April 2, 2025
ಪ್ರಕಟಣೆ

ಕುಲಾಲ ಪ್ರತಿಷ್ಠಾನದ ಆಶ್ರಯದಲ್ಲಿ ನ.23 ರಂದು ವಿಜಯ ಕಲಾವಿದರು ಕಿನ್ನಿಗೋಳಿ ಇದರ ಮುಂಬೈ ಪ್ರವಾಸದ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲೆಯ ನಾಲ್ಕು ಜನ ಸಾಮಾಜಿಕ, ಧಾರ್ಮಿಕ ಸೇವಾ ಕರ್ತರಿಗೆ ಸನ್ಮಾನ, 

ಮುಂಬಯಿ ನ 19. ಮಂಗಳೂರು ಮತ್ತು ಮುಂಬೈ ನಗರದಲ್ಲಿ ಸಾಮಾಜಿಕ ಸೇವೆಗಳನ್ನು ನಡೆಸುತ್ತಾ ಬಂದಿರುವ ಕುಲಾಲ ಪ್ರತಿಷ್ಠಾನ ಮಂಗಳೂರು ಇದರ ಆಶ್ರಯದಲ್ಲಿ ನವೆಂಬರ್ 23ರಂದು ವಿಜಯ ಕಲಾವಿದರು ಕಿನ್ನಿಗೋಳಿ ಮುಂಬೈ ಪ್ರವಾಸದ ಪ್ರಥಮ ನಾಟಕ “ಅಮ್ಮ ಆಮುಂಡರ “ಉದ್ಘಾಟನಾ ಕಾರ್ಯಕ್ರಮ ಸಾಂತಕ್ರೂಸ್ ಪೂರ್ವದ ಬಿಲ್ಲವ  ಭವನದಲ್ಲಿ ಸಂಜೆ 5:30ಕ್ಕೆನಡೆಯಲಿದೆ. 


ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರ ದ ಅತಿಥಿಗಳಾಗಿ ಜ್ಯೋತಿಷಿ ಡಾ. ಎಂ ಜೆ ಪ್ರವೀಣ್ ಭಟ್  , ಮುಂಬೈ ಬಂಟರ ಸಂಘದ ಎಸ್ಎಮ್ ಶೆಟ್ಟಿ ಶಿಕ್ಷಣ ಸಂಸ್ಥೆ ಕಾರ್ಯಾಧ್ಯಕ್ಷ ರತ್ನಾಕರ್ ಶೆಟ್ಟಿ ಮುಂಡ್ಕೂರು, ಸಾಂತಕ್ರೂಸ್ ಪೂರ್ವದ ಶ್ರೀಮಂತ್ರದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ  ವಾಸುದೇವ ಬಂಜನ್,ಉದ್ಯಮಿ ಬಾಲಕೃಷ್ಣ ಶೆಟ್ಟಿ ಉಳೆಪಾಡಿ,  ಕುಲಾಲ ಸಂಘ ಮುಂಬೈ ಚರ್ಚ್ ಗೇಟ್- ದಹಿಸರ್ ಸ್ಥಳೀಯ ಸಮಿತಿಯ ಕಾರ್ಯದರ್ಶಿ ಸತೀಶ್ ಬಂಗೇರ, , ಸಾಪಲ್ಯ ಸೇವಾ ಸಂಘ ಮುಂಬೈಯ ಅಧ್ಯಕ್ಷ ಶ್ರೀನಿವಾಸ್  ಸಾಪಲ್ಯ, ಟೆಂಡರ್ ಫ್ರೆಶ್ ಐಸ್ಕ್ರೀಂಮ್ ಸಂಸ್ಥೆಯ ನಿರ್ದೇಶಕಿ ಉಷಾ ವಿ ಶೆಟ್ಟಿ , ಗೊರೆಗಾವ್ ಪೂರ್ವದ ನಿತ್ಯಾನಂದ ಡೈಸ್& ಟೂಲ್ಸ್ ಆಡಳಿತ ನಿರ್ದೇಶಕ  ಶ್ರೀಧರ್ ಮೂಲ್ಯ ಇವರು ಪಾಲ್ಗೊಳ್ಳಲಿದ್ದಾರೆ, 

ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃಸಂಘ ಮಂಗಳೂರು ಇದರ  ಅಧ್ಯಕ್ಷರಾಗಿ ಮರು ಆಯ್ಕೆಯಾದ ಮಯೂರ್   ಉಲ್ಲಾಳ್ , ಮತ್ತು ಸಂಘದ ಆಡಳಿತಗೆ ಒಳಪಟ್ಟ   ಶ್ರೀ ದೇವಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ಸದಾಶಿವ ಕುಲಾಲ್ ಮತ್ತು 
ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ  ಸೇವಾದಳದ  ದಳಪತಿ ಪ್ರದೀಪ್ ಅತ್ತಾವರ್ ಇವರನ್ನು ಸನ್ಮಾನಿಸಲಾಗುವುದು ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಸುರೇಶ್ ಕುಲಾಲ್ ಮಂಗಳದೇವಿ, ಟ್ರಸ್ಟಿಗಳಾದ ಮಾಸ್ಟರ್ ಬಿ. ಸೀತಾರಾಮ ಕುಲಾಲ್. ನ್ಯಾಯವಾದಿ ಲಕ್ಷ್ಮಣ್ ಕುಂದರ್ ಬಿ ನಾಗೇಶ್ ಕುಲಾಲ್. ದಿನೇಶ್ ಕುಲಾರ್, ಪ್ರೇಮಾನಂದ ಕುಲಾಲ್ ಪತ್ರಿಕಾ ಪ್ರಕಟಣೆಗೆ ತಿಳಿಸಿದ್ದಾರೆ.

Related posts

ಕರ್ನಾಟಕ ಸಮಾಜ ಸೂರತ್ : ನ. 24ರಂದು ಕರ್ನಾಟಕ ರಾಜ್ಯೋತ್ಸವ

Mumbai News Desk

ಸೆ. 15 ರಂದು ಕನ್ನಡಿಗರ ಸ್ನೇಹ ಬಳಗ ಟ್ರಸ್ಟ್ ಡೊಂಬಿವಲಿಯ ಉದ್ಘಾಟನಾ ಕಾರ್ಯಕ್ರಮ.

Mumbai News Desk

ಭಾಯಂದರ ಶ್ರೀ  ಮೂಕಾಂಬಿಕಾ ಶಾಂತ ದುರ್ಗೆಗೆ ದೇವಸ್ಥಾನ, ಎ 14 ರಂದು ವಾರ್ಷಿಕ ಮಹಾಪೂಜೆ,

Mumbai News Desk

ಅ. 20 ರಂದು ಮದರ್ ಇಂಡಿಯಾ ಹಳೆ ವಿದ್ಯಾರ್ಥಿಗಳ ಪೌಂಡೇಶನಿನ ಮಹಾಸಭೆ, ಸ್ನೇಹ ಮಿಲನ

Mumbai News Desk

ಮೀರಾರೋಡ್, ಜ: 11: ಬಂಟ್ಸ್ ಫೋರಂ ಮೀರಾ-ಬಾಯಂಧರ್ ಇದರ ಮಹಿಳಾ ಸಮಿತಿಯ ವಾರ್ಷಿಕ ಭಜನಾಮಂಗಳೋತ್ಸವ ಕಾರ್ಯಕ್ರಮ

Mumbai News Desk

ಮಾ. 8 ರಂದು ಜಗಜ್ಯೋತಿ ಕಲಾವೃಂದ ಕಚೇರಿಯಲ್ಲಿ ಮಹಾಶಿವರಾತ್ರಿ ಪೂಜೆ

Mumbai News Desk