July 23, 2026
Mumbai News Kannada
ಸುದ್ದಿ

ರೇಣುಕಾ ಸ್ವಾಮಿ ಪ್ರಕರಣ – ದರ್ಶನ್ ಸೇರಿ ಏಳು ಆರೋಪಿಗಳಿಗೆ ಜಾಮೀನು







ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಏಳು ಜನರಿಗೆ ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.ರೇಣುಕಾ ಸ್ವಾಮಿ ಕೊಲೆ ಕೇಸ್ ಆರೋಪಿಗಳಾದ ನಟ ದರ್ಶನ್ ತೂಗುದೀಪ, ಪವಿತ್ರ ಗೌಡ ಸೇರಿದಂತೆ ಏಳು ಮಂದಿಗೆ ಕರ್ನಾಟಕ ಹೈಕೋರ್ಟ್ ರೆಗ್ಯುಲರ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಚಿಕಿತ್ಸೆಯಲ್ಲಿದ್ದ ನಟನಿಗೆ ದೊಡ್ಡ ರಿಲೀಫ್ ಸಿಕ್ಕಂತಾಗಿದೆ.
ನ್ಯಾಯಮೂರ್ತಿ ಎಸ್ ವಿಶ್ವಜೀತ್ ಶೆಟ್ಟಿ ಅವರ ಏಕ ಸದಸ್ಯ ಪೀಠವು ಅರ್ಜಿಗಳಿಗೆ ಸಂಬಂಧಿಸಿದ ಬಹುನಿರೀಕ್ಷಿತ ಆದೇಶವನ್ನು ಶುಕ್ರವಾರ ಪ್ರಕಟಿಸಿದೆ. ದರ್ಶನ್, ಪವಿತ್ರ ಗೌಡ, ಆರ್ ನಾಗರಾಜು, ಎಂ ಲಕ್ಷ್ಮಣ್, ಅನು ಕುಮಾರ್ ಅಲಿಯಾಸ್ ಅನು, ಜಗದೀಶ್ ಅಲಿಯಾಸ್ ಜಗ್ಗ, ಪ್ರದೋಷ್ ಗೆ ಜಾಮೀನು ಮಂಜೂರು ಮಾಡಿದೆ.
ನಟ ದರ್ಶನ್ ಜುಲೈ 11ರಂದು ಪೊಲೀಸರಿಂದ ಬಂಧನಕ್ಕೆ ಒಳಗಾಗಿದ್ದರು. ಪ್ರಸ್ತುತ ಅವರು ಅನಾರೋಗ್ಯದ ಕಾರಣ ನೀಡಿ ಹೈಕೋರ್ಟ್ ನಿಂದ ಮಧ್ಯಂತರ ಜಾಮೀನು ಪಡೆದಿದ್ದಾರೆ, ಈಗ ಅವರಿಗೆ ಜಾಮೀನು ಮಂಜೂರಾಗಿದ್ದು ತಾತ್ಕಾಲಿಕ ನಿರಾಳತೆ ದೊರಕಿದೆ .
ಇದೇ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ನಾಲ್ವರಿಗೆ ಈ ಹಿಂದೆಯೇ ಜಾಮೀನು ದೊರೆತಿತ್ತು, ಇಂದು ಏಳು ಮಂದಿಗೆ ಜಾಮೀನು ದೊರೆತಿದೆ, ಆ ಮೂಲಕ ಈ ಪ್ರಕರಣದ 11 ಆರೋಪಿಗಳಿಗೆ ಜಾಮೀನು ದೊರೆತಂತಾಗಿದೆ. ಜಾಮೀನಿನಿಂದ ದರ್ಶನ್ ಗೆ ನಿರಾಳತೆ ದೊರೆತಿದ್ದು ಅವರ ಮೇಲೆ ಈಗ ಶಸ್ತ್ರ ಚಿಕಿತ್ಸೆ ಮಾಡಿಕೊಳ್ಳಬೇಕಾದ ಒತ್ತಡವು ತೊಲಗಿದೆ, ಮಾತ್ರವಲ್ಲದೆ ನಿಂತಿರುವ ಸಿನಿಮಾಗಳ ಚಿತ್ರಿಕರಣಕ್ಕೂ ಅವರು ತೆರಳಬಹುದಾಗಿದೆ.



Related posts

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಧರ್ಮಪಾಲ್ ದೇವಾಡಿಗ ಮತ್ತು ಚಂದ್ರಶೇಖರ್ ಬೆಳ್ಚಡ ಇವರಿಂದ ಡಾ. ವೀರೇಂದ್ರ ಹೆಗ್ಗಡೆ ಭೇಟಿ: ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಬಗ್ಗೆ ಸಮಾಲೋಚನೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (13/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಉಭಯ ಜಿಲ್ಲೆಗಳ ಹೆದ್ದಾರಿ ಸಮಸ್ಯೆಯ ಪರಿಹಾರಕ್ಕೆ ಕೇಂದ್ರ ಸಚಿವರನ್ನು ಭೇಟಿಯಾದ ಉಡುಪಿ/ ಮಂಗಳೂರು ಸಂಸದರು

Mumbai News Desk

ಹುಬ್ಬಳ್ಳಿ : ಭಾವ ಸಂಗಮ ಮತ್ತು ಉಮಾಶಂಕರ ಪ್ರತಿಷ್ಠಾನದ ಸಹಯೋಗದಲ್ಲಿ ಆಯೋಜಿಸಿದ ಸ್ವರ್ಣಸಿರಿ ಕಾವ್ಯಝರಿ ಸ್ಪರ್ಧಾ ಫಲಿತಾಂಶ

Mumbai News Desk