July 23, 2026
Mumbai News Kannada
ಪ್ರಕಟಣೆ

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ‘ಕರ್ನಾಟಕ ರಾಜ್ಯೋತ್ಸವ’ ಆಚರಣೆ








ಕರ್ನಾಟಕ ಸಂಘ, ಕಲ್ಯಾಣ ಸ್ಥಾಪನೆಯಾಗಿ 21 ವರ್ಷಗಳಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಘದ ವಾರ್ಷಿಕ ಕಾರ್ಯಕ್ರಮವಾಗಿ ವಿಜ್ರಂಭಣೆಯಿಂದ ಆಚರಿಸುತ್ತಿದ್ದು ಈ ವರ್ಷ 16 ನವೆಂಬರ್ ದಂದು ಸಂಜೆ 5ರಿಂದ ಕಲ್ಯಾಣ ಪಶ್ಚಿಮದ ಗಿರಿಜಾ ಪಯ್ಯಾಡೆ ಸಭಾಗ್ರಹದಲ್ಲಿ ಆಚರಿಸಲಾಗುವುದು. ಆ ಪ್ರಯುಕ್ತ ಘನ್ಸೋಲಿ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಶ್ರೀ ಅಣ್ಣಿ ಸಿ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಹಾಗೂ ನವಿ ಮುಂಬಯಿ ಕನ್ನಡ ಸಂಘದ ಚೇರ್ಮನ್ ಶ್ರೀ ಬಿ.ಎಚ್.ಕಟ್ಟಿಯವರು ಗೌರವ ಅತಿಥಿಗಳಾಗಿ ಆಗಮಿಲಿದ್ದಾರೆ. ಈ ಸಂದರ್ಭದಲ್ಲಿ ಸಮಾಜ ಸೇವಕ ಇಂಜಿನಿಯರ್ ಶ್ರೀ ಸತೀಶ್ ಅಲಗೂರ್ ಹಾಗೂ ಉದ್ಯಮಿ ಶ್ರೀ ಹರೀಶ್ ಪ್ರಭುರವರನ್ನು ಸನ್ಮಾನಿಸಲಾಗುವುದು. ರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ 10 ನವೆಂಬರ್ ದಂದು ಸಂಜೆ 3ರಿಂದ ವಿವಿಧ ಸ್ಪರ್ಧೆಗಳನ್ನು ಸಂಘದ ಕಾರ್ಯಲಯದಲ್ಲಿ ಏರ್ಪಡಿಸಲಾಯಿತು. ನವೆಂಬರ್ 16ರ ರಾಜ್ಯೋತ್ಸವ ಕಾರ್ಯಕ್ರಮವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭವಾಗಲಿದ್ದು ಸಭಾ ಕಾರ್ಯಕ್ರಮಗಳ ಜೊತೆಗೆ ಸಂಘದ “ಸ್ಮರಣ ಸಂಚಿಕೆ 2024″ಯನ್ನು ಬಿಡುಗಡೆ ಮಾಡಲಾಗುವುದು. ಕಲ್ಯಾಣ ಪರಿಸರದ ಹಾಗೂ ಎಲ್ಲಾ ಕನ್ನಡ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೆಂದು ಕಾರ್ಯಕ್ರಮ ಕಮಿಟಿ ಚೇರ್ಮನ್, ಶ್ರೀ ಭಾಸ್ಕರ ಶೆಟ್ಟಿಯವರು ಹಾಗೂ ಸಂಘದ ಅಧ್ಯಕ್ಷ ಶ್ರೀ ಕೆ.ಎನ್.ಸತೀಶರು ವಿನಂತಿಸಿಕೊಂಡಿದ್ದಾರೆ.

.

.

.



Related posts

ಎ. 6 ರಂದು ನಗರದ ಹೆಸರಾಂತ ಕನ್ನಡ ಮಾಸಿಕ ಛಾಯಾಕಿರಣ ಪತ್ರಿಕೆಯ ದಶಮಾನೋತ್ಸವ

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ. ಸಾಧಕರಿಗೆ ಸನ್ಮಾನ.

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ,ಹೆಜಮಾಡಿ, ಜುಲೈ 16ರಿಂದ “ಕುಮಾರವ್ಯಾಸ ಭಾರತ”, ಕಥಾ ವಾಚನ.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಮೂಲತ್ವ ದಸರಾ ಮಹೋತ್ಸವ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆ, ಮೇ 1ಕ್ಕೆ 90ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ

Mumbai News Desk

ಶ್ರೀ ಜಗದಂಬಾ ಕಾಲಭೈರವ ದೇವಸ್ಥಾನ ಜೋಗೇಶ್ವರಿ : ಅ. 9ರಂದು ನಾಗರಪಂಚಮಿ ಉತ್ಸವ.

Mumbai News Desk