April 2, 2025
ಸುದ್ದಿ

ತೊಕ್ಕೊಟ್ಟು ಸಾಯಿ ಪರಿವಾರ್ ನ ಆಹಾರ ಸಾಮಗ್ರಿ‌ ಕಿಟ್ ಸ್ವೀಕರಿಸಿದ ನಿಜವಾದ ಅಶಕ್ತ ಬಂದುಗಳು, ಧನ್ಯತಾ ಭಾವ, ಸಾಯಿ ಸೇವೆಗೆ ಕೃತಜ್ಞತೆ. ತೆನೆಗೆ ಹಾಲೆರೆದು ಉದ್ಘಾಟಿಸಿದ ಜೀವ ರಕ್ಷಕ ಈಶ್ವರ್ ಮಲ್ಪೆ

ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತೊಕ್ಕೊಟ್ಟಿನ ಶ್ರೀ ಸಾಯಿ ಪರಿವಾರ್ ಟ್ರಸ್ಟ್ ನ ಕಾರ್ಯಕ್ರಮ ಸಾಯಿ ಪರಿವಾರ್ ಸೇವಕರು ಗುರುತಿಸಿದ 200 ಕುಟುಂಬಗಳಿಗೆ ಆಹಾರ ಸಾಮಗ್ರಿ ಕಿಟ್ ವಿತರಣಾ ಕಾರ್ಯಕ್ರಮ ಗಟ್ಟಿ ಸಮಾಜ ಭವನದಲ್ಲಿ ನಡೆಯಿತು. ಸಾವಿರಾರು ಜನರ ಪ್ರಾಣ ಕಾಪಾಡಿದ *ಈಶ್ವರ್ ಮಲ್ಪೆ* ಕಲಶೆಯಲ್ಲಿಟ್ಟ ತೆನೆಗೆ ಹಾಲೆರೆದು ಉದ್ಳಾಟಿಸಿದರು. ಬಿಜೆಪಿ ದ.ಕ ಜಿಲ್ಲಾ ಅಧ್ಯಕ್ಷ *ಸತೀಶ್‌ ಕುಂಪಲ* ಅಧ್ಯಕ್ಷತೆ ವಹಿಸಿದ್ದರು, ವಿಶೇಷ ಅತಿಥಿಗಳಾಗಿ ಬರ್ಕೆ ಪ್ರೆಂಡ್ಸ್ ಇದರ ಸ್ಥಾಪಕಾಧ್ಯಕ್ಷ *ಯಜ್ಞೇಶ್ ಬರ್ಕೆ*, ಮಂಗಳೂರು ಯಾಂತ್ರಿಕ ಮೀನುಗಾರರ ಸಹಕಾರಿ ಸಂಘ ದ ಅಧ್ಯಕ್ಷ *ವರದರಾಜ್ ಬಂಗೇರ ಉಳ್ಳಾಲ*, ಅಸ್ತೃ ಗ್ರೂಪ್ ಅಪ್ ಕಂಪೆನೀಸ್ ನ ಸಿ.ಇ.ಒ *ಲಾಂಚುಲಾಲ್ ಕೆ.ಎಸ್*, ತುಳು ಚಲನಚಿತ್ರ ನಟ *ಸ್ವರಾಜ್ ಶೆಟ್ಟಿ*, ಆಗಮಿಸಿದ್ದರು. ಸಾಯಿ ಪರಿವಾರ್ ನ ಟ್ರಸ್ಟಿಗಳಾದ ಗಣೇಶ್ ಅಂಚನ್, ಗೀತೇಶ್ ಕುತ್ತಾರ್, ಮಟನ್ ರಾಜಾ, ಪುರುಷೋತ್ತಮ ಕಲ್ಲಾಪು ಉಪಸ್ಥಿತರಿದ್ದರು. ಸ್ಥಾಪಕ ಟ್ರಸ್ಟಿ ಪ್ರವೀಣ್ ಎಸ್ ಕುಂಪಲ‌ ನಿರೂಪಿಸಿ, ಸ್ಥಾಪಕ ಸದಸ್ಯೆ ಧನಲಕ್ಷ್ಮಿ ಗಟ್ಟಿ ಸ್ವಾಗತಿಸಿದರು, ರಜನೀಶ್ ನಾಯಕ್ ವಂದಿಸಿದರು.

Related posts

ತಬಲ ಮಾಂತ್ರಿಕ ಜಾಕೀರ್ ಹುಸೇನ್ ನಿಧನ

Mumbai News Desk

ಮುಂಬೈ ಕನ್ನಡತಿ ನ್ಯಾ. ಮೀನಾಕ್ಷಿ ಅಚಾರ್ಯರಿಗೆ ಗ್ಲೋಬಲ್ ಲೀಗಲ್ ಅವಾರ್ಡ್ಸ್ ನಿಂದ, “ವರ್ಷದ ವ್ಯವಸ್ಥಾಪಕಿ ಪಾಲುದಾರ ಮಹಿಳೆ” ಪ್ರಶಸ್ತಿ.

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಜೀವಿತ್ ಬಿ ಕುಲಾಲ್  88.50 ಅಂಕ

Mumbai News Desk

ಖ್ಯಾತ ಆರ್ಥಿಕ ಸಲಹೆಗಾರ ಡಾ. ಆರ್. ಕೆ. ಶೆಟ್ಟಿಯವರಿಗೆ “ಸಂಸ್ಕೃತಿ ಸಿರಿ” ಪ್ರಶಸ್ತಿ

Mumbai News Desk

ಡಹಾಣೂವಿನ ಬೀದಿಗಳಲ್ಲಿ ಗಣರಾಯನ ದರ್ಬಾರು.

Mumbai News Desk

ಪೇಜಾವರ ಮಠದಲ್ಲಿ ಶ್ರೀ ಕೃಷ್ಣನವಮಿ ಪ್ರತಿಷ್ಠಾ ವರ್ಧಂತಿ ಉತ್ಸವ ಆಚರಣೆ.

Mumbai News Desk