July 23, 2026
Mumbai News Kannada
ಕ್ರೀಡೆ

ಆದರ್ಶ ವಿದ್ಯಾನಿಕೇತನ ಪ್ರೌಢಶಾಲೆ,ಮೀರಾ ರೋಡ್ ನ,ವಾರ್ಷಿಕ ಕ್ರೀಡಾಕೂಟ,







ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯಲ್ಲಿ ತೊಡಗಿ ಕೊಂಡಾಗ ಬದುಕು ರೂಪಿಸಲು ಸುಗಮ : ಅಜಿತ್ ರೈ

ಮೀರಾ – ಭಾಯಂದರ್ ನ ಸಮಾಜ ಸೇವಕ, ಶಿಕ್ಷಣ ಪ್ರೇಮಿ ಡಾ. ಅರುಣೋದಯ ಎಸ್ ರೈ ಅವರು ಸ್ಥಾಪಿಸಿದರೈ ಸುಮತಿ ಎಜುಕೇಷನಲ್ ಟ್ರಸ್ಟ್ ನಡೆಸುತ್ತಿರುವ ಆದರ್ಶ ವಿದ್ಯಾನಿಕೇತನ ಪ್ರೌಢಶಾಲೆ,ಮೀರಾ ರೋಡ್ ನ,ವಾರ್ಷಿಕ ಕ್ರೀಡಾಕೂಟವು ಡಿ13 ರಂದು ಆದರ್ಶ ವಿದ್ಯಾನಿಕೇತನ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಕಾಶಿಗಾಂವ್‌ನ ಪೊಲೀಸ್ ಠಾಣೆಯ ಸೀನಿಯರ್ ಇನ್ಸ್‌ಪೆಕ್ಟರ್ ಮಹೇಶ್ ತೊಗರವಾಡ್,ಮತ್ತು ಯುನೈಟೆಡ್ ರಬ್ಬರ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಅಜಿತ್ ರೈ ಗೌರವ ಅತಿಥಿಯಾಗಿ ಭಾಗವಹಿಸಿದ್ದರು.ಡಾ. ಅರುಣೋದಯ ಎಸ್ ರೈ ಮತ್ತು ಲಕ್ಷ್ಮಿ ಯಾದವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಬೆಂಬಲ ಮತ್ತು ಪ್ರೋತ್ಸಾಹವನ್ನು ನೀಡಿದರು.

ಸೀನಿಯರ್ ಇನ್ಸ್‌ಪೆಕ್ಟರ ಮಹೇಶ್ ತೊಗರವಾಡ್ ಮಾತನಾಡುತ್ತಾ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಕ್ರೀಡೆಯ ಮುಖ್ಯವಾಗಿದೆ . ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.ಗೌರವ ಅತಿಥಿ ಅಜಿತ್ ರೈ ಅವರು ವಿದ್ಯಾರ್ಥಿಗಳಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ, ಮುಂದಿನ ವೃತ್ತಿಜೀವನದ ಬೆಳವಣಿಗೆಗೆ ಕ್ರೀಡೆಯು ಸಹಾಯವಾಗುತ್ತದೆ . ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯಲ್ಲಿ ತೊಡಗಿ ಕೊಂಡಾಗ ಬದುಕು ರೂಪಿಸಲು ಸುಗಮವಾಗುತ್ತದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಸ್ವರ್ಣಲತಾ ಅರುಣೋದಯ ರೈ, ಪುತ್ರ ಜೈಕಿರಣ್ ರೈ, ಕಾವ್ಯ ರೈ, ಪುತ್ರಿ ಡಾ. ಸ್ವರೂಪ್ ಶೆಟ್ಟಿ, ಚೇತನ್ ಶೆಟ್ಟಿ ಉಪಸ್ಥಿತರಿದ್ದರು. ಕ್ರೀಡಾಕೂಟ ಸುಗಮವಾಗಿ ನಡೆಸಲು ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು . ಸಿಬ್ಬಂದಿ ಮತ್ತು ಸ್ವಯಂಸೇವಕರು ಅವಿರತವಾಗಿ ಶ್ರಮಿಸಿದರು,ಕ್ರೀಡಾಕೂಟವು ಹಲವಾರು ಟ್ರ್ಯಾಕ್ ಮತ್ತು ಫೀಲ್ಡ್ ಈವೆಂಟ್‌ಗಳನ್ನು ಒಳಗೊಂಡಿತ್ತು,ವಾರ್ಷಿಕ ಕ್ರೀಡಾ ಕೂಟ 2024-2025 ಅದ್ಭುತ ಯಶಸ್ಸನ್ನು ಕಂಡಿತು, ವಿದ್ಯಾರ್ಥಿಗಳಲ್ಲಿ ತಂಡದ ಕೆಲಸ, ಕ್ರೀಡಾ ಮನೋಭಾವ ಮತ್ತು ಸೌಹಾರ್ದತೆಯನ್ನು ಬೆಳೆಸಿತು.



Related posts

ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ ಪ್ರಕಟ ; ಬುಮ್ರಾ, ಶಮಿ ವಾಪಸ್‌.

Mumbai News Desk

ಕರ್ನಾಟಕ ಸಂಘ ಡೊಂಬಿವಲಿ, ಅದ್ಧೂರಿ ಕ್ರೀಡೋತ್ಸವ ದಂಗಲ್ – 2024 ಉದ್ಘಾಟನೆ

Mumbai News Desk

ಮೂಡುಬಿದಿರೆ – ಸ್ವಾಮೀಸ್ ಸ್ಟ್ರೆಂಥ್ ಟ್ರೈನಿಂಗ್ ಮತ್ತು ಎಂ.ಜೆ. ಸ್ಟೆಪ್ ಅಪ್ ಡ್ಯಾನ್ಸ್ ಸ್ಟುಡಿಯೊದ ಆಯೋಜನೆಯಲ್ಲಿ ಮಿಸ್ಟರ್ ಆ್ಯಂಡ್ ಮಿಸ್ ಕರಾವಳಿ ಸ್ಪರ್ಧೆ : ಪ್ರಿನ್ಸೆಸ್ ಆಫ್ ಕರಾವಳಿ 2025 ಆಗಿ ವಿಯಾ ಸಾಯಿ ಆಯ್ಕೆ

Mumbai News Desk

ತುಳು ಸಂಘ ಬೊರಿವಲಿ ಯುವ ವಿಭಾಗದಿಂದ ಕ್ರಿಕೆಟ್ ಪಂದ್ಯಾಟ, – ಕ್ರೀಡೆಗಳು ಸಂಘದ ಅಭಿವೃದ್ದಿಗೆ ಪೂರಕವಾಗಲಿ – ಹರೀಶ್ ಮೈಂದನ್

Mumbai News Desk

ಗಿರೀಶ್ ಶೆಟ್ಟಿ ತೆಳ್ಳಾರ್ ನೇತೃತ್ವದಲ್ಲಿ ಮೇ 3 ರಂದು  ಮುನಿಯಾಲಿನಲ್ಲಿ ರಾಷ್ಟ್ರೀಯ ಕಬ್ಬಡಿ ಆಟಗಾರ ಪ್ರೀತಂ ಶೆಟ್ಟಿ ಸ್ಮರಣಾರ್ಥ ರಾಷ್ಟ್ರ ಮಟ್ಟದ ಪ್ರೊ ಕಬಡ್ಡಿ

Mumbai News Desk

ಕರುನಾಡ ಸಿರಿ ಸಂಸ್ಥೆ : ಯಶಸ್ವಿಯಾಗಿ ಸಂಪನ್ನಗೊಂಡ ಕ್ರಿಕೆಟ್ ಮಹೋತ್ಸವ

Mumbai News Desk