September 6, 2026
Mumbai News Kannada
ಮಹಾರಾಷ್ಟ್ರ

ಡಿ. 5ರಂದು ಮಹಾಯುತಿ ಸರಕಾರ ಪ್ರಮಾಣ ವಚನ ಸ್ವೀಕಾರ – ಬಿಜೆಪಿ ಘೋಷಣೆ






ಡಿ. 5ರಂದು ಮಧ್ಯಾಹ್ನ 1 ಗಂಟೆಗೆ ದಕ್ಷಿಣ ಮುಂಬೈನ ಅಜಾದ್ ಮೈದಾನದಲ್ಲಿ ಮಹಾಯುತಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಬಿಜಿಪಿ ಮಹಾರಾಷ್ಟ್ರ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ಇಂದು ಸಂಜೆ ಘೋಷಿಸಿದರು.
ಪ್ರಧಾನಿ ನರೇಂದ್ರ ಮೋದಿ, ಮತ್ತು ಕೇಂದ್ರ ಸಚಿವರು, ಉನ್ನತ ಬಿಜೆಪಿ ನಾಯಕರು ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಹಾರಾಷ್ಟ್ರದಲ್ಲಿ ನೂತನ ಮುಖ್ಯಮಂತ್ರಿಯ ಘೋಷಣೆಯಲ್ಲಿ ವಿಳಂಬ ಹಾಗೂ ಮುಂದಿನ ಸಂಪುಟದಲ್ಲಿ ಖಾತೆ ಹಂಚಿಕೆಯ ಗೊಂದಲದ ನಡುವೆಯೇ ಪ್ರಮಾಣ ವಚನ ಸ್ವೀಕಾರದ ಸ್ಥಳ ಮತ್ತು ದಿನಾಂಕವನ್ನು ಪ್ರಕಟಿಸಿದ್ದು ಅಚ್ಚರಿ ಮೂಡಿಸಿದೆ.
ಮುಂದಿನ ಮುಖ್ಯಮಂತ್ರಿಯ ಹೆಸರನ್ನು ಇನ್ನೂ ಪ್ರಕಟಿಸಿಲ್ಲ, ಆದರೂ ಕೇಸರಿ ಪಕ್ಷವು ರಾಜ್ಯದ ಉನ್ನತ ಹುದ್ದೆಗೆ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ನೇಮಿಸುವ ಸಾಧ್ಯತೆಯಿದೆ ಎಂಬುದು ಬಹುತೇಕ ಸ್ಪಷ್ಟವಾಗಿದೆ.
ಬಿಜೆಪಿ, ಶಿವಸೇನಾ (ಶಿಂಧೆ ) ಮತ್ತು ಎನ್ ಸಿ ಪಿ (ಅಜಿತ್ ಪವಾರ್ ) ಯನ್ನು ಒಳಗೊಂಡಿರುವ ಮಹಾಯುತಿ ಮೈತ್ರಿಕೂಟ 2024ರ ಮಹಾರಾಷ್ಟ್ರ ವಿಧಾನಸಭೆಯ ಚುನಾವಣೆಯಲ್ಲಿ ಭಾರಿ ಬಹುಮತದೊಂದಿಗೆ ಗೆದ್ದಿದ್ದು, ರಾಜ್ಯದ ಒಟ್ಟು 288 ವಿಧಾನಸಭಾ ಸ್ಥಾನಗಳ ಪೈಕಿ ಒಟ್ಟಾರೆಯಾಗಿ 230 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.
ಬಿಜೆಪಿ-132, ಶಿವಸೇನಾ ಶಿಂದೆ ಬಣ 57 ಮತ್ತು ಅಜಿತ್ ಪವಾರ್ ಅವರ ಎನ್ ಸಿ ಪಿ 41 ಸ್ಥಾನಗಳನ್ನು ಗಳಿಸಿದೆ.



Related posts

ಶ್ರೀ ದುರ್ಗಾ ಕಾಳಿ ಮಂದಿರ, ಅಂಬರ್ ನಾಥ್ ನವರಾತ್ರಿ ಉತ್ಸವ ಸಂಪನ್ನ.

Mumbai News Desk

ಮಹಾರಾಷ್ಟ್ರದಲ್ಲಿ ಜೂನ್ 25ರಿಂದ ಮದ್ಯದ ಬೆಲೆ ಏರಿಕೆ

Mumbai News Desk

ಆಸ್ತಿ ಮತ್ತು ಬಾಡಿಗೆ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಿದ ಮಹಾರಾಷ್ಟ್ರ ಸರ್ಕಾರ

Mumbai News Desk

ನಾಸಿಕ್ ಬಂಟರ ಸಂಘದ 20ನೇ ವಾರ್ಷಿಕೋತ್ಸವ: ಸಾಂಸ್ಕೃತಿಕ ವೈವಿಧ್ಯದ ಸಂಭ್ರಮ

Mumbai News Desk

ಕಲಂಬೋಲಿ  ಶ್ರೀ ಅಯ್ಯಪ್ಪ ಸ್ವಾಮಿ ಭಕ್ತವೃಂದ ದ  34 ನೆ  ವಾರ್ಷಿಕ ಮಹಾಪೂಜೆ .

Mumbai News Desk

ಶ್ರೀ ರಾಮಚಂದ್ರಾಪುರ ಮಠದ ಭಾರತ ಮಂಡಲ, ಕೊಲಾಡಿನ ಅಮೃತಧಾರಾ ಗೋಶಾಲೆಯ ಪರಿಸರದಲ್ಲಿ ವನಮಹೋತ್ಸವ

Mumbai News Desk