34.2 C
Karnataka
March 29, 2025
ಕರ್ನಾಟಕ

ಕರ್ನಾಟಕ ವಿಧಾನಸಭಾ ಉಪಚುನಾವಣೆ – ಮೂರೂ ಕ್ಷೇತ್ರಗಳ್ಳಲ್ಲಿ ಕಾಂಗ್ರೇಸ್ ಭರ್ಜರಿ ಜಯ

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಮತದಾನ ನಡೆದಿದ್ದು, ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿ ಜಯಗಳಿಸಿದ್ದಾರೆ.
ಇಡೀ ದೇಶದ ಗಮನಸೆಳೆದಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಸಿಪಿ ಯೋಗೇಶ್ವರ್ ಅವರಿಗೆ ಗೆಲುವಾಗಿದ್ದು, ನಿಖಿಲ್ ಕುಮಾರಸ್ವಾಮಿ ಅವರು ಸೋತಿದ್ದಾರೆ . ಇದು ನಿಖಿಲ್ ಕುಮಾರಸ್ವಾಮಿ ಅವರ ಮೂರನೆ ಸೋಲಾಗಿದೆ.
ಸಂಡೂರು ಕ್ಷೇತ್ರ ಉಪಚುನಾವಣೆ ವ್ಯಕ್ತಿ ಪ್ರತಿಷ್ಠೆಗೆ ಸಾಕ್ಷಿಯಾಗಿದ್ದು, ಇದೀಗ ಫಲಿತಾಂಶ ಪ್ರಕಟವಾಗಿದ್ದು ಸಂಸದ ಇ ತುಕಾರಾಂ ಅವರ ಪತ್ನಿ ಅನ್ನಪೂರ್ಣ ತುಕಾರಾಂ ಅವರಿಗೆ ಗೆಲುವಾಗಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತ ಅವರು ಪರಭವಗೊಂಡಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಾಣವಾಗಿದ್ದ ಶಿಗ್ಗಾಂವಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ನ ಯಾಸಿರ್ ಅಹಮದ್ ಖಾನ್ ಪಠಾಣ್ ಅವರು ಬಿಜೆಪಿಯ ಭರತ್ ಬೊಮ್ಮಯಿ ವಿರುದ್ಧ ಗೆಲುವು ಸಾಧಿಸಿದ್ದಾರೆ.
ಎಲ್ಲಾ ಮೂರೂ ಕ್ಷೇತ್ರಗಳಲ್ಲಿ ಆಡಳಿತರೂಢ ಕಾಂಗ್ರೆಸ್ ಮೇಲುಗೈ ಸಾಧಿಸಿದ್ದು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟಕ್ಕೆ ಭಾರಿ ಹಿನ್ನಡೆ ಉಂಟಾಗಿದೆ.

Related posts

ಕರ್ನಾಟಕದಲ್ಲಿ ನಾಳೆಯಿಂದ ಜೂನ್ 6ರ ವರೆಗೆ ಮದ್ಯ ಮಾರಾಟ ಬಂದ್

Mumbai News Desk

ಬೆಂಗಳೂರು: ನಗರದ ತಾಪಮಾನ ತಗ್ಗಿಸಿದ ಮಾರ್ಚ್ ತಿಂಗಳ ಮೊದಲ ಮಳೆ

Mumbai News Desk

ಕರ್ನಾಟಕ : ರಾಜ್ಯದಲ್ಲಿ ವಿದ್ಯುತ್ ದರ ಹೆಚ್ಚಳ, ಜನರಿಗೆ ಮತ್ತೆ ಶಾಕ್ ನೀಡಿದ ಸರಕಾರ

Mumbai News Desk

ಜೆಸಿಐ ವಲಯ 15ರ ವಲಯಾಧ್ಯಕ್ಷರಾಗಿ ಗಿರೀಶ್ ಎಸ್ ಪಿ ಆಯ್ಕೆ

Mumbai News Desk

ಸಿದ್ದರಾಮಯ್ಯ ಸರ್ಕಾರದ ಮೊದಲ ವಿಕೆಟ್​ ಪತನ: ನಾಗೇಂದ್ರ ರಾಜಿನಾಮೆಗೆ ಸಿಎಂ ಸೂಚನೆ

Mumbai News Desk