30.5 C
Mumbai
June 8, 2026
Mumbai News Kannada
ಪ್ರಕಟಣೆ

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, ಡಿ. 1ರಂದು 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ,





ಮುಂಬಯಿ ಉಪನಗರ ದಹಿಸರ್ ಪೂರ್ವದ ಸಮಾಜಸೇವಕ, ಧಾರ್ಮಿಕ ಚಿಂತಕ ಶ್ರೀ ಜಯ ಸ್ವಾಮಿ ದಹಿಸರ್, ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ ಡಿ.1 ರಂದು ರವಿವಾರ 18ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾ ಪೂಜೆಯು ರಾಧಾಕೃಷ್ಣ ಮಂದಿರ ಹಾಲ್, ಸೈಂಟ್ ಥಾಮಸ್ ಸ್ಕೂಲ್ ಬಳಿ, ರಾವಲ್ಪಾಡ, ದಹಿಸರ್ ಪೂರ್ವ ಇಲ್ಲಿ ಶ್ರೀ ಚಂದ್ರಹಾಸ ಗುರುಸ್ವಾಮಿ ಇನ್ನಂಜೆ, ಅಂಧೇರಿ ಇವರ ಮಾರ್ಗದರ್ಶನದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ ಗಂಟೆ 5:30 ಕ್ಕೆ ಮಹಾ ಗಣಪತಿ ಹೋಮ, 7:30ಕ್ಕೆ ಪ್ರಾಣಪ್ರತಿಷ್ಠೆ, ಪೂಜೆ, ಅರ್ಚನೆ, 8:00 ರಿಂದ 9:00ರ ತನಕ ನಾರಾಯಣಿಯಂ, ಕೇರಳ ಗ್ರೂಪ್ ದಹಿಸರ್ ಇವರಿಂದ, 10:00 ರಿಂದ 12:30ರ ತನಕ ಭಜನೆ – ಶ್ರೀದುರ್ಗಾಪರಮೇಶ್ವರಿ ಶನೀಶ್ವರ ದೇವಸ್ಥಾನ ರಾವಾಲ್ವಾಡ, ದಹಿಸರ್ ಪೂರ್ವ ಇವರಿಂದ

12:30 ರಿಂದ 1:00ರ ತನಕ ದೀಪಾರಾಧನೆ, ಮಹಾ ಪೂಜೆಯನ್ನು ಶ್ರೀ ಚಂದ್ರಹಾಸ್‌ ಗುರುಸ್ವಾಮಿಯವರು ನಡೆಸಲಿದ್ದಾರೆ. ಬಳಿಕ ತೀರ್ಥಪ್ರಸಾದ
ವಿತರಣೆ ನಡೆಯಲಿದೆ. 1:00ರಿಂದ 3:00ರ ತನಕ ಸಾರ್ವಜನಿಕ ಅನ್ನದಾನ ಸೇವೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರೆಲ್ಲರೂ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು, ಗುಂಡ್ಯಡ್ಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ನಂ.- 9902581150, 8452054984 ಕ್ಕೆ ಸಂಪರ್ಕಿಸಬಹುದು.



Related posts

ಸಾರ್ವಜನಿಕ ಶ್ರೀ ಶನೀಶ್ವರ ಸೇವಾ ಸಮಿತಿ ವಸಯಿ ಇದರ ಬೆಳ್ಳಿ ಹಬ್ಬದ ಸಲುವಾಗಿ ಜ.14 ರಂದು ಸಾರ್ವಜನಿಕ ಭಜನಾ ಕಾರ್ಯಕ್ರಮ

Mumbai News Desk

ನವೆಂಬರ್ 23ರಿಂದ ಸತತ 17ನೇ ವರ್ಷದ ಮುಂಬಯಿ ಪ್ರವಾಸದಲ್ಲಿ ಕರಾವಳಿಯ ಪ್ರಸಿದ್ಧ ನಾಟಕ ತಂಡಕಿನ್ನಿಗೋಳಿ

Mumbai News Desk

ಜ 22: ಯಕ್ಷ ಪ್ರಿಯ ಬಳಗ ಮೀರಾ ಭಯಂದರ್ ಇದರ ವತಿಯಿಂದ* ಶ್ರೀ ರಾಮ*  ಯಕ್ಷಗಾನ

Mumbai News Desk

ನವೆಂಬರ್ 28 ರಿಂದ ಬೊಯಿಸರ್ ನಲ್ಲಿ ತುಂಗಾ ಪ್ರೀಮಿಯರ್ ಲೀಗ್ ಅಖಿಲ ಭಾರತೀಯ ವೈದ್ಯರ ಕ್ರಿಕೆಟ್ ಟೂರ್ನಮೆಂಟ್ ಆರಂಭ

Mumbai News Desk

ಶ್ರೀ ಕ್ಷೇತ್ರ ಕಾಂತವರ : ಜ. 14ರಿಂದ ವರ್ಷಾವಧಿ ಜಾತ್ರೆ

Mumbai News Desk

ಸಿದ್ದಿವಿನಾಯಕನ ಕ್ಷೇತ್ರದ *ಶ್ರೀ ಹಟ್ಟಿಯಂಗಡಿ ಮೇಳದ* 10 ನೇ. ವರ್ಷದ ಮುಂಬಯಿ  ತಿರುಗಾಟ – ಜುಲೈ 13 ರಿಂದ. 15 ವರೆಗೆ ಪೂನಾ, ಮುಂಬಯಿ  ಮಹಾನಗರದಲ್ಲಿ ಯಕ್ಷಗಾನ.

Mumbai News Desk