July 23, 2026
Mumbai News Kannada
ಮಹಾರಾಷ್ಟ್ರ

ಬಿಜೆಪಿ ನಿರ್ಧಾರಕ್ಕೆ ನನ್ನ ಬೆಂಬಲವಿದೆ – ಮೌನ ಮುರಿದ ಏಕನಾಥ್ ಶಿಂಧೆ








ಮುಖ್ಯ ಮಂತ್ರಿ ಹುದ್ದೆ ಬಗ್ಗೆ ಬಿಜೆಪಿ ನಿರ್ಧಾರ ತೆಗೆದುಕೊಳ್ಳುತ್ತದೆ. ಅದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ, ಮೈತ್ರಿ ಕೂಟದಲ್ಲಿ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದು ಶಿವಸೇನಾ (ಶಿಂಧೆ ಬಣ )ನಾಯಕ, ನಿರ್ಗಮಿತ ಮುಖ್ಯಮಂತ್ರಿ ಏಕನಾಥ್ ಶಿಂಧೆ ಹೇಳಿದ್ದಾರೆ.
ತಮ್ಮ ಸ್ವಗ್ರಾಮ ಡೇರ್ ತಾಂಬ್ ನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು ನೂತನ ಸರಕಾರ ರಚನೆಯ ಬಗ್ಗೆ ಮಾತುಕತೆಗಳು ನಡೆಯುತಿವೆ. ಮಹಾಯುತಿ ಮೈತ್ರಿಕೂಟದ ಮಿತ್ರ ಪಕ್ಷಗಳಾದ ಬಿಜೆಪಿ, ಶಿವಸೇನೆ, ಎನ್ ಸಿ ಪಿ ಒಮ್ಮತದ ಮೂಲಕ ಎಲ್ಲಾ ನಿರ್ಧಾರ ತೆಗೆದುಕೊಳ್ಳುತೇವೆ ಎಂದು ಶಿಂಧೆ ಮಾಹಿತಿ ನೀಡಿದರು.
ಅಸಮಾಧಾನಗೊಂಡು ಸ್ವಗ್ರಾಮಕ್ಕೆ ತೆರಳಿದ್ದಾರೆ ಎಂಬ ವದಂತಿಗೆ ಪ್ರತಿಕ್ರಿಯಿಸಿದ ಶಿಂಧೆ ಅವರು “ನಾನು ನನ್ನ ಗ್ರಾಮಕ್ಕೆ ನಿಯಮಿತವಾಗಿ ಭೇಟಿ ನೀಡುತಿರುತ್ತೇನೆ. ಮುಖ್ಯಮಂತ್ರಿ ಹುದ್ದೆ ಬಗ್ಗೆ ಕಳೆದ ವಾರವೇ ನನ್ನ ನಿಲುವನ್ನು ಸ್ಪಷ್ಟ ಪಡಿಸಿದರೂ ಈ ಗೊಂದಲವೇಕೆ? ನಾವು ಜನರ ಅಶೋತ್ತರಗಳನ್ನು ಈಡೇರೇಸುತ್ತೇವೆ, ನಮ್ಮ ನಡುವೆ ಯಾವುದೇ ಬಿನ್ನಾಭಿಪ್ರಾಯವಿಲ್ಲ ಎಂದ ಶಿಂಧೆ ಅವರು ಮುಖ್ಯಮಂತ್ರಿ ಹುದ್ದೆ ಬಗ್ಗೆ ಬುಗಿಲೆದ್ದ ಎಲ್ಲಾ ಗೊಂದಲಗಳಿಗೆ ತೆರೆ ಎಳೆದರು.



Related posts

ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್, 21 ನೇ ವಾರ್ಷಿಕೋತ್ಸವ, ಕರ್ನಾಟಕ ರಾಜ್ಯೋತ್ಸವ ಅಚರಣೆ

Mumbai News Desk

ನಾಶಿಕ್ ಸಿಟಿ ವಲಯ ರೋಟರಿ ಕ್ಲಬ್ ಅಧ್ಯಕ್ಷರಾಗಿ ಬಾಲಚಂದ್ರ ಕೋಟ್ಯಾನ್ ಆಯ್ಕೆ.

Mumbai News Desk

ಮಾಹಾರಾಷ್ಟ್ರ ವಿಧಾನ ಸಭಾ ಚುನಾವಣೆ : “ಎಣ್ಣೆ” ಪ್ರಿಯರಿಗೆ ವಿಶೇಷ ಮಾಹಿತಿ.

Mumbai News Desk

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ಪ್ರಮಾಣ ವಚನ

Mumbai News Desk

ಶ್ರೀ ದುರ್ಗಾ ಕಾಳಿ ಮಂದಿರದಲ್ಲಿ ನವರಾತ್ರಿ ಉತ್ಸವ.

Chandrahas

ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ : ಮುಂದಿನ ಮುಖ್ಯಮಂತ್ರಿ ಯಾರು ಎಂಬ ಸ್ಪಷ್ಟತೆ ಇಲ್ಲ

Mumbai News Desk