30.5 C
Mumbai
June 8, 2026
Mumbai News Kannada
ಮುಂಬಯಿ

ಮುಂಬಯಿ ಕನ್ನಡ ಸಂಘದ ವತಿಯಿಂದ ಕನ್ನಡ ಮಾಧ್ಯಮದ ಮಕ್ಕಳಿಗೆ ಧನ ಸಹಾಯ ವಿತರಣೆ





ಮಾಟುಂಗಾ [ಪೂರ್ವ]ದ ಮುಂಬಯಿ ಕನ್ಡಡ ಸಂಘದ ವತಿಯಂದ ಪ್ರತಿ ವರ್ಷವೂ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ಮುಂಬಯಿಯ ಕನ್ನಡ ಮಾಧ್ಯಮದ ಒಂದು ಶಾಲೆಗೆ ಧನ ಸಹಾಯವನ್ನು ನೀಡಲಾಗುತ್ತಿದ್ದು ಈ ವರ್ಷ ಇದಕ್ಕಾಗಿ ಮುಂಬಯಿಯ ಪಶ್ಚಿಮ ಉಪನಗರದ ಖಾರ್‌ ದಾಂಡಾದ ಮುನಿಸಿಪಲ್‌ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯನ್ನು ಆಯ್ಕೆ ಮಾಡಲಾಗಿದೆ.

ಮುಂಬಯಿ ಕನ್ನಡ ಸಂಘದ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್‌.ಕರ್ಕೇರ, ಜೊತೆ ಕಾರ್ಯದರ್ಶಿ ಮಲ್ಲಿಕಾರ್ಜುನ ಬಡಿಗೇರ ಹಾಗೂ ಸಮಿತಿ ಸದಸ್ಯ ನಾರಾಯಣ ರಾವ್‌ ಈ ಧನ ಸಹಾಯದ ಹಣವನ್ನು ಶಾಲೆಯ ಹಿರಿಯ ಶಿಕ್ಷಕ ಶಿವಾನಂದ ಪೋದ್ದಾರ ಇವರಿಗೆ ಹಸ್ತಾಂತರಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ಪ್ರತಿಭಾಶಾಲಿ ವಿದ್ಯಾರ್ಥಿನಿ ಅದಿತಿ ಪವಾರ್‌ರಿಗೆ ಸೋಮನಾಥ ಎಸ್‌.ಕರ್ಕೇರ ಮತ್ತು ವಿಧ್ಯಾರ್ಥಿ ಸಚಿನ್‌ ಚವಾಣ್‌ರಿಗೆ ಮಲ್ಲಿಕಾರ್ಜುನ ಬಡಿಗೇರರ ವತಿಯಿಂದ ಪ್ರೋತ್ಸಾಹಕ ಧನವನ್ನು ಕೂಡಾ ನೀಡಲಾಯ್ತು. ಬಳಿಕ ಶಾಲೆಯ ಸ್ಥಿತಿಗತಿಯ ಬಗ್ಗೆ ಶಿಕ್ಷಕರೊಂದಿಗೆ ಚರ್ಚಿಸಲಾಯ್ತು.



Related posts

ಮುಂಬೈ: ಬೋರಿವಲಿ ಶ್ರೀ ಜಗದೇಶ್ವರಿ ಸನ್ನಿಧಿಯಲ್ಲಿ ಬ್ರಹ್ಮಕಲಶ ಸಂಭ್ರಮ ಸಂಪನ್ನ

Mumbai News Desk

ಮುಂಬೈ : ಭಾಂಡುಪ್‌ನಲ್ಲಿ ಪಾದಚಾರಿಗಳಿಗೆ ಬೆಸ್ಟ್ ಬಸ್ ಡಿಕ್ಕಿ ಹೊಡೆದ ಪರಿಣಾಮ 4 ಸಾವು, 8 ಜನರಿಗೆ ಗಾಯ

Mumbai News Desk

ಶ್ರೀಮದ್ಭಾರತ ಮಂಡಳಿಯ ವಾರ್ಷಿಕ ಮಂಗಳೋತ್ಸವ : ಜಗನಾಥ ಆರ್ ಕಾಂಚನ್ ಗೆ ಅತ್ಯುತ್ತಮ ಕಾರ್ಯಕರ್ತ ಪುರಸ್ಕಾರ.

Mumbai News Desk

ಕರ್ನಾಟಕ ಸಂಘ ಡೊಂಬಿವಲಿ ಮಹಿಳಾ ವಿಭಾಗದಿಂದ ಮಹಿಳಾ ದಿನಾಚರಣೆ ಅಚರಣೆ

Mumbai News Desk

ಚಿತ್ರಾಪು ಬಿಲ್ಲವರ ಸಂಘ ಮುಂಬಯಿಯ 80ನೇ ವಾರ್ಷಿಕ ಮಹಾಸಭೆ

Mumbai News Desk

ಸಾಂತಾಕ್ರೂಜ್ ಪೇಜಾವರ ಮಠದಲ್ಲಿ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿಯವರ 4 ಯ ಆರಾಧನ ಮಹೋತ್ಸವ.

Mumbai News Desk