30.9 C
Mumbai
June 8, 2026
Mumbai News Kannada
ಮುಂಬಯಿ

ಸಾಂತಾಕ್ರೂಸ್ ಶ್ರೀ ಮಂತ್ರದೇವಿ ದೇವಸ್ಥಾನದ ವಾರ್ಷಿಕ ಮಹಾಪೂಜೆ ಸಂಪನ್ನ,





ಮುಂಬಯಿ, ಡಿ.19. ಉಪನಗರ ಸಾಂತಾಕ್ರೂಸ್ (ಪ.)ನ ಮಿಲನ್‌ ಸಬ್‌ವೇ ರೋಡ್, ಆಶಾ ಚಾಳ್‌ನಲ್ಲಿ ಮಂತ್ರ ದೇವಿಯ ಆರಾಧಕ, ಧಾರ್ಮಿಕ ಚಿಂತಕ ಕುತ್ಯಾರು ವಾಸುದೇವ ಬಂಜನ್ ಮಾರ್ಗದರ್ಶನದಲ್ಲಿ ಸ್ಥಾಪಿಸಿರುವ ಶ್ರೀಮಂತ್ರ ದೇವಿ ಚಾರಿಟೇಬಲ್ ಟ್ರಸ್ಟ್ ನ ಆಡಳಿತದಲ್ಲಿ ಇರುವ ಶ್ರೀಮಂತ್ರ ದೇವಿ ಕ್ಷೇತ್ರದ ವಾರ್ಷಿಕ ಮಹಾಪೂಜೆಯು ಡಿ17. ಮಂಗಳವಾರದಂದು ಬೆಳಿಗ್ಗೆಯಿಂದ ಸಂಜೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ , ದೇವಿ ಆವೇಶದ ಸೇವೆಯೊಂದಿಗೆ ಭಕ್ತಿ ಸಂಭ್ರಮದೊಂದಿಗೆ ನಡೆಯಿತು,.

ಅಂದು ಶ್ರೀದೇವಿಗೆ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಪಂಚಾಮೃತ ಅಭಿಷೇಕ ಹಾಗೂ ಪರಿವಾರ ದೇವತೆಗಳಿಗೆ ಹೋಮ- ಹವನ, ಅಮ್ಮನವರಿಗೆ ಗದ್ದಿಗೆ ಏರಿಸಿ ಶ್ರೀದೇವಿಯ ಆವೇಶದೊಂದಿಗೆ ಪ್ರಸಾದ ವಿತರಣೆ ನಡೆಯಿತು.

ಮಧ್ಯಾಹ್ನ ಮಹಾ ಮಂಗಳಾರತಿ ನಡೆದು ಬಳಿಕ ಸಂಜೆ ತನಕ ಮಹಾ ಅನ್ನದಾನ ಸೇವೆ ನಡೆಯಿತು.

ಈ ಪುಣ್ಯ ಕಾರ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು ಶ್ರೀದೇವರ ದರ್ಶನ ಪಡೆದರು,
ಕ್ಷೇತ್ರದ ಧಾನಿಗಳನ್ನು ,ವಿಶೇಷ ಅತಿಥಿಗಳನ್ನು ಮೊತ್ತೇಸರರಾದ ವಾಸುದೇವ ಬಂಜನ್ (ಅರ್ಚಕರು), ಅಧ್ಯಕ್ಷರು, ಟ್ರಸ್ಟಿ, ಮಧ್ಯಸ್ಥರು, ಕಾರ್ಯಕಾರಿ ಸಮಿತಿದರು, ಮಹಿಳಾ ವಿಭಾಗದ ಸದಸ್ಯರು ಗೌರವಿಸಿದರು.
ಈ ಸಂಧರ್ಭದಲ್ಲಿ ದೇವಸ್ಥಾನದಲ್ಲಿ ಸುದೀರ್ಘ ಕಾಲದಿಂದ ಸಕ್ಸೋ ಫೋನ್, ಚಂಡೆ ಮದ್ದಳೆ ವಾದನದ ಸೇವೆ ಕಾರ್ಯವನ್ನು ನೀಡುತ್ತಿರುವ ದಿನೇಶ್ ಕೋಟ್ಯಾನ್ ಜೇರಿ ಮೇರಿ ಇವರಿಗೆ ಬಂಗಾರದ ಪದಕ ದೊಂದಿಗೆ ಮಹಾಪ್ರಸಾದವನ್ನು ನೀಡಿ ಗೌರವಿಸಲಾಯಿತು.



Related posts

ಮೀರಾರೋಡಿನಲ್ಲಿ ಗೆಜ್ಜೆ ಗಿರಿ ಮೇಳದವರಿಂದ……ಎಡ್ಮೂರ ಮುಗೇರ ಸತ್ಯೊಲು…ಯಕ್ಷಗಾನ ಪ್ರದರ್ಶನ.

Mumbai News Desk

ನಮೋ ಮೊಯರ್ ಗ್ಲೋಬಲ್ ಪೌಂಡೇಶನ್; ಗ್ರಾಮೀಣ ಪ್ರದೇಶದ ಶಾಲೆಯಲ್ಲಿ ಕಂಪ್ಯೂಟರ್ ವಿತರಣೆ,

Mumbai News Desk

ಭಾರತ್ ಕೋ-ಆಪರೇಟಿವ್ ಬ್ಯಾಂಕ್ ಲಿಮಿಟೆಡ್ ಮಲಾಡ್ ಕೊಂಕಣಿ ಪಾಡದಶಾಖೆಯಲ್ಲಿ 46ನೇ ಸಂಸ್ಥಾಪನಾ ದಿನಾಚರಣೆ .

Mumbai News Desk

ಲಾಲ್​ಬಾಗ್​ಚ ರಾಜ ಗಣಪ; ಭಕ್ತರ ಚಿನ್ನಾಭರಣ ಕಾಣಿಕೆಗಳ ಹರಾಜು; ಇ ಬಾರಿಯ ಆದಾಯದ ವಿವರ ಇಲ್ಲಿದೆ.

Mumbai News Desk

ಕನ್ನಡ ನವತಾರಾ ಕಲಾ ಮಂಡಳಿ ಮಲಾಡ್ (ಪ): 51ನೇ ವಾರ್ಷಿಕ ಮಹಾಪೂಜೆ, ಸಾಧಕರಿಗೆ ಸನ್ಮಾನ ಹಾಗೂ ಯಕ್ಷಗಾನ

Mumbai News Desk

ಬಂಟರ ಸಂಘ ಮುಂಬಯಿ ಮೀರಾ -ಭಾಯಂದರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಆಯೋಜಿಸಿದ ಆರೋಗ್ಯ ಉಪನ್ಯಾಸ.

Mumbai News Desk