32 C
Mumbai
March 7, 2026
Mumbai News Kannada
ಪ್ರಕಟಣೆ

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ‘ಕರ್ನಾಟಕ ರಾಜ್ಯೋತ್ಸವ’ ಆಚರಣೆ






ಕರ್ನಾಟಕ ಸಂಘ, ಕಲ್ಯಾಣ ಸ್ಥಾಪನೆಯಾಗಿ 21 ವರ್ಷಗಳಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಘದ ವಾರ್ಷಿಕ ಕಾರ್ಯಕ್ರಮವಾಗಿ ವಿಜ್ರಂಭಣೆಯಿಂದ ಆಚರಿಸುತ್ತಿದ್ದು ಈ ವರ್ಷ 16 ನವೆಂಬರ್ ದಂದು ಸಂಜೆ 5ರಿಂದ ಕಲ್ಯಾಣ ಪಶ್ಚಿಮದ ಗಿರಿಜಾ ಪಯ್ಯಾಡೆ ಸಭಾಗ್ರಹದಲ್ಲಿ ಆಚರಿಸಲಾಗುವುದು. ಆ ಪ್ರಯುಕ್ತ ಘನ್ಸೋಲಿ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಶ್ರೀ ಅಣ್ಣಿ ಸಿ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಹಾಗೂ ನವಿ ಮುಂಬಯಿ ಕನ್ನಡ ಸಂಘದ ಚೇರ್ಮನ್ ಶ್ರೀ ಬಿ.ಎಚ್.ಕಟ್ಟಿಯವರು ಗೌರವ ಅತಿಥಿಗಳಾಗಿ ಆಗಮಿಲಿದ್ದಾರೆ. ಈ ಸಂದರ್ಭದಲ್ಲಿ ಸಮಾಜ ಸೇವಕ ಇಂಜಿನಿಯರ್ ಶ್ರೀ ಸತೀಶ್ ಅಲಗೂರ್ ಹಾಗೂ ಉದ್ಯಮಿ ಶ್ರೀ ಹರೀಶ್ ಪ್ರಭುರವರನ್ನು ಸನ್ಮಾನಿಸಲಾಗುವುದು. ರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ 10 ನವೆಂಬರ್ ದಂದು ಸಂಜೆ 3ರಿಂದ ವಿವಿಧ ಸ್ಪರ್ಧೆಗಳನ್ನು ಸಂಘದ ಕಾರ್ಯಲಯದಲ್ಲಿ ಏರ್ಪಡಿಸಲಾಯಿತು. ನವೆಂಬರ್ 16ರ ರಾಜ್ಯೋತ್ಸವ ಕಾರ್ಯಕ್ರಮವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭವಾಗಲಿದ್ದು ಸಭಾ ಕಾರ್ಯಕ್ರಮಗಳ ಜೊತೆಗೆ ಸಂಘದ “ಸ್ಮರಣ ಸಂಚಿಕೆ 2024″ಯನ್ನು ಬಿಡುಗಡೆ ಮಾಡಲಾಗುವುದು. ಕಲ್ಯಾಣ ಪರಿಸರದ ಹಾಗೂ ಎಲ್ಲಾ ಕನ್ನಡ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೆಂದು ಕಾರ್ಯಕ್ರಮ ಕಮಿಟಿ ಚೇರ್ಮನ್, ಶ್ರೀ ಭಾಸ್ಕರ ಶೆಟ್ಟಿಯವರು ಹಾಗೂ ಸಂಘದ ಅಧ್ಯಕ್ಷ ಶ್ರೀ ಕೆ.ಎನ್.ಸತೀಶರು ವಿನಂತಿಸಿಕೊಂಡಿದ್ದಾರೆ.

.

.

.



Related posts

ಜು 21 ರಂದು ಬಿಲ್ಲವರ ಎಸೋಸಿಯೇಶನ್, ಮುಂಬೈ ಇದರ ಡೊಂಬಿವಲಿ ಸ್ಥಳೀಯ ಕಚೇರಿಯಲ್ಲಿ ಗುರುಪೂರ್ಣಿಮೆ

Mumbai News Desk

ಮಾರ್ಚ್ 2 ಕ್ಕೆ ಭಯಂದರ್ ನಲ್ಲಿ ನಡೆಯುವ ಅಖಿಲ ಭಾರತ ಸಂತ ಸಮಿತಿಯ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಸಾಯಿ ಈಶ್ವರ್ ಗುರೂಜಿ ಭಾಗಿ.

Mumbai News Desk

ಭಂಡಾರಿ ಸೇವಾ ಸಂಘ ಮುಂಬಯಿ : ಡಿ. 8ರಂದು “ಪಾಂಚಜನ್ಯ ” ವಾರ್ಷಿಕ ಕುಟುಂಬ ಕೂಟ

Mumbai News Desk

ಜೂನ್ 8ರಂದು “ಕನ್ನಡ ವೆಲ್ಫೇರ್ ಸಂಘ” ಜೆರಿಮರಿ, ಕುರ್ಲಾ ಪಶ್ಚಿಮ – ನೂತನ ಸಂಘದ ಉದ್ಘಾಟನೆ.

Mumbai News Desk

  ಜ 22 :  ಪುಣೆ  ಪಿಂಪ್ರೀ ಚಿಂಚ್ವಾಡ್ ಬಂಟರ ಸಂಘ ವತಿಯಿಂದ ವಿದ್ವಾನ್ ಕೈರಬೆಟ್ಟು ವಿಶ್ವನಾಥ್ ಭಟ್ ರಿಂದ  “ಸೀತಾರಾಮ ಕಲ್ಯಾಣ” ಹರಿಕಥೆ, ಶ್ರೀರಾಮ ದೇವರಿಗೆ ಮಹಾಪೂಜೆ .

Mumbai News Desk

SHREE JAI BHAVANI SHANEESHWARA MANDIR – Appeal

Mumbai News Desk