July 23, 2026
Mumbai News Kannada
ಸುದ್ದಿ

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ







ದೀನ ದಲಿತರ ಕಣ್ಮಣಿ ಶಿಕ್ಷಣಪ್ರೇಮಿ ದಿ. ದಾಮೋದರ ಸುವರ್ಣ ಅವರ ಜನ್ಮಶತಾಬ್ದಿ ಕಾರ್ಯಕ್ರಮವು ಕುದ್ರೋಳಿಯ ಗೋಕರ್ಣನಾಥ ಸಭಾಂಗಣದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು.

ಈ ಶುಭವಸರದಲ್ಲಿ “ಬಸವಣ್ಣ ಮತ್ತು ನಾರಾಯಣ ಗುರು ಸಾಮಾಜಿಕ ದರ್ಶನ ಒಂದು ತೌಲನಿಕ ಅಧ್ಯಯನ” ಎಂಬ ಸಂಶೋಧನಾ ಪ್ರಬಂಧದಿಂದ ಗೌರವ ಡಾಕ್ಟರೇಟ್ ಪಡೆದ ಮೋಹನ್ ಬಿ ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ದಿ. ದಾಮೋದರ್ ಸುವರ್ಣ ಅವರ ಸುಪುತ್ರರಾದ ನವೀನ್ ಚಂದ್ರ ಸುವರ್ಣ ಮತ್ತು ಉದಯ ಚಂದ್ರ ಸುವರ್ಣ ಸಹಿತ ಇತರ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ ಗೌರವಿಸಿದರು.
ಮೋಹನ್ ಬಿ ಅವರು ಮುಂಬೈಯಲ್ಲಿದ್ದು ಬಿಲ್ಲವ ಭವನದ ಪ್ರಬಂಧಕರಾಗಿ ಹತ್ತು ವರ್ಷ ಸೇವೆ ಸಲ್ಲಿಸಿದ್ದರು. ತವರಿಗೆ ಮರಳಿದ ಅವರು ಪ್ರಬಂಧ ಮಂಡಿಸುವಲ್ಲಿ ಕ್ರಿಯಾಶೀಲರಾದರು. ಮಂಗಳೂರು ಗಾಂಧಿನಗರದ ಶ್ರೀ ಗೋಕರ್ಣನೇಶ್ವರ ಕಾಲೇಜ್ ಮತ್ತು ರಥಬೀದಿಯ ಡಾ. ದಯಾನಂದ್ ಪೈ ಡಾ. ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು ಪ್ರಸಕ್ತ ಕುಂದಾಪುರದ ಬಂಡರ್ಕಾಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.



Related posts

ಸಾಂತಾಕ್ರೂಜ್ ಪೂರ್ವ: ಸಿ ಎ ಸುನಿಲ್ ಶೆಟ್ಟಿ ನಿಧನ.

Mumbai News Desk

ಅಜಿತ್ ಪವಾರ್ ವಿಮಾನ ಅಪಘಾತ : ಘಟನೆ ಹೇಗೆ ನಡೆಯಿತು? ‘ಕಳಪೆ ಗೋಚರತೆ… ನಂತರ ಅಪಘಾತ’

Mumbai News Desk

ನಟ ದರ್ಶನ್‌ ಸೇರಿ 7 ಆರೋಪಿಗಳ ಜಾಮೀನು ರದ್ದು, ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ

Mumbai News Desk

ತುಳುವೆರೆ ಆಯಾನೊ ಕೂಟ ಕುಡ್ಲ ಅಧ್ಯಕ್ಷರಾಗಿ ಶಮಿನ ಆಳ್ವ ಆಯ್ಕೆ

Mumbai News Desk

ಪೊಲಿಪು ಹೊನ್ನಯ್ಯ ಎಂ. ಕರ್ಕೇರ ನಿಧನ

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೆ.ವಾಸುದೇವಾಚಾರ್ಯ ದತ್ತಿ ಪುರಸ್ಕಾರ

Mumbai News Desk