32 C
Mumbai
March 7, 2026
Mumbai News Kannada
ಪ್ರಕಟಣೆ

ಡಿ. 21: ಮುಂಬಯಿ ಕನ್ನಡ ಸಂಘದ ದತ್ತಿ ಉಪನ್ಯಾಸ ಕಾರ್ಯಕ್ರಮ






ಕಳೆದ ಎಂಟು ದಶಕಗಳಿಗೂ ಹೆಚ್ಚು ಕಾಲದಿಂದ ಮುಂಬಯಿಯಲ್ಲಿ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಜರಗಿಸುತ್ತಾ ನ್ನಡದ ಪರಿಚಾರಿಕೆಯಲ್ಲಿ ತೊಡಗಿಕೊಂಡಿದ್ದು ಮುಂಬಯಿ ಕನ್ನಡಿಗರ ಗೌರವಾದರಗಳಿಗೆ ಪಾತ್ರವಾಗಿರುವ ಮಾಟುಂಗಾ [ಪೂರ್ವ]ದ ಮುಂಬಯಿ ಕನ್ನಡ ಸಂಘದವು ಕಳೆದ ಅನೇಕ ವರ್ಷಗಳಿಂದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ. ಈ ವರ್ಷ ಈ ಕಾರ್ಯಕ್ರಮವನ್ನು ಇದೇ ಬರುವ ಶನಿವಾರ ಡಿಸೆಂಬರ್ 21 ರಂದು ಸಂಜೆ ಗಂಟೆ 5.30 ಕ್ಕೆ ಮಾಟುಂಗಾದ ಮೈಸೂರು ಅಸೋಸಿಯೇಷನ್‌ನ ತಳ ಮಹಡಿಯಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಖಾಲ್ಕಾ ಕಾಲೇಜು ಕನ್ನಡ ಪ್ರೇಮಿ ಮಂಡಳಿ ದತ್ತಿ ನಿಧಿಯ ಉಪನ್ಯಾಸಕರಾಗಿ ಲೇಖಕಿ, ಕವಯಿತ್ರಿ ಗಾಯತ್ರಿ ನಾಗೇಶ್ ಇವರು “ಮುಂಬಯಿಯಲ್ಲಿ ಕನ್ನಡದ ಭವಿಷ್ಯ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ದಿ. ಜಿ.ವಿ.ರಂಗಸ್ವಾಮಿ ದತ್ತಿ ನಿಧಿಯ ಉಪನ್ಯಾಸಕರಾಗಿ ಹಿರಿಯ ರಂಗ ನಟ, ನಿರ್ದೇಶಕ, ಲೇಖಕ ಹಾಗೂ ಯಕ್ಷಗಾನ ಕಲಾವಿದ ಉಡುಪಿ ಗುಣಪಾಲ ಇವರು ” ರಂಗಭೂಮಿ- ಕಲಾವೈಭವ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಂಗ ಕಲಾವಿದೆ, ಕವಯಿತ್ರಿ, ಸಂಘಟಕಿ ಹಾಗೂ ಖಾರ್ಘರ್ ಕರ್ನಾಟಕ ಸಂಘದ ಗೌರವ ಅಧ್ಯಕ್ಷೆ, ಎಸ್.ನಳಿನಾ ಪ್ರಸಾದ್‌ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಮುಂಬಯಿ ಕನ್ನಡ ಸಂಘದ ಅಧ್ಯಕ್ಷ ಗುರುರಾಜ ಎಸ್.ನಾಯಕ್ ಅಧ್ಯಕ್ಷತೆ ವಹಿಸಲಿದ್ದು ಸಂಘದ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್.ಕರ್ಕೇರರು ಕಾರ್ಯಕ್ರಮದ ನಿರ್ವಹಣೆ ಮಾಡುತ್ತಾರೆ. ಸಾಹಿತ್ಯಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಬೇಕೆಂದು ಸಂಘದ ಜೊತೆ ಕಾರ್ಯದರ್ಶಿ ಮಲ್ಲಿಕಾರ್ಜುನ ಬಡಿಗೇರರು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಗಳಿಗಾಗಿ 9819321186 ಈ ನಂಬ್ರವನ್ನು ಸಂಪರ್ಕಿಸಬಹುದಾಗಿದೆ.
-ಸೋಮನಾಥ ಎಸ್. ಕರ್ಕೇರ, ಮುಂಬಯಿ



Related posts

ಮೂಲ್ಕಿ : ನ. 30ರಂದು ಹರಿಶ್ಚಂದ್ರ ಪಿ ಸಾಲ್ಯಾನ್ ಅವರ “ಮುಲ್ಕಿಯ ಕೀರ್ತಿಶೇಷ ಸಾಧಕರು ” ಕ್ರತಿ ಬಿಡುಗಡೆ ಸಮಾರಂಭ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿ, ಮಾ 16 ರಂದು ವಿದ್ಯಾರ್ಥಿ ವೇತನ, ವಿಕಲಚೇತನ ಹಾಗೂ ವಿಧವಾ ವೇತನಗಳಿಗೆ ಅರ್ಜಿಗಳ ಆಹ್ವಾನ,

Mumbai News Desk

ಅ.10 ; ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಸಾಂಸ್ಕೃತಿಕ ವೈಭವ, ಯಕ್ಷಗಾನ ತಾಳಮದ್ದಳೆ, ಸನ್ಮಾನ.

Mumbai News Desk

ಕರ್ನಾಟಕ ಸಂಘ ಕಲ್ಯಾಣ: ಮಾ. 9ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Mumbai News Desk

ನ. 30 ರಂದು ಡೊಂಬಿವಲಿ ಶ್ರೀ ಜಗದಂಬಾ ಮಂದಿರದ ವಠಾರದಲ್ಲಿ “ಕುಲದೈವೋ ಬ್ರಹ್ಮ” ಯಕ್ಷಗಾನ ಪ್ರದರ್ಶನ

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಕರ್ನಿರೆ ಎ 1 ರಿಂದ 3 ವರೆಗೆ    ಜಾರಂದಾಯ ದೈವದ ಕಾಲಾವಧಿ ನೇಮೋತ್ಸವ,

Mumbai News Desk