32 C
Mumbai
March 7, 2026
Mumbai News Kannada
ಸುದ್ದಿ

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್





ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್​ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸ್​ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್​ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ
ಮೃತ ಮಹಿಳೆಯ ಕುಟುಂಬಕ್ಕೆ ಸ್ವತಃ ಅಲ್ಲು ಅರ್ಜುನ್ 25ಲಕ್ಷ ರೂಪಾಯಿ ಪರಿಹಾರ ಘೋಶಿಸಿದ್ದರು, ಇದರ ನಡುವೆ ಇಂದು ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂದಿಸಿದ್ದು ಅಭಿಮಾನಿಗಳು ಶಾಕ್ ಆಗಿದ್ದಾರೆ. ಪುಷ್ಪ 2 ಒಂದೇ ವಾರದಲ್ಲಿ ಸಾವಿರ ಕೋಟಿ ದುಡ್ಡು ಮಾಡಿದ ಪುಷ್ಪ 2 ಸಿನಿಮಾವೇ ಅಲ್ಲು ಅರ್ಜುನ್ ಗೆ ಮುಳುವಾಗಿದೆ.



Related posts

ಥೈಲ್ಯಾಂಡ್ ನಲ್ಲಿ ಅಂತರಾಷ್ಟ್ರೀಯ ಎಂಡ್ಯೂರೆನ್ಸ್ ಸ್ಕೇಟಿಂಗ್ ಚಾಂಪಿಯನ್‌ಶಿಪ್: ದಿವಿನಾ ಸಿ. ಕಣ್ಣಂಗಾರ್ ಹ್ಯಾಟ್ರಿಕ್ ಚಿನ್ನದ ಪದಕ.

Mumbai News Desk

ಮುಂಬಯಿಯಲ್ಲಿ ಜರಗಲಿರುವ ಶ್ರೀ ವಿಶ್ವಪ್ರಸನ್ನ ತೀರ್ಥರ ಜನ್ಮವರ್ದಂತಿ ಬಗ್ಗೆ ಪೂರ್ವಭಾವಿ ಸಭೆ.

Mumbai News Desk

ಭಾರತ ಮತ್ತು ಅಮೆರಿಕ ನಡುವಿನ ಐತಿಹಾಸಿಕ ವ್ಯಾಪಾರ ಒಪ್ಪಂದ 2026: ಸುಂಕ ಕಡಿತ ಮತ್ತು ಆರ್ಥಿಕ ಸಹಭಾಗಿತ್ವದ ಹೊಸ ಯುಗ

Mumbai News Desk

ಐ ಸಿ ಎಸ್ ಸಿ 10ನೇ ತರಗತಿ ಪರೀಕ್ಷೆ – 2024 : ಕುಶಿ ಉದಯ ಶೆಟ್ಟಿಗೆ ಶೇ 92 ಅಂಕ

Mumbai News Desk

ಮಹಾರಾಷ್ಟ್ರ, ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ : ನ. 20 ರಂದು ರಾಜ್ಯದಲ್ಲಿ ಮತದಾನ

Mumbai News Desk

ಜ.11 : ಡಿವೈನ್ ಪಾರ್ಕ್‌ನ ಮಹಾರಾಷ್ಟ್ರ ಘಟಕದ ವತಿಯಿಂದ ಡಾಕ್ಟರ್‌ಜೀ ಅವರಿಗೆ ಶ್ರದ್ಧಾಂಜಲಿ ಹಾಗೂ ಪ್ರಾರ್ಥನಾ ಸಭೆ

Mumbai News Desk