April 2, 2025
ಸುದ್ದಿ

ಜೋಡು ಜೀಟಿಗೆ” ಪೌರಾಣಿಕ ನಾಟಕದ ಪ್ರಥಮ ಪ್ರದರ್ಶನ, ನಾಟಕದ ಮೂಲಕ ಧರ್ಮ ಜಾಗೃತಿಗೊಳ್ಳಲಿ :, ಐಕಳ ಹರೀಶ್ ಶೆಟ್ಟಿ

ಮಂಗಳೂರು ನ 21. ಸಾಯಿಶಕ್ತಿ ಕಲಾ ಬಳಗದ ವತಿಯಿಂದ ಮಂಗಳೂರಿನ ಪುರಭವನದಲ್ಲಿ *”ಜೋಡು ಜೀಟಿಗೆ” ಪೌರಾಣಿಕ ಕಥಾಭಾಗದ ಪ್ರಥಮ ಪ್ರದರ್ಶನದ ಉದ್ಘಾಟನೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಅವರು
ಪೌರಾಣಿಕ ನಾಟಕಗಳಿಂದಾಗಿ ಕಲಾಭಿಮಾನಿಗಳು ಧರ್ಮದ ಜಾಗೃತಿಯಲ್ಲಿ ನಡೆಯಲು ಸಾಧ್ಯವಾಗಲಿ. ನಾಟಕ ಕಲಾಪ್ರೇಕ್ಷಕರ ಮನಸ್ಸನ್ನು ಗೆಲ್ಲುವಂತಾಗಲಿ. ನಿರಂತರ ಪ್ರದರ್ಶನಗೊಂಡು ಕಲಾವಿದರಿಗೆ ಹೆಚ್ಚು ಅವಕಾಶ ಲಭಿಸುವಂಥಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿ ಹಾಗೂ ಚಂದ್ರಿಕಾ ಐಕಳ ಹರೀಶ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.*
ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಶಿರಿಡಿ ಸಾಯಿಬಾಬಾ ಮಂದಿರದ ಟ್ರಸ್ಟಿ ಬಿಪಿನ್ ದಾಸ್ ಖೋಲೆ, ಹರೀಶ್ ಆರಿಕೋಡಿ, ಜೆ. ಆರ್. ಲೋಬೊ, ವಿಶ್ವಾಸ್ ದಾಸ್, ಲಾವಣ್ಯ ವಿಶ್ವಾಸ್ ದಾಸ್, ಕವಿತಾ ಐವನ್ ಡಿಸೋಜ, ಮಲ್ಲಿಕಾ ಪಕ್ಕಳ, ಕರ್ನೂರು ಮೋಹನ್ ರೈ, ದಿನೇಶ್ ರಾವ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಉದ್ಘಾಟನೆ ಬಳಿಕ ಲಾವಣ್ಯ ವಿಶ್ವಾಸ್ ದಾಸ್ ನಿರ್ಮಾಣದ,ಕೀರ್ತನ್ ಭಂಡಾರಿ, ಕುಳಾಯಿ ರಚಿಸಿರುವ,ಬಿ.ಎಸ್.ಕಾರಂತ್ ಇಂಚರ ಇವರು ಸಂಗೀತ ನಿರ್ದೇಶನದ,ಗೌರವ್ ಶೆಟ್ಟಿಗಾರ್ ಮಠದಕಣಿ ನಿರ್ವಹಣೆಯ,ಸಾಯಿಶಕ್ತಿ ಕಲಾ ಬಳಗದ ಕಲಾವಿದರು ಅಭಿನಯಿಸಿದ ಜೋಡು ಜೀಟಿಗೆ” ಪೌರಾಣಿಕ ನಾಟಕದ
ಪ್ರಥಮ ಪ್ರದರ್ಶನ ನಡೆಯಿತು,

Related posts

ಮುಂಬಯಿಯ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಯಿಂದ ತುಳುನಾಡಿನ ವಿವಿಧ ಪುಣ್ಯ ಕ್ಷೇತ್ರ ಗಳಲ್ಲಿ ಭಜನಾ ಕಾರ್ಯಕ್ರಮ.

Mumbai News Desk

ಕರಾವಳಿ ಜಿಲ್ಲೆಗಳಿಗೆ ನಿರಂತರ ವಿದ್ಯುತ್ ಪೂರೈಸಲು ಜಯಶ್ರೀಕ್ರಷ್ಣ ಪರಿಸರ ಪ್ರೇಮಿ ಸಮಿತಿ ಉಪಮುಖ್ಯಮಂತ್ರಿಗಳಿಗೆ ಮನವಿ

Mumbai News Desk

ಯಕ್ಷಗಾನ ತಾಳಮದ್ದಳೆ ಸಪ್ತಾಹ ಉದ್ಘಾಟನೆ –  ಯಕ್ಷಾಂಗಣ ರಾಜ್ಯೋತ್ಸವ ಪುರಸ್ಕಾರ ಪ್ರದಾನ

Mumbai News Desk

ಕುಲಾಲ ಸಂಘ ಮುಂಬೈ  ಅಧ್ಯಕ್ಷರಾಗಿ ಮರು ಆಯ್ಕೆಗೊಂಡ   ರಘು ಮೂಲ್ಯ ಪಾದೆಬೆಟ್ಟು ಅವರಿಗೆ ಮಂಗಳೂರುನಲ್ಲಿ  ಗೌರವ,

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟಕ್ಕೆ ಪೋಷಕ   ಸದಸ್ಯರಾಗಿ ಗಣೇಶ್ ಶೆಟ್ಟಿ ತನಿಷ್ಕ, ಮತ್ತು ಹರೀಶ್ ಶೆಟ್ಟಿ ಪಡುಕುದ್ರು ಇವರು ಸೇರ್ಪಡೆ

Mumbai News Desk

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ್ ರಾವ್ ನಿಧನ

Mumbai News Desk