April 1, 2025
ಸುದ್ದಿ

ರೇಣುಕಾ ಸ್ವಾಮಿ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು

ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಏಳು ಜನರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ರೇಣುಕಾ ಸ್ವಾಮಿ ಕೊಲೆ ಕೇಸ್ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರ ಗೌಡ ಸೇರಿದಂತೆ ಏಳು ಮಂದಿಗೆ ಕರ್ನಾಟಕ ಹೈಕೋರ್ಟ್ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಚಿಕಿತ್ಸೆಯಲ್ಲಿದ್ದ ನಟನಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ನ್ಯಾಯಮೂರ್ತಿ ಎಸ್ ವಿಶ್ವಜೀತ್ ಶೆಟ್ಟಿ ಅವರ ಏಕ ಸದಸ್ಯ ಪೀಠವು ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಶುಕ್ರವಾರ ಪ್ರಕಟಿಸಿದೆ. ದರ್ಶನ್, ಪವಿತ್ರ ಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್ ಗೆ ಜಾಮೀನು ಮಂಜೂರು ಮಾಡಿದೆ.
ನಟ ದರ್ಶನ್ ಜುಲೈ 11ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ, ಈಗ ಅವರಿಗೆ ಜಾಮೀನು ಮಂಜೂರಾಗಿದ್ದು ತಾತ್ಕಾಲಿಕ ನಿರಾಳತೆ ದೊರಕಿದೆ .
ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಈ ಹಿಂದೆಯೇ ಜಾಮೀನು ದೊರೆತಿತ್ತು, ಇಂದು ಏಳು ಮಂದಿಗೆ ಜಾಮೀನು ದೊರೆತಿದೆ, ಆ ಮೂಲಕ ಈ ಪ್ರಕರಣದ 11 ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಜಾಮೀನಿನಿಂದ ದರ್ಶನ್ ಗೆ ನಿರಾಳತೆ ದೊರೆತಿದ್ದು ಅವರ ಮೇಲೆ ಈಗ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಬೇಕಾದ ಒತ್ತಡವು ತೊಲಗಿದೆ, ಮಾತ್ರವಲ್ಲದೆ ನಿಂತಿರುವ ಸಿನಿಮಾಗಳ ಚಿತ್ರಿಕರಣಕ್ಕೂ ಅವರು ತೆರಳಬಹುದಾಗಿದೆ.

Related posts

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ಸ್ತನ್ಯಪಾನ ಕೊಠಡಿ ಉದ್ಘಾಟನೆ

Mumbai News Desk

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.

Mumbai News Desk

ಶಿಕ್ಷಣ ಮತ್ತು ಸಾಮಾಜಿಕ ರಂಗದ ಅನುಪಮ ಸಾಧಕ ಹೆಜಮಾಡಿ ಕೋಡಿ ಜಯಶೀಲ ಬಂಗೇರ ಅವರಿಗೆ ಸನ್ಮಾನ.

Mumbai News Desk

ಕುಲಾಲ ಪ್ರತಿಷ್ಠಾನ (ರಿ) ಮಂಗಳೂರು ಆಶ್ರಯದಲ್ಲಿ ತುಳು ನಾಟಕ ಪ್ರದರ್ಶನ   ಸಾಧಕರಿಗೆ ಸನ್ಮಾನ

Mumbai News Desk

ನ್ಯಾಯವಾದಿ ಬಿ. ಕೆ. ಸದಾಶಿವ ನೋಟರಿ ಪಬ್ಲಿಕ್ ಆಗಿ ನೇಮಕ

Mumbai News Desk

ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗದ ಅರ್ಹ ಸಂಶೋಧನ ವಿದ್ಯಾರ್ಥಿಗಳಿಗೆ ಜಯಲೀಲಾ ಟ್ರಸ್ಟ್ ನ ವತಿಯಿಂದ ಗೌರವ ಧನ

Mumbai News Desk