30.5 C
Mumbai
June 8, 2026
Mumbai News Kannada
ಸುದ್ದಿ

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್





ಕೆಲ ದಿನಗಳ ಹಿಂದೆ ‘ಪುಷ್ಪ 2’ ಸಿನಿಮಾ ಬಿಡುಗಡೆ ವೇಳೆ ಅಲ್ಲು ಅರ್ಜುನ್ ಸಂಧ್ಯಾ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದರು. ಈ ವೇಳೆ ನಡೆದ ಕಾಲ್ತುಳಿತದಲ್ಲಿ ಒಬ್ಬ ಮಹಿಳೆ ನಿಧನ ಹೊಂದಿದ್ದರು. ಅವರ ಪುತ್ರ ತೀವ್ರವಾಗಿ ಗಾಯಗೊಂಡಿದ್ದರು. ಈ ಘಟನೆ ಕುರಿತಂತೆ ನಟ ಅಲ್ಲು ಅರ್ಜುನ್ ಹಾಗೂ ಇನ್ನೂ ಇತರರ ವಿರುದ್ಧ ದೂರು ದಾಖಲಾಗಿತ್ತು. ಇದೀಗ ನಟ ಅಲ್ಲು ಅರ್ಜುನ್ ಹಾಗೂ ಅವರ ಬಾಡಿಗಾರ್ಡ್​ ಇನ್ನಿತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಪ್ರಕರಣ ಕುರಿತು ಈ ಮೊದಲೇ ಹೈದರಾಬಾದ್, ಚೀಕಟಪಲ್ಲಿ ಪೊಲೀಸರು ನೊಟೀಸ್ ನೀಡಿದ್ದರು. ಆದರೆ ನೊಟೀಸ್​ಗೆ ಅಲ್ಲು ಅರ್ಜುನ್ ಉತ್ತರ ನೀಡಿರಲಿಲ್ಲ ಎನ್ನಲಾಗಿದೆ. ಆದರೆ ಅಲ್ಲು ಅರ್ಜುನ್, ಪ್ರಕರಣವನ್ನು ರದ್ದು ಮಾಡುವಂತೆ ತೆಲಂಗಾಣ ಹೈಕೋರ್ಟ್​ಗೆ ಮನವಿ ಸಲ್ಲಿಸಿದ್ದರು. ಆದರೆ ಅರ್ಜಿಯ ವಿಚಾರಣೆ ಇನ್ನೂ ನಡೆದಿಲ್ಲ.

ಈಗಾಗಲೇ ಇದೇ ಪ್ರಕರಣದಲ್ಲಿ ಸಂಧ್ಯಾ ಚಿತ್ರಮಂದಿರದ ಮಾಲೀಕ, ಚಿತ್ರಮಂದಿರದ ಮ್ಯಾನೇಜರ್ ಹಾಗೂ ಕಾಲ್ತುಳಿತ ನಡೆದ ದಿನ ಅಲ್ಲು ಅರ್ಜುನ್ ಜೊತೆಗೆ ಇದ್ದ ಕೆಲವು ಬೌನ್ಸರ್​ಗಳನ್ನು ಸಹ ಈಗಾಗಲೇ ಬಂಧಿಸಲಾಗಿದೆ. ಅಲ್ಲು ಅರ್ಜುನ್ ವಿರುದ್ಧ 105, 118 (5) ಸೆಕ್ಷನ್ ಅಡಿಯಲ್ಲಿ ದೂರು ದಾಖಲಿಸಲಾಗಿದೆ
ಮೃತ ಮಹಿಳೆಯ ಕುಟುಂಬಕ್ಕೆ ಸ್ವತಃ ಅಲ್ಲು ಅರ್ಜುನ್ 25ಲಕ್ಷ ರೂಪಾಯಿ ಪರಿಹಾರ ಘೋಶಿಸಿದ್ದರು, ಇದರ ನಡುವೆ ಇಂದು ಪೊಲೀಸರು ಅಲ್ಲು ಅರ್ಜುನ್ ಅವರನ್ನು ಬಂದಿಸಿದ್ದು ಅಭಿಮಾನಿಗಳು ಶಾಕ್ ಆಗಿದ್ದಾರೆ. ಪುಷ್ಪ 2 ಒಂದೇ ವಾರದಲ್ಲಿ ಸಾವಿರ ಕೋಟಿ ದುಡ್ಡು ಮಾಡಿದ ಪುಷ್ಪ 2 ಸಿನಿಮಾವೇ ಅಲ್ಲು ಅರ್ಜುನ್ ಗೆ ಮುಳುವಾಗಿದೆ.



Related posts

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಪತ್ರಕರ್ತ ಬಾಳ ಜಗನ್ನಾಥ ಶೆಟ್ಟಿ,   ಮಹಿಳಾ ವೇದಿಕೆಯ ಅಧ್ಯಕ್ಷರಾಗಿ ಸರೋಜ ಶೆಟ್ಟಿ ಆಯ್ಕೆ.

Mumbai News Desk

ಶ್ರೀ ಭಗವತೀ ಕ್ಷೇತ್ರ ಉಪ್ಪಳ, ಮುಂಬಯಿ ಸಮಿತಿ ರಚನೆ

Mumbai News Desk

ಉಡುಪಿ : ಪೊಲೀಸರಿಂದ ಯುವತಿಗೆ ಹಲ್ಲೆ ಪ್ರಕರಣ, ಬಿಲ್ಲವ ಸಮುದಾಯದ ಆಕ್ರೋಶ – ಘಟನೆಯ ಹಿನ್ನೆಲೆ ಏನು?

Mumbai News Desk

ಮುಂಬೈ: ಅಪ್ಪಾಜಿ ಬೀಡು ರಮೇಶ್ ಗುರುಸ್ವಾಮಿ ಇನ್ನಿಲ್ಲ

Mumbai News Desk

ವಿಶ್ವನಾಥ ಯು. ಮಾಡಾ ನಿಧನಕ್ಕೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಸಂತಾಪ

Mumbai News Desk

ದ್ವಿತೀಯ ಪಿಯುಸಿ ಪರೀಕ್ಷೆ : 96% ಅಂಕ ಪಡೆದ ಸೃಜನ್ ಬಿ ಮೊಗವೀರ

Mumbai News Desk