April 1, 2025
ಮಹಾರಾಷ್ಟ್ರ

ಮಹಾರಾಷ್ಟ್ರ : ಹೊಸ ಸರಕಾರ ರಚನೆಗೆ ಮುಂದುವರಿದ ಕುತೂಹಲ, ದಿಢೀರ್ ಸ್ವಗ್ರಾಮಕ್ಕೆ ಹೊರಟ ಏಕನಾಥ್ ಶಿಂಧೆ


ಮಹಾರಾಷ್ಟ್ರದಲ್ಲಿ ಮಹಾಯುತಿ ಮೈತ್ರಿಕೂಟ ಅಭೂತಪೂರ್ವ ಗೆಲುವು ಸಾಧಿಸಿ ಒಂದು ವಾರ ಕಳೆಯುತ್ತಾ ಬಂದರೂ, ಇನ್ನೂ ಹೊಸ ಹೊಸ ಸರ್ಕಾರ ರಚನೆ ಕಗ್ಗಂಟಾಗಿ ಉಳಿದಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರನ್ನೇ ಅಂತಿಮಗೊಳಿಸಲಾಗಿದೆ ಎನ್ನಲಾಗುತ್ತಿದ್ದರೂ, ಈ ಕುರಿತು ಬಿಜೆಪಿ ನೇತೃತ್ವದ ಮೈತ್ರಿಕೂಟ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ, ಈ ನಡುವೆ ಖಾತೆ ಹಂಚಿಕೆ ಕುರಿತು ನಡೆಯಬೇಕಿದ್ದ ಸಭೆ ರದ್ದಾಗಿರುವುದು ಬಾರಿ ಕುತೂಹಲ ಮೂಡಿಸಿದೆ . ಹಂಗಾಮಿ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರು ಸತಾರಾ ಜಿಲ್ಲೆಯಲ್ಲಿರುವ ತಮ್ಮ ಗ್ರಾಮಕ್ಕೆ ಅನಿರೀಕ್ಷಿತವಾಗಿ ತೆರಳಿರುವುದು ಸಭೆ ರದ್ದಾಗಲು ಕಾರಣ.
ದಿಲ್ಲಿಗೆ ತೆರಳಿದ ಮಹಾಯುತಿಯ ಮೂವರು ಪ್ರಮುಖ ನಾಯಕರಾದ ದೇವೇಂದ್ರ ಪಡ್ನವೀಸ್, ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಗುರುವಾರ ಸಂಜೆ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಅವರ ಜೊತೆ ಸಭೆ ನಡೆಸಿದ್ದರು, ಬಳಿಕ ಮೂವರು ಮುಂಬೈಗೆ ಮರಳಿದ್ದರು. ಈ ಸಭೆ ಬಳಿಕ ಪಡ್ನವೀಸ್ ಅವರೇ ಸಿಎಂ ಅಭ್ಯರ್ಥಿ ಎಂದು ಬಹುತೇಕ ನಿಶ್ಚಿತವಾಗಿದೆ,
ಮುಂಬೈಯಲ್ಲಿ ನಡೆಯಬೇಕಿದ್ದ ಮಹಾಯುತಿ ಮೈತ್ರಿಕೂಟದ ಸಭೆ ರದ್ದಾಗಿದೆ. ಅಲ್ಲದೆ ಏಕನಾಥ್ ಶಿಂಧೆ ನೇತೃತ್ವದ ಶಿವಸೇನಾ ಪಕ್ಷದ ಸಭೆಯನ್ನೂ ರದ್ದುಗೊಳಿಸಲಾಗಿದೆ. ಆದರೆ ಶಿಂಧೆ ಅವರ ದಿಡೀರ್ ಕಾರ್ಯಕ್ರಮದ ಹಿಂದಿನ ವಿವರ ಬಹಿರಂಗವಾಗಿಲ್ಲ. ಸರಕಾರ ರಚನೆಯ ಮಾತುಕತೆಗಳ ವಿಚಾರದಲ್ಲಿ ಶಿಂಧೆ ಅಸಮಾಧಾನಗೊಂಡಿದ್ದಾರೆಯೇ ಎಂಬ ಊಹಾಪೋಹಗಳಿಗೂ ಇದು ಕಾರಣವಾಗಿದೆ.

Related posts

ಬೊಯಿಸರ್ ಸಾರ್ವಜನಿಕ ಗಣೇಶೋತ್ಸವ ಮಂಡಲದ 100 ನೆಯ ವರ್ಷದ ಸಂಭ್ರಮಾಚರಣೆ.

Mumbai News Desk

ಮಾಹಾರಾಷ್ಟ್ರ ವಿಧಾನ ಸಭಾ ಚುನಾವಣೆ : “ಎಣ್ಣೆ” ಪ್ರಿಯರಿಗೆ ವಿಶೇಷ ಮಾಹಿತಿ.

Mumbai News Desk

ಮಹಾರಾಷ್ಟ್ರ: ಫಡ್ನವಿಸ್ ಮಹಾರಾಷ್ಟ್ರದ ನೂತನ ಸಿಎಂ, ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ.

Mumbai News Desk

ಮಹಾರಾಷ್ಟ್ರ ವಿಧಾನಸಭಾ ಚುನಾವಣೆ 58.25% ಮತದಾನ : ​ಮಹಾರಾಷ್ಟ್ರದಲ್ಲಿ ಮತ್ತೊಮ್ಮೆ ಅಧಿಕಾರಕ್ಕೇರುತ್ತಾ ಬಿಜೆಪಿ ಮೈತ್ರಿಕೂಟ?; ಎಕ್ಸಿಟ್​ ಪೋಲ್​ನಲ್ಲಿ ಮಹಾಯುತಿಗೆ ಮುನ್ನಡೆ

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ನವರಾತ್ರಿ ಉತ್ಸವ.

Chandrahas

ಮಹಾರಾಷ್ಟ್ರ : ಹಲಾಲ್ ಪ್ರಾಮಾಣೀಕರಣವನ್ನು ನಿಷೇಧಿಸುವಂತೆ ಹಿಂದೂ ಜನಜಾಗೃತಿ ಸಮಿತಿಯ ಪ್ರಸ್ತಾವನೆ

Mumbai News Desk