September 6, 2026
Mumbai News Kannada
ಸುದ್ದಿ

ರೇಣುಕಾ ಸ್ವಾಮಿ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು





ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಏಳು ಜನರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ರೇಣುಕಾ ಸ್ವಾಮಿ ಕೊಲೆ ಕೇಸ್ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರ ಗೌಡ ಸೇರಿದಂತೆ ಏಳು ಮಂದಿಗೆ ಕರ್ನಾಟಕ ಹೈಕೋರ್ಟ್ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಚಿಕಿತ್ಸೆಯಲ್ಲಿದ್ದ ನಟನಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ನ್ಯಾಯಮೂರ್ತಿ ಎಸ್ ವಿಶ್ವಜೀತ್ ಶೆಟ್ಟಿ ಅವರ ಏಕ ಸದಸ್ಯ ಪೀಠವು ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಶುಕ್ರವಾರ ಪ್ರಕಟಿಸಿದೆ. ದರ್ಶನ್, ಪವಿತ್ರ ಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್ ಗೆ ಜಾಮೀನು ಮಂಜೂರು ಮಾಡಿದೆ.
ನಟ ದರ್ಶನ್ ಜುಲೈ 11ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ, ಈಗ ಅವರಿಗೆ ಜಾಮೀನು ಮಂಜೂರಾಗಿದ್ದು ತಾತ್ಕಾಲಿಕ ನಿರಾಳತೆ ದೊರಕಿದೆ .
ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಈ ಹಿಂದೆಯೇ ಜಾಮೀನು ದೊರೆತಿತ್ತು, ಇಂದು ಏಳು ಮಂದಿಗೆ ಜಾಮೀನು ದೊರೆತಿದೆ, ಆ ಮೂಲಕ ಈ ಪ್ರಕರಣದ 11 ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಜಾಮೀನಿನಿಂದ ದರ್ಶನ್ ಗೆ ನಿರಾಳತೆ ದೊರೆತಿದ್ದು ಅವರ ಮೇಲೆ ಈಗ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಬೇಕಾದ ಒತ್ತಡವು ತೊಲಗಿದೆ, ಮಾತ್ರವಲ್ಲದೆ ನಿಂತಿರುವ ಸಿನಿಮಾಗಳ ಚಿತ್ರಿಕರಣಕ್ಕೂ ಅವರು ತೆರಳಬಹುದಾಗಿದೆ.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣಕ್ಕೆ ಶಶಿಧರ ಶೆಟ್ಟಿ ಬರೋಡಾ ಅವರಿಂದ 1.25 ಕೋಟಿ ರೂ. ದೇಣಿಗೆ: ದ್ವಿತೀಯ ಹಂತದ ಕಾಮಗಾರಿಗೆ ಚಾಲನೆ: ವಿಶೇಷ ಸಭೆ

Mumbai News Desk

ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ   ಹುಟ್ಟೂರು, ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ , ಆರ್ಥಿಕ ನೆರವು ವಿತರಣೆ.

Mumbai News Desk

ಯಕ್ಷಗಾನ ರಂಗದ ಅಮರ ಗಂಧರ್ವ ಕಾಳಿಂಗ ನಾವಡರ ಪುಣ್ಯಸ್ಮರಣೆ: ಕರಾವಳಿಯ ಕೋಗಿಲೆಗೆ ನುಡಿನಮನ

Mumbai News Desk

ನೊಂದವರ ಬಾಳಿಗೆ ಬೆಳಕಾಗುವ ‘ನೆರವು’: 4 ಸಾವಿರ ಕುಟುಂಬಗಳಿಗೆ ₹9.5 ಕೋಟಿ ಆರ್ಥಿಕ ಸಹಾಯ ಹಸ್ತ

Mumbai News Desk

ಮೂರು ದಶಕಗಳ ಆಯುರ್ವೇದ ಸೇವೆ: ಘಾಟ್‌ಕೋಪರ್‌ನಲ್ಲಿ ಸಾಲ್ಮರ ಆಯುರ್ವೇದದ 10ನೇ ಶಾಖೆ ಶುಭಾರಂಭ

Mumbai News Desk

ಕುಲಶೇಖರ: ಶ್ರೀ ವೀರನಾರಾಯಣ ದೇವಸ್ಥಾನ, ಆಡಳಿತ ಮೊತ್ತೇಸರರಾಗಿ ಸುಂದರ್ ಕುಲಾಲ್ ಶಕ್ತಿನಗರ ಆಯ್ಕೆ.

Mumbai News Desk