30 C
Mumbai
April 24, 2026
Mumbai News Kannada
ಪ್ರಕಟಣೆ

ನ.16 ರಂದು ಕರ್ನಾಟಕ ಸಂಘ, ಕಲ್ಯಾಣ ‘ಕರ್ನಾಟಕ ರಾಜ್ಯೋತ್ಸವ’ ಆಚರಣೆ






ಕರ್ನಾಟಕ ಸಂಘ, ಕಲ್ಯಾಣ ಸ್ಥಾಪನೆಯಾಗಿ 21 ವರ್ಷಗಳಿಂದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಸಂಘದ ವಾರ್ಷಿಕ ಕಾರ್ಯಕ್ರಮವಾಗಿ ವಿಜ್ರಂಭಣೆಯಿಂದ ಆಚರಿಸುತ್ತಿದ್ದು ಈ ವರ್ಷ 16 ನವೆಂಬರ್ ದಂದು ಸಂಜೆ 5ರಿಂದ ಕಲ್ಯಾಣ ಪಶ್ಚಿಮದ ಗಿರಿಜಾ ಪಯ್ಯಾಡೆ ಸಭಾಗ್ರಹದಲ್ಲಿ ಆಚರಿಸಲಾಗುವುದು. ಆ ಪ್ರಯುಕ್ತ ಘನ್ಸೋಲಿ ಮೂಕಾಂಬಿಕಾ ಮಂದಿರದ ಧರ್ಮದರ್ಶಿ ಶ್ರೀ ಅಣ್ಣಿ ಸಿ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಹಾಗೂ ನವಿ ಮುಂಬಯಿ ಕನ್ನಡ ಸಂಘದ ಚೇರ್ಮನ್ ಶ್ರೀ ಬಿ.ಎಚ್.ಕಟ್ಟಿಯವರು ಗೌರವ ಅತಿಥಿಗಳಾಗಿ ಆಗಮಿಲಿದ್ದಾರೆ. ಈ ಸಂದರ್ಭದಲ್ಲಿ ಸಮಾಜ ಸೇವಕ ಇಂಜಿನಿಯರ್ ಶ್ರೀ ಸತೀಶ್ ಅಲಗೂರ್ ಹಾಗೂ ಉದ್ಯಮಿ ಶ್ರೀ ಹರೀಶ್ ಪ್ರಭುರವರನ್ನು ಸನ್ಮಾನಿಸಲಾಗುವುದು. ರಾಜ್ಯೋತ್ಸವ ಕಾರ್ಯಕ್ರಮದ ಪ್ರಯುಕ್ತ 10 ನವೆಂಬರ್ ದಂದು ಸಂಜೆ 3ರಿಂದ ವಿವಿಧ ಸ್ಪರ್ಧೆಗಳನ್ನು ಸಂಘದ ಕಾರ್ಯಲಯದಲ್ಲಿ ಏರ್ಪಡಿಸಲಾಯಿತು. ನವೆಂಬರ್ 16ರ ರಾಜ್ಯೋತ್ಸವ ಕಾರ್ಯಕ್ರಮವು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಪ್ರಾರಂಭವಾಗಲಿದ್ದು ಸಭಾ ಕಾರ್ಯಕ್ರಮಗಳ ಜೊತೆಗೆ ಸಂಘದ “ಸ್ಮರಣ ಸಂಚಿಕೆ 2024″ಯನ್ನು ಬಿಡುಗಡೆ ಮಾಡಲಾಗುವುದು. ಕಲ್ಯಾಣ ಪರಿಸರದ ಹಾಗೂ ಎಲ್ಲಾ ಕನ್ನಡ ಅಭಿಮಾನಿಗಳು ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಡಬೇಕೆಂದು ಕಾರ್ಯಕ್ರಮ ಕಮಿಟಿ ಚೇರ್ಮನ್, ಶ್ರೀ ಭಾಸ್ಕರ ಶೆಟ್ಟಿಯವರು ಹಾಗೂ ಸಂಘದ ಅಧ್ಯಕ್ಷ ಶ್ರೀ ಕೆ.ಎನ್.ಸತೀಶರು ವಿನಂತಿಸಿಕೊಂಡಿದ್ದಾರೆ.

.

.

.



Related posts

ಸೆ. 22 ರಿಂದ ಅ 2 ರ ವರೆಗೆ ಡೊಂಬಿವಲಿ ಶ್ರೀ ಜಗದಂಬಾ ಮಂದಿರದಲ್ಲಿ 11ನೇ ವರ್ಷದ ಶರನ್ನವರಾತ್ರಿ ಮಹೋತ್ಸವ

Mumbai News Desk

ಸಾಂತಾಕ್ರೂಜ್ ಶ್ರೀ ಪೇಜಾವರ ಮಠದಲ್ಲಿಸೆ. 18ರಂದು ಶೀರೂರು ಮಠಾಧಿಪತಿ, ಪೂಜ್ಯ ಶ್ರೀ ವೇದವರ್ಧನತೀರ್ಥ ಶ್ರೀಪಾದರಿಗೆ ಗುರುವಂದನೆ.

Mumbai News Desk

ಮಾ 16 ; ಗೋರೆಗಾಂವ್ ಇರಾನಿ ಕೊಲನಿ ಶ್ರೀ ಶನಿಮಹಾತ್ಮಾ ಪೂಜಾ ಸಮಿತಿ ಯ 69ನೇ ವಾರ್ಷಿಕ ಮಹೋತ್ಸವ,

Mumbai News Desk

ಶ್ರೀ ಮದ್ಭಾರತ ಮಂಡಳಿ ಮುಂಬೈ : ಫೆ. 21-22ರಂದು “148ನೇ ವಾರ್ಷಿಕ ಮಂಗಳೋತ್ಸವ” ಮತ್ತು “ಕುಮಾರವ್ಯಾಸ ಭಾರತ” ಗ್ರಂಥ ಪಾರಾಯಣದ ಸಮಾಪ್ತಿ ಮಂಗಳೋತ್ಸವ, 24ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk

  ಜ 20.   ಬೋಂಬೆ ಬಂಟ್ಸ್  ಎಸೋಸಿಯೇಶನ್  ವತಿಯಿಂದ ಮಾಜಿ  ಅಧ್ಯಕ್ಷರಾದ ಜಯ ಎನ್ ಶೆಟ್ಟಿಯವರಿಗೆ ಶ್ರದ್ಧಾಂಜಲಿ ಸಭೆ

Mumbai News Desk

ನೈನ್ ಹ್ಯಾಂಡ್ಸ್ ಫೌಂಡೇಶನ್ ಮುಂಬಯಿ: ಜು. 13ಕ್ಕೆ ಮಕ್ಕಳ ವಾರ್ಷಿಕ ಶಾಲಾ ಶುಲ್ಕ ವಿತರಣಾ ಕಾರ್ಯಕ್ರಮ

Mumbai News Desk