September 6, 2026
Mumbai News Kannada
ಸುದ್ದಿ

ಫೆಂಗಲ್ ಚಂಡಮಾರುತದ ಎಫೆಕ್ಟ್ – ದಕ್ಷಿಣ ಕನ್ನಡ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಣೆ, ನಾಳೆ (ಡಿ. 3)ಶಾಲಾ-ಕಾಲೇಜ್ ಗೆ ರಜೆ ಘೋಷಣೆ





‘ಫೆಂಗಲ್’ ಚಂಡಮಾರುತದ ಆರ್ಭಟ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಹೆಚ್ಚಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಕಾಸರಗೋಡು ಗಡಿಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ‘ಫೆಂಗಲ್’ ಚಂಡಮಾರುತದಿಂದಾಗಿ ಕರ್ನಾಟಕ-ಕೇರಳ ಗಡಿಯಲ್ಲಿ ಭಾರೀ ಮಳೆಯಾಗುತ್ತಿದೆ. ಕುಂಬ್ಳೆ ಬಳಿ ರಸ್ತೆಯಲ್ಲಿ ಪ್ರವಾಹ ಸ್ಥಿತಿ ನಿರ್ಮಾಣವಾಗಿದೆ. ಮಂಗಳೂರಿನಲ್ಲಿ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಗಳಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರಕೃತಿ ವಿಕೋಪ ಉಂಟಾದಲ್ಲಿ ಸ್ಥಳೀಯ ಸಂಸ್ಥೆಗಳಿಗೆ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
ಬಂಗಾಲ ಕೊಲ್ಲಿಯಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಹೆಚ್ಚಾಗಿರುವುದರಿಂದ ಉಡುಪಿ ಜಿಲ್ಲೆಯಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇಂದು ರಾತ್ರಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದೆ, ಹೀಗಾಗಿ ನದಿ, ಸಮುದ್ರ ಪಾತ್ರದ ಜನ ಮುನ್ನೆಚ್ಚರಿಕೆ ವಹಿಸುವಂತೆ ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೀನುಗಾರರು ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಗಿದೆ.
ಪೆಂಗಲ್ ಚಂಡಮಾರುತದ ಪರಿಣಾಮವಾಗಿ ಭಾರಿ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತವು ಎಲ್ಲ ಅಂಗನವಾಡಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜು ವರೆಗೆ ಎಲ್ಲ ಶಿಕ್ಷಣ ಸಂಸ್ಥೆಗಳಿಗೆ ಡಿಸೆಂಬರ್ 3ರಂದು (ಮಂಗಳವಾರ )ರಜೆ ಘೋಷಿಸಿದೆ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ರಜೆ ಘೋಷಿಸಿ ಆದೇಶ ನೀಡಿದ್ದಾರೆ ಈಗಾಗಲೇ ಸಾರ್ವಜನಿಕರು ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.
ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣಕನ್ನಡ ಜಿಲ್ಲಾಡಳಿತವು ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜು ವರೆಗೆ ನಾಳೆ( ಡಿ.3)ರಜೆ ಘೋಷಿಸಿದ್ದಾರೆ.



Related posts

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,

Mumbai News Desk

ಜೆ ಸಿ ಐ ಶಂಕರಪುರ ಇದರ 2024 ರ ಸಾಲಿನ ಅಧ್ಯಕ್ಷರಾಗಿ ಇನ್ನಂಜೆ ಹರೀಶ್ ಪೂಜಾರಿ ಆಯ್ಕೆ.

Mumbai News Desk

ಕುತ್ಯಾರು ವಿದ್ಯಾದಾಯಿನಿ ಹಿರಿಯ ಪ್ರಾಥಮಿಕ ಶಾಲೆ, ಶತ ಸಂವತ್ಸರೋತ್ಸಮ ಸಂಭ್ರಮದ ಮನವಿ ಪತ್ರ ಬಿಡುಗಡೆ .

Mumbai News Desk

ಸರ್ ಜೆ ಜೆ ಆಸ್ಪತ್ರೆಯಲ್ಲಿ ನೂತನ ಅತ್ಯಾಧುನಿಕ ಹೆರಿಗೆ ವಾರ್ಡ್ ಲೋಕಾರ್ಪಣೆ

Mumbai News Desk

ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಂತಿ, ಸೌಹಾರ್ದತೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬದ್ದ : ಪತ್ರಿಕಾಗೋಷ್ಥಿಯಲ್ಲಿ ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಡಿ.ಕೆ. ಶಿವಕುಮಾರ್ ಅವರಿಗೆ ಹಿತೈಷಿ ತೋನ್ಸೆ ಜಯಕೃಷ್ಣ ಶೆಟ್ಟಿ ಅವರಿಂದ ಆತ್ಮೀಯ ಅಭಿನಂದನೆ: ಪರಿಸರ ಸಂಘಟನೆಯ ಕಾರ್ಯವೈಖರಿಗೆ ನಿಯೋಜಿತ ಸಿಎಂ ಶ್ಲಾಘನೆ

Mumbai News Desk