ ಯುವಕನೋರ್ವ ರೈಲಿಗೆ ತಲೆಕೊಟ್ಟು ಅತ್ಮಹತ್ಯೆ ಮಾಡಿಕೊಂಡಿದ್ದು ಈ ಬಗ್ಹೆ ತನಿಖೆ ನಡೆಸುವಾಗ ಅತ್ಮಹತ್ಯೆ ಮಾಡಿಕೊಂಡವನು ಪಕ್ಷಿಕೆರೆಯ ಕಾರ್ತಿಕ್ ಭಟ್ ಎಂದು ತಿಳಿದಿದ್ದು ಮನೆಗೆ ಬಂದಾಗ ಪತ್ನಿ ಮಗು ಅತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಕಾರ್ತಿಕ್ ಭಟ್ ತಂದೆ ಜನಾರ್ದನ ಭಟ್ ಪಕ್ಷಿಕೆರೆ ಪೇಟೆಯಲ್ಲಿ ಕಳೆದ ಹಲವು ವರ್ಷಗಳಿಂದ ತನ್ನ ಮಗ ಕಾರ್ತಿಕ್ ನ ಹೆಸರಲ್ಲೇ ಚಿಕ್ಕ ಹೊಟೇಲೊಂದನ್ನು ನಡೆಸುತ್ತಿದ್ದು, ಜನಾರ್ಧನ ಭಟ್ ಅವರಿಗೆ ಎರಡು ಹೆಣ್ಣು‌ಒಂದು ಗಂಡು ಮಕ್ಕಳಿದ್ದು
ಹೊಟೇಲು ಆದಾಯದಲ್ಲೇ ಮೂರು ಮಕ್ಕಳನ್ನು ಸಾಕಿ ಉತ್ತಮ ವಿದ್ಯಾಭ್ಯಾಸ ಕೊಡಿಸಿದ್ದರು. ಕಾರ್ತಿಕ್ ಮದುವೆ ಆದ ನಂತರ ತನ್ನ ತಂದೆ ತಾಯಿ ಬಳಿ ಉತ್ತಮ ಸಂಬಂಧ ಹೊಂದಿಲ್ಲ ಎನ್ನಲಾಗಿದ್ದು, ಮನೆಯ ಪ್ರತ್ಯೇಕ ಕೋಣೆಯಲ್ಲಿ ತನ್ನ ಹೆಂಡತಿ ಮಗುವಿನೊಂದಿಗೆ ಇರುತ್ತಿದ್ದ. ತಂದೆ ಜನಾರ್ದನ ಭಟ್ ಮತ್ತು ಪತ್ನಿ ಶಾಮಲ ಶುಕ್ರವಾರ ಹೋಟೇಲಿಗೆ ಹೋದ ನಂತರ ಘಟನೆ ನಡೆದಿದ್ದು, ಒಂದು ಕೊಣೆಯಲ್ಲಿ ಕಾರ್ತಿಕ್ ಪತ್ನಿ ಮಗು ಕೊಲೆಯಾಗಿ ಬಿದ್ದಿದ್ದರೂ ಇವರಿಗೆ ತಿಳಿದಿರಲಿಲ್ಲ ಸ್ಥಳಕ್ಕೆ ಪೋಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.



Related posts

ಮುಂಬೈ – ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ವಿಸ್ತರಿಸುವ ಸಾಧ್ಯತೆ

Mumbai News Desk

ದುಬೈ ಯಲ್ಲಿ ಅದ್ದೂರಿಯಾಗಿ ಜರಗಿದ “ಅಂತಾರಾಷ್ಟ್ರೀಯ ಜನಪದ ಉತ್ಸವ – 2025”

Mumbai News Desk

ಅನಿತಾ ಪಿ. ತಾಕೊಡೆಯವರಿಗೆ ಕರ್ನಾಟಕ ಲೇಖಕಿಯರ ಸಂಘದ ದತ್ತಿ ಪ್ರಶಸ್ತಿ ಪ್ರದಾನ

Mumbai News Desk

ಮುಂಬಯಿಯಲ್ಲಿ ಜರಗಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥರ ಜನ್ಮವರ್ದಂತಿ ಬಗ್ಗೆ ಪೂರ್ವಭಾವಿ ಸಭೆ.

Mumbai News Desk

ಲಾಲ್ ಕೃಷ್ಣ ಅಡ್ವಾಣಿಗೆ ಭಾರತ ರತ್ನ, ತೋನ್ಸೆ ಜಯಕೃಷ್ಣ ಎ. ಶೆಟ್ಟಿ ಅಭಿನಂದನೆ

Mumbai News Desk

ನಿಟ್ಟೆ ಶಿಕ್ಷಣ ಟ್ರಸ್ಟ್‌ನ ಸಂಸ್ಥಾಪಕ ಎನ್ ವಿನಯ ಹೆಗ್ಡೆ ನಿಧನ

Mumbai News Desk