30.9 C
Mumbai
June 8, 2026
Mumbai News Kannada
ಕ್ರೀಡೆ

ಆದರ್ಶ ವಿದ್ಯಾನಿಕೇತನ ಪ್ರೌಢಶಾಲೆ,ಮೀರಾ ರೋಡ್ ನ,ವಾರ್ಷಿಕ ಕ್ರೀಡಾಕೂಟ,





ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯಲ್ಲಿ ತೊಡಗಿ ಕೊಂಡಾಗ ಬದುಕು ರೂಪಿಸಲು ಸುಗಮ : ಅಜಿತ್ ರೈ

ಮೀರಾ – ಭಾಯಂದರ್ ನ ಸಮಾಜ ಸೇವಕ, ಶಿಕ್ಷಣ ಪ್ರೇಮಿ ಡಾ. ಅರುಣೋದಯ ಎಸ್ ರೈ ಅವರು ಸ್ಥಾಪಿಸಿದರೈ ಸುಮತಿ ಎಜುಕೇಷನಲ್ ಟ್ರಸ್ಟ್ ನಡೆಸುತ್ತಿರುವ ಆದರ್ಶ ವಿದ್ಯಾನಿಕೇತನ ಪ್ರೌಢಶಾಲೆ,ಮೀರಾ ರೋಡ್ ನ,ವಾರ್ಷಿಕ ಕ್ರೀಡಾಕೂಟವು ಡಿ13 ರಂದು ಆದರ್ಶ ವಿದ್ಯಾನಿಕೇತನ ಹೈಸ್ಕೂಲ್ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿ ಕಾಶಿಗಾಂವ್‌ನ ಪೊಲೀಸ್ ಠಾಣೆಯ ಸೀನಿಯರ್ ಇನ್ಸ್‌ಪೆಕ್ಟರ್ ಮಹೇಶ್ ತೊಗರವಾಡ್,ಮತ್ತು ಯುನೈಟೆಡ್ ರಬ್ಬರ್ ಪ್ರೈವೇಟ್ ಲಿಮಿಟೆಡ್‌ನ ಆಡಳಿತ ನಿರ್ದೇಶಕ ಅಜಿತ್ ರೈ ಗೌರವ ಅತಿಥಿಯಾಗಿ ಭಾಗವಹಿಸಿದ್ದರು.ಡಾ. ಅರುಣೋದಯ ಎಸ್ ರೈ ಮತ್ತು ಲಕ್ಷ್ಮಿ ಯಾದವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು, ವಿದ್ಯಾರ್ಥಿಗಳಿಗೆ ತಮ್ಮ ಬೆಂಬಲ ಮತ್ತು ಪ್ರೋತ್ಸಾಹವನ್ನು ನೀಡಿದರು.

ಸೀನಿಯರ್ ಇನ್ಸ್‌ಪೆಕ್ಟರ ಮಹೇಶ್ ತೊಗರವಾಡ್ ಮಾತನಾಡುತ್ತಾ ಉತ್ತಮ ಆರೋಗ್ಯ ಮತ್ತು ಯೋಗಕ್ಷೇಮವನ್ನು ಕಾಪಾಡಿಕೊಳ್ಳಲು ಕ್ರೀಡೆಯ ಮುಖ್ಯವಾಗಿದೆ . ಕ್ರೀಡೆ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.ಗೌರವ ಅತಿಥಿ ಅಜಿತ್ ರೈ ಅವರು ವಿದ್ಯಾರ್ಥಿಗಳಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿ, ವಿದ್ಯಾರ್ಥಿಗಳಿಗೆ, ಮುಂದಿನ ವೃತ್ತಿಜೀವನದ ಬೆಳವಣಿಗೆಗೆ ಕ್ರೀಡೆಯು ಸಹಾಯವಾಗುತ್ತದೆ . ವಿದ್ಯಾರ್ಥಿ ಜೀವನದಲ್ಲಿ ಕ್ರೀಡೆಯಲ್ಲಿ ತೊಡಗಿ ಕೊಂಡಾಗ ಬದುಕು ರೂಪಿಸಲು ಸುಗಮವಾಗುತ್ತದೆ ಎಂದು ನುಡಿದರು.

ಈ ಸಂದರ್ಭದಲ್ಲಿ ಸ್ವರ್ಣಲತಾ ಅರುಣೋದಯ ರೈ, ಪುತ್ರ ಜೈಕಿರಣ್ ರೈ, ಕಾವ್ಯ ರೈ, ಪುತ್ರಿ ಡಾ. ಸ್ವರೂಪ್ ಶೆಟ್ಟಿ, ಚೇತನ್ ಶೆಟ್ಟಿ ಉಪಸ್ಥಿತರಿದ್ದರು. ಕ್ರೀಡಾಕೂಟ ಸುಗಮವಾಗಿ ನಡೆಸಲು ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು . ಸಿಬ್ಬಂದಿ ಮತ್ತು ಸ್ವಯಂಸೇವಕರು ಅವಿರತವಾಗಿ ಶ್ರಮಿಸಿದರು,ಕ್ರೀಡಾಕೂಟವು ಹಲವಾರು ಟ್ರ್ಯಾಕ್ ಮತ್ತು ಫೀಲ್ಡ್ ಈವೆಂಟ್‌ಗಳನ್ನು ಒಳಗೊಂಡಿತ್ತು,ವಾರ್ಷಿಕ ಕ್ರೀಡಾ ಕೂಟ 2024-2025 ಅದ್ಭುತ ಯಶಸ್ಸನ್ನು ಕಂಡಿತು, ವಿದ್ಯಾರ್ಥಿಗಳಲ್ಲಿ ತಂಡದ ಕೆಲಸ, ಕ್ರೀಡಾ ಮನೋಭಾವ ಮತ್ತು ಸೌಹಾರ್ದತೆಯನ್ನು ಬೆಳೆಸಿತು.



Related posts

ಆಸ್ಟ್ರೇಲಿಯಾದಲ್ಲಿ ಟೀಮ್ ಇಂಡಿಯಾಗೆ ಮಹಾಮೋಸ – ಅನ್ಯಾಯದ ತೀರ್ಪಿಗೆ ಯಶಸ್ವಿ ಜೈಸ್ವಾಲ್ ಬಲಿ.

Mumbai News Desk

ಏಷ್ಯನ್ ಮಾಸ್ಟರ್ಸ್ ವೇಟ್‌ಲಿಫ್ಟಿಂಗ್ ಕಮಿಟಿ (AMW);    ಅಂತರಾಷ್ಟ್ರೀಯ ವೇಟ್ ಲಿಫ್ಟರ್ ಉದಯ  ಶೆಟ್ಟಿ  ಆಯ್ಕೆ

Mumbai News Desk

ಬಂಟರ ಸಂಘ ಮುಂಬಯಿ, ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿಯಿಂದ ಬಂಟ್ಸ್ ಬ್ಯಾಡ್ಮಿಂಟನ್ ಟೂರ್ನಮೆಂಟ್

Mumbai News Desk

ಏಷ್ಯಾ ಕಪ್ 2025 : ಭಾರತ ತಂಡ ಪ್ರಕಟ: ಶುಭಮನ್ ಗಿಲ್ ಉಪನಾಯಕ, ಶ್ರೇಯಸ್ ಅಯ್ಯರ್‌ಗೆ ಸ್ಥಾನವಿಲ್ಲ

Mumbai News Desk

ದುಬೈನಲ್ಲಿ ಟೀಮ್ ಇಂಡಿಯಾದ ಐವರು ಸ್ಪಿನ್ನರ್ ಗಳ ರಣನೀತಿಯ ‘ಯಶಸ್ಸಿನ ರೂವಾರಿ ’ವರುಣ್ ಚಕ್ರವರ್ತಿ

Mumbai News Desk

ಕಬಡ್ಡಿ ವಿಶ್ವಕಪ್: ಫೈನಲ್‌ನಲ್ಲಿ ಚೈನೀಸ್ ತೈಪೆಯನ್ನು ಸೋಲಿಸಿ ಸತತ ಎರಡನೇ ಬಾರಿಗೆ ಕಬಡ್ಡಿ ವಿಶ್ವಕಪ್ ಗೆದ್ದ ಭಾರತೀಯ ಮಹಿಳಾ ತಂಡ

Mumbai News Desk