32 C
Mumbai
March 7, 2026
Mumbai News Kannada
ಸುದ್ದಿ

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ





ದೀನ ದಲಿತರ ಕಣ್ಮಣಿ ಶಿಕ್ಷಣಪ್ರೇಮಿ ದಿ. ದಾಮೋದರ ಸುವರ್ಣ ಅವರ ಜನ್ಮಶತಾಬ್ದಿ ಕಾರ್ಯಕ್ರಮವು ಕುದ್ರೋಳಿಯ ಗೋಕರ್ಣನಾಥ ಸಭಾಂಗಣದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು.

ಈ ಶುಭವಸರದಲ್ಲಿ “ಬಸವಣ್ಣ ಮತ್ತು ನಾರಾಯಣ ಗುರು ಸಾಮಾಜಿಕ ದರ್ಶನ ಒಂದು ತೌಲನಿಕ ಅಧ್ಯಯನ” ಎಂಬ ಸಂಶೋಧನಾ ಪ್ರಬಂಧದಿಂದ ಗೌರವ ಡಾಕ್ಟರೇಟ್ ಪಡೆದ ಮೋಹನ್ ಬಿ ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ದಿ. ದಾಮೋದರ್ ಸುವರ್ಣ ಅವರ ಸುಪುತ್ರರಾದ ನವೀನ್ ಚಂದ್ರ ಸುವರ್ಣ ಮತ್ತು ಉದಯ ಚಂದ್ರ ಸುವರ್ಣ ಸಹಿತ ಇತರ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ ಗೌರವಿಸಿದರು.
ಮೋಹನ್ ಬಿ ಅವರು ಮುಂಬೈಯಲ್ಲಿದ್ದು ಬಿಲ್ಲವ ಭವನದ ಪ್ರಬಂಧಕರಾಗಿ ಹತ್ತು ವರ್ಷ ಸೇವೆ ಸಲ್ಲಿಸಿದ್ದರು. ತವರಿಗೆ ಮರಳಿದ ಅವರು ಪ್ರಬಂಧ ಮಂಡಿಸುವಲ್ಲಿ ಕ್ರಿಯಾಶೀಲರಾದರು. ಮಂಗಳೂರು ಗಾಂಧಿನಗರದ ಶ್ರೀ ಗೋಕರ್ಣನೇಶ್ವರ ಕಾಲೇಜ್ ಮತ್ತು ರಥಬೀದಿಯ ಡಾ. ದಯಾನಂದ್ ಪೈ ಡಾ. ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು ಪ್ರಸಕ್ತ ಕುಂದಾಪುರದ ಬಂಡರ್ಕಾಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.



Related posts

ಪ್ರಗತಿಯ ಪಥದಲ್ಲಿ ಭಾರತ್ ಬ್ಯಾಂಕ್:  ಸೂರ್ಯಕಾಂತ್ ಜಯ ಸುವರ್ಣ 

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಇದರ ನೂತನ ಅಧ್ಯಕ್ಷರಾಗಿ ಶ್ರೀ ರಾಜೇಶ್ ಜೆ ಶೆಟ್ಟಿ ಆಯ್ಕೆ

Mumbai News Desk

ಬಗ್ವಾಡಿ, ಬಚ್ಚು ಸಿ ಕುಂದರ್ ನಿಧನ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ದುಬೈ ಯಲ್ಲಿ ಅದ್ದೂರಿಯಾಗಿ ಜರಗಿದ “ಅಂತಾರಾಷ್ಟ್ರೀಯ ಜನಪದ ಉತ್ಸವ – 2025”

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಸಮಾಜ ಕಲ್ಯಾಣ ಯೋಜನೆಯಡಿಯಲ್ಲಿ ಅಶಕ್ತರಿಗೆ ನೆರವು

Mumbai News Desk