32 C
Mumbai
April 24, 2026
Mumbai News Kannada
ಸುದ್ದಿ

ದಿ. ದಾಮೋದರ್ ಸುವರ್ಣ ಜನ್ಮಶತಾಬ್ದಿ ಆಚರಣೆ : ಡಾ. ಮೋಹನ್ ಬಿ ಅವರಿಗೆ ಗಣ್ಯರ ಸಮ್ಮುಖದಲ್ಲಿ ಗೌರವ





ದೀನ ದಲಿತರ ಕಣ್ಮಣಿ ಶಿಕ್ಷಣಪ್ರೇಮಿ ದಿ. ದಾಮೋದರ ಸುವರ್ಣ ಅವರ ಜನ್ಮಶತಾಬ್ದಿ ಕಾರ್ಯಕ್ರಮವು ಕುದ್ರೋಳಿಯ ಗೋಕರ್ಣನಾಥ ಸಭಾಂಗಣದಲ್ಲಿ ಇತ್ತೀಚೆಗೆ ಯಶಸ್ವಿಯಾಗಿ ನಡೆಯಿತು.

ಈ ಶುಭವಸರದಲ್ಲಿ “ಬಸವಣ್ಣ ಮತ್ತು ನಾರಾಯಣ ಗುರು ಸಾಮಾಜಿಕ ದರ್ಶನ ಒಂದು ತೌಲನಿಕ ಅಧ್ಯಯನ” ಎಂಬ ಸಂಶೋಧನಾ ಪ್ರಬಂಧದಿಂದ ಗೌರವ ಡಾಕ್ಟರೇಟ್ ಪಡೆದ ಮೋಹನ್ ಬಿ ಅವರನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ವಿಧಾನಸಭಾ ಸ್ಪೀಕರ್ ಯುಟಿ ಖಾದರ್ ಅವರು ದಿ. ದಾಮೋದರ್ ಸುವರ್ಣ ಅವರ ಸುಪುತ್ರರಾದ ನವೀನ್ ಚಂದ್ರ ಸುವರ್ಣ ಮತ್ತು ಉದಯ ಚಂದ್ರ ಸುವರ್ಣ ಸಹಿತ ಇತರ ಗಣ್ಯರ ಸಮ್ಮುಖದಲ್ಲಿ ಅಭಿನಂದಿಸಿ ಗೌರವಿಸಿದರು.
ಮೋಹನ್ ಬಿ ಅವರು ಮುಂಬೈಯಲ್ಲಿದ್ದು ಬಿಲ್ಲವ ಭವನದ ಪ್ರಬಂಧಕರಾಗಿ ಹತ್ತು ವರ್ಷ ಸೇವೆ ಸಲ್ಲಿಸಿದ್ದರು. ತವರಿಗೆ ಮರಳಿದ ಅವರು ಪ್ರಬಂಧ ಮಂಡಿಸುವಲ್ಲಿ ಕ್ರಿಯಾಶೀಲರಾದರು. ಮಂಗಳೂರು ಗಾಂಧಿನಗರದ ಶ್ರೀ ಗೋಕರ್ಣನೇಶ್ವರ ಕಾಲೇಜ್ ಮತ್ತು ರಥಬೀದಿಯ ಡಾ. ದಯಾನಂದ್ ಪೈ ಡಾ. ಸತೀಶ್ ಪೈ ಸರಕಾರಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಅವರು ಪ್ರಸಕ್ತ ಕುಂದಾಪುರದ ಬಂಡರ್ಕಾಸ್ ಕಾಲೇಜಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.



Related posts

ಶ್ರೀ ಸ್ವಾಮಿ ನಿತ್ಯಾನಂದ ಚಾರಿಟೇಬಲ್ ಟ್ರಸ್ಟ್, ಕಲ್ಯಾಣ್ ವತಿಯಿಂದ ಗಣೇಶಪುರಿಯಲ್ಲಿ  ಭಂಡಾರ ಸೇವೆ ಸಂಪನ್ನ

Mumbai News Desk

ಮುಲುಂಡ್ ಕ್ಷೇತ್ರದ ‌ಕಾಂಗ್ರೇಸ್ ಪಕ್ಷದ ಅಭ್ಯರ್ಥಿಯಾಗಿ ರಾಕೇಶ್ ಶೆಟ್ಟಿ  ಕಣಕ್ಕೆ

Mumbai News Desk

ಬೊಳ್ನಾಡು ಶ್ರೀ ಚಿರುಂಭ ಭಗವತೀ ಕ್ಷೇತ್ರ, ದ್ವಜ ಸ್ತಂಭ (ಕೊಡಿಮರ) ಪ್ರತಿಷ್ಠಾಪನೆ

Mumbai News Desk

ವಿಶ್ವ ಬಂಟರ ಸಮ್ಮೇಳನದ ಖರ್ಚು ವೆಚ್ಚಗಳ ಸಭೆ

Mumbai News Desk

ಅಂತರ್ ಕಾಲೇಜ್ ಕರಾಟೆ ಸ್ಪರ್ಧೆಯಲ್ಲಿ ಕು. ಭುವಿ ಜಿ. ಎಸ್ ಗೆ ಚಿನ್ನದ ಪದಕ

Mumbai News Desk

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2024 ಪ್ರಕಟ, 69 ಜನರಿಗೆ ರಾಜ್ಯೋತ್ಸವ , 109 ಜನರಿಗೆ ಸಾಧಕ ಪ್ರಶಸ್ತಿ, ಮುಂಬೈಯ ಸಮಾಜ ಸೇವಕ ಸದಾಶಿವ ಶೆಟ್ಟಿ ಕನ್ಯಾಡಿಗೆ ಸಾಧಕ ಪ್ರಶಸ್ತಿ.ರಾಜ್ಯೋತ್ಸವ ಪ್ರಶಸ್ತಿ 2024

Mumbai News Desk