32 C
Mumbai
April 24, 2026
Mumbai News Kannada
ಪ್ರಕಟಣೆ

ದಹಿಸರ್ ಪೂರ್ವ :ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ, ಡಿ. 1ರಂದು 18ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ,





ಮುಂಬಯಿ ಉಪನಗರ ದಹಿಸರ್ ಪೂರ್ವದ ಸಮಾಜಸೇವಕ, ಧಾರ್ಮಿಕ ಚಿಂತಕ ಶ್ರೀ ಜಯ ಸ್ವಾಮಿ ದಹಿಸರ್, ಅತ್ತೂರು ಗುಂಡ್ಯಡ್ಕ ಇವರ ಆಯೋಜನೆಯಲ್ಲಿ ಡಿ.1 ರಂದು ರವಿವಾರ 18ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾ ಪೂಜೆಯು ರಾಧಾಕೃಷ್ಣ ಮಂದಿರ ಹಾಲ್, ಸೈಂಟ್ ಥಾಮಸ್ ಸ್ಕೂಲ್ ಬಳಿ, ರಾವಲ್ಪಾಡ, ದಹಿಸರ್ ಪೂರ್ವ ಇಲ್ಲಿ ಶ್ರೀ ಚಂದ್ರಹಾಸ ಗುರುಸ್ವಾಮಿ ಇನ್ನಂಜೆ, ಅಂಧೇರಿ ಇವರ ಮಾರ್ಗದರ್ಶನದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ ಗಂಟೆ 5:30 ಕ್ಕೆ ಮಹಾ ಗಣಪತಿ ಹೋಮ, 7:30ಕ್ಕೆ ಪ್ರಾಣಪ್ರತಿಷ್ಠೆ, ಪೂಜೆ, ಅರ್ಚನೆ, 8:00 ರಿಂದ 9:00ರ ತನಕ ನಾರಾಯಣಿಯಂ, ಕೇರಳ ಗ್ರೂಪ್ ದಹಿಸರ್ ಇವರಿಂದ, 10:00 ರಿಂದ 12:30ರ ತನಕ ಭಜನೆ – ಶ್ರೀದುರ್ಗಾಪರಮೇಶ್ವರಿ ಶನೀಶ್ವರ ದೇವಸ್ಥಾನ ರಾವಾಲ್ವಾಡ, ದಹಿಸರ್ ಪೂರ್ವ ಇವರಿಂದ

12:30 ರಿಂದ 1:00ರ ತನಕ ದೀಪಾರಾಧನೆ, ಮಹಾ ಪೂಜೆಯನ್ನು ಶ್ರೀ ಚಂದ್ರಹಾಸ್‌ ಗುರುಸ್ವಾಮಿಯವರು ನಡೆಸಲಿದ್ದಾರೆ. ಬಳಿಕ ತೀರ್ಥಪ್ರಸಾದ
ವಿತರಣೆ ನಡೆಯಲಿದೆ. 1:00ರಿಂದ 3:00ರ ತನಕ ಸಾರ್ವಜನಿಕ ಅನ್ನದಾನ ಸೇವೆ ನಡೆಯಲಿದೆ. ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರೆಲ್ಲರೂ ಭಾಗವಹಿಸಿ ಪ್ರಸಾದ ಸ್ವೀಕರಿಸಿ ಶ್ರೀ ದೇವರ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಶ್ರೀ ಜಯಸ್ವಾಮಿ ದಹಿಸರ್ ಅತ್ತೂರು, ಗುಂಡ್ಯಡ್ಕ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊ.ನಂ.- 9902581150, 8452054984 ಕ್ಕೆ ಸಂಪರ್ಕಿಸಬಹುದು.



Related posts

ಜೂಲೈ 21 ರಂದು ಬೊಯಿಸರ್ ನ  ಶ್ರೀ ಸ್ವಾಮಿ ನಿತ್ಯಾನಂದ ಮಂದಿರದಲ್ಲಿ  ಗುರುಪೂರ್ಣಿಮೆ ಆಚರಣೆ 

Mumbai News Desk

ವಜ್ರ ಮಹೋತ್ಸವದ ಸಂಭ್ರಮದಲ್ಲಿ ಪಶ್ಚಿಮ ವಿಭಾಗ ಸಾರ್ವಜನಿಕ ನವರಾತ್ರೋತ್ಸವ ಮಂಡಳಿ,

Mumbai News Desk

ಸಾಲಿಯಾನ್ ಆದಿ ಮೂಲಸ್ಥಾನ ಫಲಿಮಾರು : ಮೇ. 3ರಿಂದ ಮೇ 9ರ ತನಕ ನಾಗದೇವರಿಗೆ ಅಶ್ಲೇಷ ಬಲಿ, ನೂತನ ಗೋಪುರ ಸಮರ್ಪಣೆ, ನಾಗದೇವರ ಧರ್ಮದೈವಗಳ ವಾರ್ಷಿಕ ಉತ್ಸವ, ಧರ್ಮದೈವಗಳ ನೇಮೋತ್ಸವ.

Mumbai News Desk

ಡಿ. 17ರಂದು  ಪೊವಾಯಿ  ವಿದೂಶಿ ಗೀತಾ ವೇದ್ (ಸಾಲ್ಯಾನ್) ರ ನಟನಾ ನೃತ್ಯ ಅಕಾಡೆಮಿಯ 11ನೇ ವಾರ್ಷಿಕೋತ್ಸವ

Mumbai News Desk

ಶ್ರೀ ಕೋಡ್ಬಬ್ಬು ದೈವಸ್ಥಾನ ಬಸ್ತಿಪಡ್ಪು, ಹೆಜಮಾಡಿ : ಎ. 3 ಹಾಗೂ ಎ. 4ರಂದು ವಾರ್ಷಿಕ ನೇಮೋತ್ಸವ

Mumbai News Desk

ಕರ್ನಾಟಕ ವಿಶ್ವಕರ್ಮ ಅಸೋಸಿಯೇಶನ್‌ ಮುಂಬೈ : ಜ. 4ರಂದು, 80ನೇ ವಾರ್ಷಿಕೋತ್ಸವ ಸಂಭ್ರಮ

Mumbai News Desk