July 23, 2026
Mumbai News Kannada
ಪ್ರಕಟಣೆ

ಡಿ. 21: ಮುಂಬಯಿ ಕನ್ನಡ ಸಂಘದ ದತ್ತಿ ಉಪನ್ಯಾಸ ಕಾರ್ಯಕ್ರಮ








ಕಳೆದ ಎಂಟು ದಶಕಗಳಿಗೂ ಹೆಚ್ಚು ಕಾಲದಿಂದ ಮುಂಬಯಿಯಲ್ಲಿ ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳನ್ನು ಜರಗಿಸುತ್ತಾ ನ್ನಡದ ಪರಿಚಾರಿಕೆಯಲ್ಲಿ ತೊಡಗಿಕೊಂಡಿದ್ದು ಮುಂಬಯಿ ಕನ್ನಡಿಗರ ಗೌರವಾದರಗಳಿಗೆ ಪಾತ್ರವಾಗಿರುವ ಮಾಟುಂಗಾ [ಪೂರ್ವ]ದ ಮುಂಬಯಿ ಕನ್ನಡ ಸಂಘದವು ಕಳೆದ ಅನೇಕ ವರ್ಷಗಳಿಂದ ದತ್ತಿ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸುತ್ತಾ ಬಂದಿದೆ. ಈ ವರ್ಷ ಈ ಕಾರ್ಯಕ್ರಮವನ್ನು ಇದೇ ಬರುವ ಶನಿವಾರ ಡಿಸೆಂಬರ್ 21 ರಂದು ಸಂಜೆ ಗಂಟೆ 5.30 ಕ್ಕೆ ಮಾಟುಂಗಾದ ಮೈಸೂರು ಅಸೋಸಿಯೇಷನ್‌ನ ತಳ ಮಹಡಿಯಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಖಾಲ್ಕಾ ಕಾಲೇಜು ಕನ್ನಡ ಪ್ರೇಮಿ ಮಂಡಳಿ ದತ್ತಿ ನಿಧಿಯ ಉಪನ್ಯಾಸಕರಾಗಿ ಲೇಖಕಿ, ಕವಯಿತ್ರಿ ಗಾಯತ್ರಿ ನಾಗೇಶ್ ಇವರು “ಮುಂಬಯಿಯಲ್ಲಿ ಕನ್ನಡದ ಭವಿಷ್ಯ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ದಿ. ಜಿ.ವಿ.ರಂಗಸ್ವಾಮಿ ದತ್ತಿ ನಿಧಿಯ ಉಪನ್ಯಾಸಕರಾಗಿ ಹಿರಿಯ ರಂಗ ನಟ, ನಿರ್ದೇಶಕ, ಲೇಖಕ ಹಾಗೂ ಯಕ್ಷಗಾನ ಕಲಾವಿದ ಉಡುಪಿ ಗುಣಪಾಲ ಇವರು ” ರಂಗಭೂಮಿ- ಕಲಾವೈಭವ” ಎಂಬ ವಿಷಯದ ಮೇಲೆ ಉಪನ್ಯಾಸ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ರಂಗ ಕಲಾವಿದೆ, ಕವಯಿತ್ರಿ, ಸಂಘಟಕಿ ಹಾಗೂ ಖಾರ್ಘರ್ ಕರ್ನಾಟಕ ಸಂಘದ ಗೌರವ ಅಧ್ಯಕ್ಷೆ, ಎಸ್.ನಳಿನಾ ಪ್ರಸಾದ್‌ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಮುಂಬಯಿ ಕನ್ನಡ ಸಂಘದ ಅಧ್ಯಕ್ಷ ಗುರುರಾಜ ಎಸ್.ನಾಯಕ್ ಅಧ್ಯಕ್ಷತೆ ವಹಿಸಲಿದ್ದು ಸಂಘದ ಪ್ರಧಾನ ಕಾರ್ಯದರ್ಶಿ ಸೋಮನಾಥ ಎಸ್.ಕರ್ಕೇರರು ಕಾರ್ಯಕ್ರಮದ ನಿರ್ವಹಣೆ ಮಾಡುತ್ತಾರೆ. ಸಾಹಿತ್ಯಾಭಿಮಾನಿಗಳು ಅಧಿಕ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮದ ಶೋಭೆಯನ್ನು ಹೆಚ್ಚಿಸಬೇಕೆಂದು ಸಂಘದ ಜೊತೆ ಕಾರ್ಯದರ್ಶಿ ಮಲ್ಲಿಕಾರ್ಜುನ ಬಡಿಗೇರರು ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ವಿವರಗಳಿಗಾಗಿ 9819321186 ಈ ನಂಬ್ರವನ್ನು ಸಂಪರ್ಕಿಸಬಹುದಾಗಿದೆ.
-ಸೋಮನಾಥ ಎಸ್. ಕರ್ಕೇರ, ಮುಂಬಯಿ



Related posts

ಯುವ ಮಿತ್ರ ಮಂಡಳಿ ಮೀರಾ ರೋಡ್ 28ನೇ ವರ್ಷದ ಗಣೇಶ ಉತ್ಸವ ಸಂಭ್ರಮ.

Mumbai News Desk

ಎ 4: ಮೀರಾ – ಭಾಯಂದರ್ ತುಳು – ಕನ್ನಡಿರಿಂದ ಸಾರಿಗೆ ಸಚಿವ ಪ್ರತಾಪ್ ಸರ್ ನಾಯಕ್ ಅವರಿಗೆ ಸನ್ಮಾನ.

Mumbai News Desk

ಜೂನ್ 25 ರಂದು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಸ್ವರ್ಣ ಸಂಕಲ್ಪ

Mumbai News Desk

ಶ್ರೀ ಅಯ್ಯಪ್ಪ ಸೇವಾ ಸಮಿತಿ (ರಿ), ಕಿಸಾನ್ ನಗರ ಥಾಣೆ :ಡಿ. 19ರಿಂದ 21ರ ತನಕ ರಜತ ಮಹೋತ್ಸವ, 25ನೇ ವಾರ್ಷಿಕ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಡಿ14. ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ ಬಂಟರ ಮಹಾಸಮಾಗಮ”

Mumbai News Desk

ಜ. 1 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ನಲ್ಲಿ ಸತ್ಯನಾರಾಯಣ ಮಹಾಪೂಜೆ ಮತ್ತು ಅನ್ನ ಸಂತರ್ಪಣೆ

Mumbai News Desk