July 23, 2026
Mumbai News Kannada
ಪ್ರಕಟಣೆ

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ







   ✒️ ಸುದ್ದಿ ವಿವರ :    ಪಿ.ಆರ್.ರವಿಶಂಕರ್ 8483980035

ಬೊಯಿಸರ್ ಪಶ್ಚಿಮದಲ್ಲಿನ ಸಿಡ್ಕೋ ವಲಯದಲ್ಲಿನ (ರೈಲ್ವೇ ಸ್ಟೇಷನ್ ಚಿತ್ರಾಲಯ ರಸ್ತೆ) ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಇದೇ ಬರುವ  ತಾ.18 ನೆಯ ಬುಧವಾರ 2024 ರಂದು ಸಂಜೆ  ಶ್ರೀ ಗಣೇಶ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ಪೂಜೆಯು ವಿದ್ಯುಕ್ತವಾಗಿ ಜರಗಲಿದೆ.

    ಸಂಜೆ 6 ಗಂಟೆಯಿಂದ 8 ರ  ತನಕ ಶ್ರೀ ಜಯಶೀಲ ಗುರುಸ್ವಾಮಿಯವರ  ಉಪಸ್ಥಿತಿಯಲ್ಲಿ ಮೀರಾ ರೋಡ್ ನ ಸುಪ್ರಸಿದ್ಧ ಲಕ್ಶ್ಮೀನಾರಾಯಣ ಭಜನಾ ಮಂಡಲಿಯವರಿಂದ ಭಕ್ತಿ ಭಜನಾ ಕಾರ್ಯಕ್ರಮವಿದೆ.   8 ರಿಂದ 8.30 ರ ತನಕ ಮಹಾ ಮಂಗಳಾರತಿ ಹಾಗೂ ತೀರ್ಥಪ್ರಸಾದ ,  8.30 ರಿಂದ 8.45 ರ ತನಕ ಹರಿವರಾಸನಮ್

ಜರಗಲಿದ್ದು ಬಳಿಕ ಪ್ರಸಾದ ರೂಪದಲ್ಲಿ ಅನ್ನದಾನ ಜರಗಲಿದೆ.

   ಸರ್ವ ಭಕ್ತಾದಿಗಳ ಜೀವನದಲ್ಲಿ ಉತ್ತಮ ಆರೋಗ್ಯ , ಸಂತಸ ಹಾಗೂ ಸುಭಿಕ್ಷತೆಯ ಪ್ರಾರ್ಥನೆಗಳೊಂದಿಗೆ ಶ್ರೀ ಗಣೇಶ ಅಯ್ಯಪ್ಪ ಮಂದಿರದ ದಿವ್ಯ ಸನ್ನಿಧಿಯಲ್ಲಿ ಜರಗುವ ಈ ಪವಿತ್ರ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸರ್ವ ಭಕ್ತಾಭಿಮಾನಿಗಳು ಕುಟುಂಬ ಸಮೇತ ಭಾಗವಹಿಸಿ ಕೃಪಾನುಗ್ರಹಿತರಾಗಬೇಕಾಗಿ ಆಯೋಜಕರಾದ ದಯಾನಂದ  ಶೆಟ್ಟಿ ಹಾಗೂ ಸಂತೋಷ ಸ್ವಾಮಿ ( ತುಂಗಾ ಹಾಸ್ಪಿಟಲ್ಸ್) ಇವರು ಪ್ರಕಟಣೆಯ ಮೂಲಕ ವಿನಂತಿಸಿಕೊಂಡಿದ್ದಾರೆ.

ಸುದ್ದಿ ವಿವರ : ಪಿ.ಆರ್.ರವಿಶಂಕರ್



Related posts

ದೊಡ್ಡಣ್ಣ ಗುಡ್ಡೆ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ , ಮೇ 2 :: ಶ್ರೀ ಕುಬೇರ ಲಕ್ಷ್ಮಿ ಪ್ರತಿಷ್ಠಾವರ್ಧಂತಿ 

Mumbai News Desk

ಶ್ರೀ ರಜಕ ಸಂಘ ಮುಂಬಯಿ, ಜ.6 ರಂದು ಸಾಮೂಹಿಕ ಶ್ರೀ ಸತ್ಯ ನಾರಾಯಣ ಮಹಾಪೂಜೆ

Mumbai News Desk

ಜೂ.1ರಂದು ಮುಂಬಯಿಯ ಉದ್ಯಮಿ ಸುರೇಶ್ ಕಾಂಚನ್ ನೇತೃತ್ವದಲ್ಲಿ ಹುಟ್ಟೂರು ಉಪ್ಪಿನಕುದ್ರು ಶಾಲೆಯಲ್ಲಿ ವಿದ್ಯಾರ್ಥಿ ವೇತನ, ಪುಸ್ತಕ ವಿತರಣೆ, ಆರ್ಥಿಕ ನೆರವು ಕಾರ್ಯಕ್ರಮ.

Mumbai News Desk

ಕುಮಾರ  ಕ್ಷತ್ರಿಯ ಸಂಘ  ಮುಂಬಯಿ: ಫೆಬ್ರವರಿ 11 : 58 ನೇ ವಾರ್ಷಿಕ ಮಹಾಸಭೆ , ಸತ್ಯನಾರಾಯಣ ಮಹಾಪೂಜೆ, ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ನ. 19 ರಂದು ಕನ್ನಡ ಸಾಂಸ್ಕೃತಿಕ ಕೇಂದ್ರ ಕಲ್ಯಾಣ್ (ರಿ) – 21ನೇ ವಾರ್ಷಿಕೋತ್ಸವ.

Mumbai News Desk

ಮಲಾಡ್: ಜ. 3ರಂದು ಶ್ರೀ ದೇವಿ ಮಹಮ್ಮಾಯಿ ದೇವಸ್ಥಾನದಲ್ಲಿ ಅಯ್ಯಪ್ಪ ಮಹಾಪೂಜೆ

Mumbai News Desk