32 C
Mumbai
March 7, 2026
Mumbai News Kannada
ಸುದ್ದಿ

ತೊಕ್ಕೊಟ್ಟು ಸಾಯಿ ಪರಿವಾರ್ ನ ಆಹಾರ ಸಾಮಗ್ರಿ‌ ಕಿಟ್ ಸ್ವೀಕರಿಸಿದ ನಿಜವಾದ ಅಶಕ್ತ ಬಂದುಗಳು, ಧನ್ಯತಾ ಭಾವ, ಸಾಯಿ ಸೇವೆಗೆ ಕೃತಜ್ಞತೆ. ತೆನೆಗೆ ಹಾಲೆರೆದು ಉದ್ಘಾಟಿಸಿದ ಜೀವ ರಕ್ಷಕ ಈಶ್ವರ್ ಮಲ್ಪೆ





ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಕಾರ್ಯಕ್ರಮ ಸಾಯಿ ಪರಿವಾರ್ ಸೇವಕರು ಗುರುತಿಸಿದ 200 ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಗಟ್ಟಿ ಸಮಾಜ ಭವನದಲ್ಲಿ ನಡೆಯಿತು. ಸಾವಿರಾರು ಜನರ ಪ್ರಾಣ ಕಾಪಾಡಿದ *ಈಶ್ವರ್ ಮಲ್ಪೆ* ಕಲಶೆಯಲ್ಲಿಟ್ಟ ತೆನೆಗೆ ಹಾಲೆರೆದು ಉದ್ಳಾಟಿಸಿದರು. ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷ *ಸತೀಶ್‌ ಕುಂಪಲ* ಅಧ್ಯಕ್ಷತೆ ವಹಿಸಿದ್ದರು, ವಿಶೇಷ ಅತಿಥಿಗಳಾಗಿ ಬರ್ಕೆ ಪ್ರೆಂಡ್ಸ್ ಇದರ ಸ್ಥಾಪಕಾಧ್ಯಕ್ಷ *ಯಜ್ಞೇಶ್ ಬರ್ಕೆ*, ಮಂಗಳೂರು ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ದ ಅಧ್ಯಕ್ಷ *ವರದರಾಜ್ ಬಂಗೇರ ಉಳ್ಳಾಲ*, ಅಸ್ತೃ ಗ್ರೂಪ್ ಅಪ್ ಕಂಪೆನೀಸ್ ನ ಸಿ.ಇ.ಒ *ಲಾಂಚುಲಾಲ್ ಕೆ.ಎಸ್*, ತುಳು ಚಲನಚಿತ್ರ ನಟ *ಸ್ವರಾಜ್ ಶೆಟ್ಟಿ*, ಆಗಮಿಸಿದ್ದರು. ಸಾಯಿ ಪರಿವಾರ್ ನ ಟ್ರಸ್ಟಿಗಳಾದ ಗಣೇಶ್ ಅಂಚನ್, ಗೀತೇಶ್ ಕುತ್ತಾರ್, ಮಟನ್ ರಾಜಾ, ಪುರುಷೋತ್ತಮ ಕಲ್ಲಾಪು ಉಪಸ್ಥಿತರಿದ್ದರು. ಸ್ಥಾಪಕ ಟ್ರಸ್ಟಿ ಪ್ರವೀಣ್ ಎಸ್ ಕುಂಪಲ‌ ನಿರೂಪಿಸಿ, ಸ್ಥಾಪಕ ಸದಸ್ಯೆ ಧನಲಕ್ಷ್ಮಿ ಗಟ್ಟಿ ಸ್ವಾಗತಿಸಿದರು, ರಜನೀಶ್ ನಾಯಕ್ ವಂದಿಸಿದರು.



Related posts

ಗುರು ನಾರಾಯಣ ರಾತ್ರಿ ಪ್ರೌಢ ಶಾಲೆಗೆ ಎಸ್. ಎಸ್. ಸಿ ಪರೀಕ್ಷೆಯಲ್ಲಿ ಶೇ 100 ಫಲಿತಾಂಶ

Mumbai News Desk

ಮುಲುಂಡ್‌ :    ಲ!  ಜಯರಾಮ್ ಮೂಲ್ಯ ನಿಧನ

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್ * ಭಕ್ತವೃಂದದವರಿಂದ ಐದನೆಯ ವರ್ಷದ ಶ್ರೀ ದೇವೀ ಜಪಪಾರಾಯಣ ಅನುಷ್ಟಾನ ಸಂಪನ್ನ.

Mumbai News Desk

ಮೀರಾ ಡಹಾಣೂ ಬಂಟ್ಸ್ (ರಿ) . ವಾರ್ಷಿಕ ಟರ್ಫ್ ಫುಟ್ ಬಾಲ್ ಟೂರ್ನಮೆಂಟ್.

Mumbai News Desk

ಕಾಪು ತಾಲೂಕು ಪಂಚಾಯತ್ : ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸಭೆ.

Mumbai News Desk

ಕರ್ನಿರೆ  ವಿಶ್ವನಾಥ ಶೆಟ್ಟಿ  ಪರಿವಾರ ದಿಂದ ಕರ್ನಿರೆ ಶ್ರೀ ವಿಷ್ಣು ಮೂರ್ತಿ ದೇವರ ಬಿಂಬಕ್ಕೆ ಚಿನ್ನ ಲೇಪಿತ  ಕವಚ ಸಮರ್ಪಣೆ,

Mumbai News Desk