July 23, 2026
Mumbai News Kannada
ಪ್ರಕಟಣೆ

ಡಿ.1ರಂದು ಕರ್ನಾಟಕ ಸಂಘ ಡೊಂಬಿವಲಿ : ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ನಾಡಹಬ್ಬ.







ಹೊರನಾಡ ಕನ್ನಡಿಗರ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಒಂದಾದ ಕರ್ನಾಟಕ ಸಂಘ ಡೊಂಬಿವಲಿಯ ಲಲಿತ ಕಲಾ ಹಾಗೂ ಮಹಿಳಾ ವಿಭಾಗದ ವತಿಯಿಂದ ನಾಡ ಹಬ್ಬ ಕಾರ್ಯಕ್ರಮ ಡಿ.1ರಂದು ಮಧ್ಯಾಹ್ನ 3-30 ರಿಂದ ಡೊಂಬಿವಲಿ ಪೂರ್ವದ ಎಂ ಆಯ್ ಡಿ ಸಿ ಪರಿಸರದ ಹೊಟೇಲ್ ಶಿವಂ ಸಭಾಗೃಹದಲ್ಲಿ ನಡೆಯಲಿದೆ.           

  ಸಮಾರಂಭದ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷರಾದ ಸುಕುಮಾರ ಎನ್ ಶೆಟ್ಟಿ ವಹಿಸಲಿದ್ದು, ಸಂಘದ ಕಾರ್ಯಾಧ್ಯಕ್ಷ ಡಾ ಇಂದ್ರಾಳಿ ದಿವಾಕರ ಶೆಟ್ಟಿ ಅವರು ನಾಡಹಬ್ಬ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. 

ಕಾರ್ಯಕ್ರಮಕ್ಕೆ  ಮುಖ್ಯ ಅತಿಥಿಗಳಾಗಿ ಕನ್ನಡ ಕಲಾ ಕೇಂದ್ರ ಮುಂಬಯಿಯ ಅಧ್ಯಕ್ಷರಾದ  ಮಧುಸೂದನ ಟಿ.ಆರ್ ಹಾಗೂ ಕನ್ನಡ ಸಂಘ ಸಾಂತಾಕ್ರೂಜ್ ಮುಂಬಯಿಯ ಇದರ ಅಧ್ಯಕ್ಷೆ  ಸುಜಾತಾ ರಾಮಣ್ಣ ಶೆಟ್ಟಿ ಆಗಮಿಸಲಿದ್ದಾರೆ.                                                       

 ಇದೆ ಸಂದರ್ಭದಲ್ಲಿ ಸಂಘದ ಮಹಿಳಾ ವಿಭಾಗದ ವತಿಯಿಂದ ಕನ್ನಡ ನಾಡು ನುಡಿ ಹಾಗೂ ನಮ್ಮ ಸಂಸ್ಕೃತಿಯನ್ನು ಪರಿಚಯಿಸುವ ವೈವಿಧ್ಯಮಯ ನೃತ್ಯ ವೈಭವ ಕಾರ್ಯಕ್ರಮ ಜರುಗಲಿದ್ದು ಸರ್ವ ತುಳು- ಕನ್ನಡಿಗರು  ಈ ನಾಡ ಹಬ್ಬ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮ ವನ್ನು ಯಶಸ್ವಿ ಗೋಳಿಸಬೇಕೆಂದು ಸಂಘದ ಉಪಾಧ್ಯಕ್ಷರಾದ ಲೋಕನಾಥ ಎ ಶೆಟ್ಟಿ, ಉಪಕಾರ್ಯಾಧ್ಯಕ್ಷರಾದ ದೇವದಾಸ್ ಕುಲಾಲ್. ಗೌ.ಕಾರ್ಯದರ್ಶಿ ಪ್ರೋ.ಅಜೀತ ಉಮರಾಣಿ,  ಕೋಶಾಧಿಕಾರಿ ತಾರಾನಾಥ ಎಸ್ ಅಮೀನ್ ಜಿತೆ ಕಾರ್ಯದರ್ಶಿ ದಿನೇಶ್ ಕುಡ್ವ, ಜತೆ ಕೋಶಾಧಿಕಾರಿ  ವಿಮಲಾ ವಿ ಶೆಟ್ಟಿ.ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ  ಆಶಾ ಎಲ್ ಶೆಟ್ಟಿ. ಉಪಕಾರ್ಯಾಧ್ಯಕ್ಷೆ ಯೋಗಿನಿ ಎಸ್ ಶೆಟ್ಟಿ, ಕಾರ್ಯದರ್ಶಿ ಮಧುರಿಕಾ ಬಂಗೆರಾ. ಲಲಿತಕಲಾ ವಿಭಾಗದ ಕಾರ್ಯಾಧ್ಯಕ್ಷೆ ಸುಷ್ಮಾ ಡಿ ಶೆಟ್ಟಿ, ಕಾರ್ಯದರ್ಶಿ ರಮೇಶ್ ಅಚ್ಚಣ್ಣ ಶೆಟ್ಟಿ ಹಾಗೂ ಸಂಘದ  ಕಾರ್ಯಕಾರಿ ಸಮುತಿಯ ಸರ್ವ ಸದಸ್ಯರು, ಮಹಿಳಾ ವಿಭಾಗ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.



Related posts

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬೈ : ಜ. 4ರಂದು, 80ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು – ಮಾ. 6ಕ್ಕೆ ಸ್ತನಪಾನ ಕೊಠಡಿ ಉದ್ಘಾಟನೆ

Mumbai News Desk

ಜ. 12. ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಕೋಟಿ -ಚೆನ್ನಯ ಕ್ರೀಡೋತ್ಸವ

Mumbai News Desk

ಕರ್ನಾಟಕ ಸಮಾಜ ಸೂರತ್ : ಜೂ29 ತುಳು ಪರ್ಬ”, ಸಾಧಕರಿಗೆ ಸನ್ಮಾನ, ನೃತ್ಯ‌, ತುಳು ನಾಟಕ.

Mumbai News Desk

ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ ಫೌಂಡೇಶನ್ ಸಾಯನ್ – ಕೋಲಿವಾಡ, ಡಿ  25.ರಂದು 21ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಗುರುವಂದನೆ.

Mumbai News Desk

ಫೆ. 08 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ನಾಲ್ಕನೇ ವರ್ಷದ ರಕ್ತದಾನ ಶಿಬಿರ.

Mumbai News Desk