32 C
Mumbai
April 24, 2026
Mumbai News Kannada
ಪ್ರಕಟಣೆ

ಡಿ. 21: ಮುಂಬಯಿ ಕನ್ನಡ ಸಂಘದ ದತ್ತಿ ಉಪನ್ಯಾಸ ಕಾರ್ಯಕ್ರಮ






ಕಳೆದ ಎಂಟು ದಶಕಗಳಿಗೂ ಹೆಚ್ಚು ಕಾಲದಿಂದ ಮುಂಬಯಿಯಲ್ಲಿ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಜರಗಿಸುತ್ತಾ ನ್ನಡದ ಪರಿಚಾರಿಕೆಯಲ್ಲಿ ತೊಡಗಿಕೊಂಡಿದ್ದು ಮುಂಬಯಿ ಕನ್ನಡಿಗರ ಗೌರವಾದರಗಳಿಗೆ ಪಾತ್ರವಾಗಿರುವ ಮಾಟುಂಗಾ [ಪೂರ್ವ]ದ ಮುಂಬಯಿ ಕನ್ನಡ ಸಂಘದವು ಕಳೆದ ಅನೇಕ ವರ್ಷಗಳಿಂದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ. ಈ ವರ್ಷ ಈ ಕಾರ್ಯಕ್ರಮವನ್ನು ಇದೇ ಬರುವ ಶನಿವಾರ ಡಿಸೆಂಬರ್ 21 ರಂದು ಸಂಜೆ ಗಂಟೆ 5.30 ಕ್ಕೆ ಮಾಟುಂಗಾದ ಮೈಸೂರು ಅಸೋಸಿಯೇಷನ್‌ನ ತಳ ಮಹಡಿಯಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಖಾಲ್ಕಾ ಕಾಲೇಜು ಕನ್ನಡ ಪ್ರೇಮಿ ಮಂಡಳಿ ದತ್ತಿ ನಿಧಿಯ ಉಪನ್ಯಾಸಕರಾಗಿ ಲೇಖಕಿ, ಕವಯಿತ್ರಿ ಗಾಯತ್ರಿ ನಾಗೇಶ್ ಇವರು “ಮುಂಬಯಿಯಲ್ಲಿ ಕನ್ನಡದ ಭವಿಷ್ಯ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ದಿ. ಜಿ.ವಿ.ರಂಗಸ್ವಾಮಿ ದತ್ತಿ ನಿಧಿಯ ಉಪನ್ಯಾಸಕರಾಗಿ ಹಿರಿಯ ರಂಗ ನಟ, ನಿರ್ದೇಶಕ, ಲೇಖಕ ಹಾಗೂ ಯಕ್ಷಗಾನ ಕಲಾವಿದ ಉಡುಪಿ ಗುಣಪಾಲ ಇವರು ” ರಂಗಭೂಮಿ- ಕಲಾವೈಭವ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಂಗ ಕಲಾವಿದೆ, ಕವಯಿತ್ರಿ, ಸಂಘಟಕಿ ಹಾಗೂ ಖಾರ್ಘರ್ ಕರ್ನಾಟಕ ಸಂಘದ ಗೌರವ ಅಧ್ಯಕ್ಷೆ, ಎಸ್.ನಳಿನಾ ಪ್ರಸಾದ್‌ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಮುಂಬಯಿ ಕನ್ನಡ ಸಂಘದ ಅಧ್ಯಕ್ಷ ಗುರುರಾಜ ಎಸ್.ನಾಯಕ್ ಅಧ್ಯಕ್ಷತೆ ವಹಿಸಲಿದ್ದು ಸಂಘದ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್.ಕರ್ಕೇರರು ಕಾರ್ಯಕ್ರಮದ ನಿರ್ವಹಣೆ ಮಾಡುತ್ತಾರೆ. ಸಾಹಿತ್ಯಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಬೇಕೆಂದು ಸಂಘದ ಜೊತೆ ಕಾರ್ಯದರ್ಶಿ ಮಲ್ಲಿಕಾರ್ಜುನ ಬಡಿಗೇರರು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಗಳಿಗಾಗಿ 9819321186 ಈ ನಂಬ್ರವನ್ನು ಸಂಪರ್ಕಿಸಬಹುದಾಗಿದೆ.
-ಸೋಮನಾಥ ಎಸ್. ಕರ್ಕೇರ, ಮುಂಬಯಿ



Related posts

ಶ್ರೀ ಮಹಾವಿಷ್ಣು ಮಂದಿರ: ಜುಲೈ -27 ರಂದು 48 ನೇ ವಾರ್ಷಿಕ ಮಹಾಸಭೆ.

Mumbai News Desk

    ಕುಲಾಲ ಸಂಘ ಮುಂಬಯಿ :  ಅ 27ರಂದು  94ನೇ ವಾರ್ಷಿಕ ಮಹಾಸಭೆ.

Mumbai News Desk

ಫೆ. 02 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ

Mumbai News Desk

ಶ್ರೀ ಬಾಲಾಜಿ ಸನ್ನಿಧಿ ಪಲಿಮಾರ್ ಮಠ ಜ. 26ರಂದು ವಾರ್ಷಿಕ ಏಕಾಹ ಭಜನಾ ಕಾರ್ಯಕ್ರಮ

Mumbai News Desk

ಮೈಸೂರು ಅಸೋಸಿಯೇಷನ್,  ಮುಂಬಯಿ ಪೆ  17 ರಿಂದ 19 ರವರಿಗೆ* ಶ್ರೀರಂಗ ರಂಗೋತ್ಸವ*

Mumbai News Desk

ಗಣೇಶಪುರಿ ಶ್ರೀ ನಿತ್ಯಾನಂದ ಬಾಬಾ ದರ್ಶನದಲ್ಲಿ ತಾತ್ಕಾಲಿಕ ಬದಲಾವಣೆ: ವಿಗ್ರಹ ನವೀಕರಣ ಹಿನ್ನೆಲೆ ಏಪ್ರಿಲ್ 27 ರಿಂದ ದರ್ಶನ ಸ್ಥಗಿತ

Mumbai News Desk