September 6, 2026
Mumbai News Kannada
ಸುದ್ದಿ

ಜೋಡು ಜೀಟಿಗೆ” ಪೌರಾಣಿಕ ನಾಟಕದ ಪ್ರಥಮ ಪ್ರದರ್ಶನ, ನಾಟಕದ ಮೂಲಕ ಧರ್ಮ ಜಾಗೃತಿಗೊಳ್ಳಲಿ :, ಐಕಳ ಹರೀಶ್ ಶೆಟ್ಟಿ





ಮಂಗಳೂರು ನ 21. ಸಾಯಿಶಕ್ತಿ ಕಲಾ ಬಳಗದ ವತಿಯಿಂದ ಮಂಗಳೂರಿನ ಪುರಭವನದಲ್ಲಿ *”ಜೋಡು ಜೀಟಿಗೆ” ಪೌರಾಣಿಕ ಕಥಾಭಾಗದ ಪ್ರಥಮ ಪ್ರದರ್ಶನದ ಉದ್ಘಾಟನೆಯನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿಯವರು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಐಕಳ ಹರೀಶ್ ಶೆಟ್ಟಿ ಅವರು
ಪೌರಾಣಿಕ ನಾಟಕಗಳಿಂದಾಗಿ ಕಲಾಭಿಮಾನಿಗಳು ಧರ್ಮದ ಜಾಗೃತಿಯಲ್ಲಿ ನಡೆಯಲು ಸಾಧ್ಯವಾಗಲಿ. ನಾಟಕ ಕಲಾಪ್ರೇಕ್ಷಕರ ಮನಸ್ಸನ್ನು ಗೆಲ್ಲುವಂತಾಗಲಿ. ನಿರಂತರ ಪ್ರದರ್ಶನಗೊಂಡು ಕಲಾವಿದರಿಗೆ ಹೆಚ್ಚು ಅವಕಾಶ ಲಭಿಸುವಂಥಾಗಲಿ ಎಂದು ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಐಕಳ ಹರೀಶ್ ಶೆಟ್ಟಿ ಹಾಗೂ ಚಂದ್ರಿಕಾ ಐಕಳ ಹರೀಶ್ ಶೆಟ್ಟಿ ದಂಪತಿಯನ್ನು ಸನ್ಮಾನಿಸಲಾಯಿತು.*
ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಶಿರಿಡಿ ಸಾಯಿಬಾಬಾ ಮಂದಿರದ ಟ್ರಸ್ಟಿ ಬಿಪಿನ್ ದಾಸ್ ಖೋಲೆ, ಹರೀಶ್ ಆರಿಕೋಡಿ, ಜೆ. ಆರ್. ಲೋಬೊ, ವಿಶ್ವಾಸ್ ದಾಸ್, ಲಾವಣ್ಯ ವಿಶ್ವಾಸ್ ದಾಸ್, ಕವಿತಾ ಐವನ್ ಡಿಸೋಜ, ಮಲ್ಲಿಕಾ ಪಕ್ಕಳ, ಕರ್ನೂರು ಮೋಹನ್ ರೈ, ದಿನೇಶ್ ರಾವ್ ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.
ಉದ್ಘಾಟನೆ ಬಳಿಕ ಲಾವಣ್ಯ ವಿಶ್ವಾಸ್ ದಾಸ್ ನಿರ್ಮಾಣದ,ಕೀರ್ತನ್ ಭಂಡಾರಿ, ಕುಳಾಯಿ ರಚಿಸಿರುವ,ಬಿ.ಎಸ್.ಕಾರಂತ್ ಇಂಚರ ಇವರು ಸಂಗೀತ ನಿರ್ದೇಶನದ,ಗೌರವ್ ಶೆಟ್ಟಿಗಾರ್ ಮಠದಕಣಿ ನಿರ್ವಹಣೆಯ,ಸಾಯಿಶಕ್ತಿ ಕಲಾ ಬಳಗದ ಕಲಾವಿದರು ಅಭಿನಯಿಸಿದ ಜೋಡು ಜೀಟಿಗೆ” ಪೌರಾಣಿಕ ನಾಟಕದ
ಪ್ರಥಮ ಪ್ರದರ್ಶನ ನಡೆಯಿತು,



Related posts

ಹೈದರಾಬಾದ್ ಹೊರವಲಯದಲ್ಲಿ ರೈಲ್ವೆ ಹಳಿ ಮೇಲೆ ಕಿಯಾ ಸೋನೆಟ್ ಕಾರನ್ನು 8 ಕಿಲೋಮೀಟರ್ ಓಡಿಸಿದ ಮಹಿಳೆ, ರೈಲು ಸಂಚಾರ ಸ್ಥಗಿತ.

Mumbai News Desk

ಬೊಯಿಸರ್ : ಸದ್ಗುರು ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  63 ನೇ ಪುಣ್ಯತಿಥಿ ಆಚರಣೆ.

Mumbai News Desk

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು

Mumbai News Desk

ಅವಧಿಗೂ ಮೊದಲೇ ಮುಂಬೈಗೆ ಮಾನ್ಸೂನ್ ಪ್ರವೇಶ : 107 ವರ್ಷಗಳ ದಾಖಲೆ ಮುರಿದ ಮಳೆ.

Mumbai News Desk

ಉಡುಪಿ : ಕಟಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್‌ಪಿಜಿ ಟ್ಯಾಂಕರ್ ಮಗುಚಿ ಆತಂಕ: ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯಾಚರಣೆಯಿಂದ ತಪ್ಪಿದ ಭಾರಿ ಅನಾಹುತ

Mumbai News Desk

ಮೀರಾ ರೋಡ್: ಅಪ್ಪಿ ಸಂಜೀವ ಪಾಲನ್ ನಿಧನ

Mumbai News Desk