April 2, 2025
ಸುದ್ದಿ

ದ ಕನ್ನಡ ಕುಲಾಲರ ಮಾತೃ ಸಂಘಚುನಾವಣೆ ಅಸಿಂಧು ಉ.ನಿಬಂಧಕರ ಆದೇಶ ರದ್ದು,

ಬೆಂಗಳೂರು, : ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ 2024-26ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಆಯ್ಕೆಗೆ ನಡೆದ ಚುನಾವಣೆಯನ್ನು ಅಸಿಂಧುಗೊಳಿಸಿ ಸಹಕಾರ ಸಂಘಗಳ ಜಿಲ್ಲಾ ಉಪ ನಿಬಂಧಕರು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ.
ಸಹಕಾರ ಸಂಘಗಳ ಉಪ ನಿಬಂಧಕರ ಆದೇಶ ಪ್ರಶ್ನಿಸಿ ದ.ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಸಂಘದ ಅಧ್ಯಕ್ಷಮಯೂ‌ರ್ ಉಲ್ಲಾಳ್‌ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಇತ್ತೀಚಿಗೆ ಈ ಆದೇಶ ಹೊರಡಿಸಿದೆ. ಸಂಘದ 2024-26ನೇ ಸಾಲಿಗೆ ಕಾರ್ಯಕಾರಿ ಸಮಿತಿಯ ಆಯ್ಕೆಗೆ 2024ರ ನವಂಬರ್ 10ರಂದು ಚುನಾವಣೆ ನಡೆದಿತ್ತು. ಆದರೆ ಚುನಾವಣೆಯಲ್ಲಿ ವ್ಯಾಪಕ ಅಕ್ರಮ ನಡೆದಿದೆ ಎಂಬ ಕಾರಣಕ್ಕೆ ಚುನಾವಣೆಯನ್ನು ಅಸಿಂಧುಗೊಳಿಸಿದ್ದ ಸಹಕಾರ ಸಂಘಗಳ ಉಪ ನಿಬಂಧಕರು 45 ದಿನಗಳಲ್ಲಿ ಹೊಸದಾಗಿ ಚುನಾವಣೆ ನಡೆಸಬೇಕು. ಅಲ್ಲಿವರೆಗೆ ಹಾಲಿ ಕಾರ್ಯಕಾರಿ ಸಮಿತಿಯು ಮುಂದುವರಿಯಲಿ ಎಂದು ನವಂಬರ್ 20ರಂದು ಆದೇಶ ಹೊರಡಿಸಿದ್ದರು. ಅದನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿತ್ತು.

Related posts

ಯುಎಇ ಬಂಟ್ಸ್ ನ 47ನೇ ವರ್ಷದ “ಗಲ್ಫ್ ಬಂಟೋತ್ಸವ-2024″* ಡಾ.ಕೆ.ಪ್ರಕಾಶ್ ಶೆಟ್ಟಿಯವರಿಗೆ ಬಂಟ ವಿಭೂಷಣ” ಪ್ರಶಸ್ತಿ ಪ್ರಧಾನ

Mumbai News Desk

ಶಿವ ಸೇನಾ ನೇತಾರ, ಮಾಜಿ ಶಾಸಕ ಶ್ರೀಕಾಂತ್ ಸರ್ಮಳ್ಕರ್ ನಿಧನ

Mumbai News Desk

ಬಾಂಡೂಪ್: ಶೇಖರ್ ನಾಯ್ಕ್ ನಿಧನ

Mumbai News Desk

ಶ್ರೀ ಲಕ್ಕಮ್ಮಾ ದೇವಿ ಕಲಾ ಪೋಷಕ ಸಂಘ (ರಿ) ಬ್ಯಾಕೂಡ ವತಿಯಿಂದ ಪ್ರಶಸ್ತಿ ಪ್ರದಾನ ಸಮಾರಂಭ

Mumbai News Desk

ದೇಗುಲಗಳು ಸರಕಾರದ ವಶದಿಂದ ಮುಕ್ತಗೊಳ್ಳಲಿ : ಶ್ರೀ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ

Mumbai News Desk

ಮಹಾರಾಷ್ಟ್ರ, ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ : ನ. 20 ರಂದು ರಾಜ್ಯದಲ್ಲಿ ಮತದಾನ

Mumbai News Desk