September 6, 2026
Mumbai News Kannada
ಸುದ್ದಿ

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ





ದೀನ ದಲಿತರ ಕಣ್ಮಣಿ ಶಿಕ್ಷಣಪ್ರೇಮಿ ದಿ. ದಾಮೋದರ ಸುವರ್ಣ ಅವರ ಜನ್ಮಶತಾಬ್ದಿ ಕಾರ್ಯಕ್ರಮವು ಕುದ್ರೋಳಿಯ ಗೋಕರ್ಣನಾಥ ಸಭಾಂಗಣದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು.

ಈ ಶುಭವಸರದಲ್ಲಿ “ಬಸವಣ್ಣ ಮತ್ತು ನಾರಾಯಣ ಗುರು ಸಾಮಾಜಿಕ ದರ್ಶನ ಒಂದು ತೌಲನಿಕ ಅಧ್ಯಯನ” ಎಂಬ ಸಂಶೋಧನಾ ಪ್ರಬಂಧದಿಂದ ಗೌರವ ಡಾಕ್ಟರೇಟ್ ಪಡೆದ ಮೋಹನ್ ಬಿ ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ದಿ. ದಾಮೋದರ್ ಸುವರ್ಣ ಅವರ ಸುಪುತ್ರರಾದ ನವೀನ್ ಚಂದ್ರ ಸುವರ್ಣ ಮತ್ತು ಉದಯ ಚಂದ್ರ ಸುವರ್ಣ ಸಹಿತ ಇತರ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ ಗೌರವಿಸಿದರು.
ಮೋಹನ್ ಬಿ ಅವರು ಮುಂಬೈಯಲ್ಲಿದ್ದು ಬಿಲ್ಲವ ಭವನದ ಪ್ರಬಂಧಕರಾಗಿ ಹತ್ತು ವರ್ಷ ಸೇವೆ ಸಲ್ಲಿಸಿದ್ದರು. ತವರಿಗೆ ಮರಳಿದ ಅವರು ಪ್ರಬಂಧ ಮಂಡಿಸುವಲ್ಲಿ ಕ್ರಿಯಾಶೀಲರಾದರು. ಮಂಗಳೂರು ಗಾಂಧಿನಗರದ ಶ್ರೀ ಗೋಕರ್ಣನೇಶ್ವರ ಕಾಲೇಜ್ ಮತ್ತು ರಥಬೀದಿಯ ಡಾ. ದಯಾನಂದ್ ಪೈ ಡಾ. ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು ಪ್ರಸಕ್ತ ಕುಂದಾಪುರದ ಬಂಡರ್ಕಾಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.



Related posts

ಭಾರತ್ ಬ್ಯಾಂಕ್‌ನ ಹಿರಿಯ ಸಿಬ್ಬಂದಿಗಳಾದ ಹರೀಶ್ ಕೋಟ್ಯಾನ್, ಉದಯ ಅಂಚನ್ ಅವರಿಗೆ ಗೌರವಪೂರ್ವಕ ಬೀಳ್ಕೊಡುಗೆ

Mumbai News Desk

ನಮೋ ಮೊಯರ್ ಗ್ಲೋಬಲ್ ಫೌಂಡೇಶನ್ ವತಿಯಿಂದ ಹೊರ ರಾಜ್ಯದಲ್ಲೂ ಅಸಾಯಕರಿಗೆ ಸಹಾಯ ಹಸ್ತ

Mumbai News Desk

ಮಂಗಳೂರು – ಸುಬ್ರಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮನವಿ.

Mumbai News Desk

ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿ ಭೀಕರ ಅಪಘಾತದಿಂದ ಪಾರು: ಜುಹು ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ

Mumbai News Desk

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಎನ್ಐಎ ನ್ಯಾಯಾಲಯದ ಮುಂದೆ ತಪ್ಪೊಪ್ಪಿಕೊಂಡ ಆರೋಪಿ ಶಾರೀಕ್

Mumbai News Desk

ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಪಂಜುರ್ಲಿ ಗ್ರೂಪ್ ಆಫ್ ಹೋಟೆಲ್ಸ್ ಆಡಳಿತ ನಿರ್ದೇಶಕ ರಾಜೇಂದ್ರ ವಿ. ಶೆಟ್ಟಿಯವರು ಆಯ್ಕೆ.

Mumbai News Desk