September 6, 2026
Mumbai News Kannada
ಪ್ರಕಟಣೆ

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ,ಪೋರ್ಟ್; ಡಿ.21 ರಂದು 80ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಹಾಗೂ ಶನೀಶ್ವರ ಮಹಾಪೂಜೆ






ಮುಂಬಯಿ,ಡಿ.17- ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ(ರಿ) ಪೋರ್ಟ್ ಇದರ 80 ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಹಾಗೂ ಶ್ರೀ ಶನೀಶ್ವರ ಮಹಾಪೂಜೆಯು ಡಿ.21ರಂದು ಶನಿವಾರ ಖಾನ್ಜಿ ಖೇತ್ಸಿ ಸಭಾಗೃಹ ,ಮಿಂಟ್ ರೋಡ್, ಪೋರ್ಟ್ ಇಲ್ಲಿ ಜರಗಲಿದೆ. ಅಂದು ಬೆಳಿಗ್ಗೆ 6.00 ರಿಂದ 7.30 ಗಣ ಹೋಮ ಮತ್ತು ಪ್ರಾರ್ಥನೆ ,9.00 ರಿಂದ 10.30 ರ ತನಕ ಹರೀಶ್ ಶಾಂತಿ ಹೆಜಮಾಡಿಯವರ ಪೌರೋಹಿತ್ಯದಲ್ಲಿ ಶ್ರೀ ಸತ್ಯನಾರಾಯಣ ಮಹಾಪೂಜೆ, 10.30 ರಿಂದ 11.30 ರ ವರೆಗೆ ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ ಮತ್ತು ವಿದ್ಯಾದಾಹಿನಿ ಭಜನಾ ಮಂಡಳಿ ಪೋರ್ಟ್ ಇವರಿಂದ ಭಜನೆ.11.30 ರಿಂದ 12.00 ಪ್ರಧಾನ ಅರ್ಚಕರಾದ ಸತೀಶ್ ಕೋಟ್ಯಾನ್ ಅವರಿಂದ ಶ್ರೀ ಶನೀಶ್ವರ ಕಲಶ ಪ್ರತಿಷ್ಠಾಪನೆ,12 ಗಂಟೆಗೆ ದೀಪ ಪ್ರಜ್ವಲನೆಯನ್ನು ಅಂತರಾಷ್ಟ್ರೀಯ ಖ್ಯಾತಿಯ ಪುರೋಹಿತರು, ಜ್ಯೋತಿಷಿ, ವಾಸ್ತುತಜ್ಞರು
ಅಶೋಕ್ ಪುರೋಹಿತ್, ಸಮಾಜ ಸೇವಕ
ಸದಾನಂದ ಕೆ ಅಂಚನ್, ಬಿಲ್ಲವರ ಅಸೋಸಿಯೇಷನ್ ಡೊಂಬಿವಲಿ ಸ್ಥಳೀಯ ಕಚೇರಿ ಕಾರ್ಯಾಧ್ಯಕ್ಷ ಶ್ರೀಧರ್ ಬಿ. ಅಮೀನ್ ಇವರು ಮಾಡಲಿರುವರು.
ಮಧ್ಯಾಹ್ನ 12:30 ರಿಂದ ಶ್ರೀ ಮಹಾವಿಷ್ಣು ಮಂದಿರ( ಮುಂಬ್ರಾ ಮಿತ್ರ ಭಜನಾ ಮಂಡಳಿ ಡೊಂಬಿವಲಿ) ಇವರಿಂದ ಕುಣಿತ ಭಜನೆ ನಡೆಯಲಿದೆ.
ಮಧ್ಯಾಹ್ನ 12.30 ರಿಂದ ಅನ್ನಸಂತರ್ಪಣೆಯು ಅಭಿಷೇಕ್ ಸತೀಶ್ ಕೋಟ್ಯಾನ್ ಹಾಗೂ ಡಾ. ಭವ್ಯ ಅಭಿಷೇಕ್ ಕೋಟ್ಯಾನ್ ಯುಎಸ್ ಎ ಇವರ ಸೇವೆಯ ರೂಪದಲ್ಲಿ ಜರಗಲಿದೆ. ಮಧ್ಯಾಹ್ನ 1.30 ರಿಂದ ಸಂಜೆ 5.30 ರ ತನಕ ಶ್ರೀ ಶನೀಶ್ವರ ಗ್ರಂಥ ಪಾರಾಯಣ ಹಾಗೂ ಮಹಾಪೂಜೆಯು ಯಕ್ಷಗಾನ ತಾಳಮದ್ದಳೆ ರೂಪದಲ್ಲಿ ನಡೆಯಲಿದೆ.ಸಂಜೆ 5:30 ರಿಂದ 7.30 ರ ತನಕ ಧಾರ್ಮಿಕ ಸಭೆಯು ಜರಗಲಿದ್ದು ಆಶೀರ್ವಚನವನ್ನು ಶ್ರೀ ಉಮಾಮಹೇಶ್ವರಿ ದೇವಸ್ಥಾನ ಜೆರಿಮೆರಿ ಪ್ರಧಾನ ಅರ್ಚಕರು ಎಸ್ ಎನ್ .ಉಡುಪ ನೀಡಲಿದ್ದಾರೆ.
ಅಧ್ಯಕ್ಷತೆಯನ್ನು ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ(ರಿ) ಇದರ ಅಧ್ಯಕ್ಷ ರವಿ ಎಲ್. ಬಂಗೇರ ವಹಿಸಿಕೊಳ್ಳಲಿದ್ದಾರೆ. ಅತಿಥಿಗಳಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಉಪಾಧ್ಯಕ್ಷ ಹರೀಶ್ ಡಿ ಸಾಲಿಯಾನ್ ಬಜಗೋಳಿ,ಸ್ಟಕ್ಚರಲ್ ಇಂಜಿನಿಯರ್ ಶ್ರೀ ಸುಧಾಕರ್ ಪೂಜಾರಿ, ಅಭ್ಯುದಯ್ ಕೋ ಆಪರೇಟಿವ್ ಬ್ಯಾಂಕಿನ ಮಾಜಿ ಆಡಳಿತ ನಿರ್ದೇಶಕರು ಪುನೀತ್ ಕುಮಾರ್ ಶೆಟ್ಟಿ, ಸಮಾಜ ಸೇವಕರು ರಾಘವೇಂದ್ರ ಕಾಪು, ಶ್ರೀ ಭುವನೇಶ್ವರಿ ಸೇವಾ ಸಮಿತಿ ಪೋರ್ಟ್ ಅಧ್ಯಕ್ಷರು ಡಾ. ಪ್ರಕಾಶ್ ಮೂಡುಬಿದ್ರಿ ಇವರೆಲ್ಲ ಉಪಸ್ಥಿತರಿರುವರು. ಈ ಸಂದರ್ಭದಲ್ಲಿ ಶ್ರೀ ನಾರಾಯಣ ಬಿ. ಸಾಲಿಯಾನ್ ಸ್ಮರಣಾರ್ಥ ಪ್ರಶಸ್ತಿಯನ್ನು ಶ್ರೀ ಭುವನೇಶ್ವರಿ ಸೇವಾ ಸಮಿತಿ ಪೋರ್ಟ್ ಇದರ ಧರ್ಮದರ್ಶಿ ರಾಜೇಶ್ ಭಟ್ ಅವರಿಗೆ ಪ್ರಧಾನಿಸಲಾಗುವುದದು. ಹಾಗೂ ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿಯ ಹಿರಿಯ ಸದಸ್ಯ
ಸತೀಶ್ ಐ ಪೂಜಾರಿ ಎಲ್ಲೂರು ಇವರನ್ನು ಸನ್ಮಾನಿಸಲಾಗುವುದು. ಧಾರ್ಮಿಕ ಸಭೆಯ ಬಳಿಕ ಮಹಾಮಂಗಳಾರತಿ ಪ್ರಸಾದ ವಿತರಣೆ ಹಾಗೂ ಅನ್ನ ಸಂತರ್ಪಣೆ ನಡೆಯಲಿದೆ. ಈ ಧಾರ್ಮಿಕ ಉತ್ಸವದಲ್ಲಿ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಶನಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮ ಸೇವಾ ಸಮಿತಿ (ರಿ) ಗೌರವಾಧ್ಯಕ್ಷರು ಹರೀಶ್ ಜಿ. ಅಮೀನ್,ಅಧ್ಯಕ್ಷರು
ರವಿ.ಎಲ್ . ಬಂಗೇರ ,ಉಪಾಧ್ಯಕ್ಷರು ವಿಶ್ವನಾಥ್ ಭಂಡಾರಿ, ಗೌ. ಪ್ರ. ಕಾರ್ಯದರ್ಶಿ ಶರತ್ ಜಿ. ಪೂಜಾರಿ ಪಡುಬೆಳ್ಳೆ, ಗೌರವ ಕೋಶಾಧಿಕಾರಿ ಪ್ರಸಾದ್ . ಎಸ್ ಕರ್ಕೇರ, ಧಾರ್ಮಿಕ ಸಲಹೆಗಾರ ಜೆ.ಜೆ. ಕೋಟ್ಯಾನ್ , ಕಾನೂನು ಸಲಹೆಗಾರ ನ್ಯಾಯವಾದಿ ಸುದೇಶ್ ಪೂಜಾರಿಯವರು ವಿನಂತಿಸಿಕೊಂಡಿದ್ದಾರೆ.



Related posts

ಕೊಡ್ಯಡ್ಕ ದೇವಸ್ಥಾನಕ್ಕೆ ಹೋದಾಗ ಆದ ಪ್ರೇರಣೆಯಂತೆ ಬೆಳಗಾವಿಯಲ್ಲಿ ನೆಲೆ ನಿಂತ ಅನ್ನಪೂರ್ಣೇಶ್ವರಿ

Mumbai News Desk

ಜೂನ್ 25 ರಂದು ಕಾಪು ಮಾರಿಯಮ್ಮನ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಿಸಲು ಸ್ವರ್ಣ ಸಂಕಲ್ಪ

Mumbai News Desk

ಏ. 13 ರಂದು ಮಂಗಳೂರಲ್ಲಿ ನಡೆಯಲಿರುವ ಕುಲಾಲ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

Mumbai News Desk

ಜಯ ಸಿ. ಸುವರ್ಣ ಅಭಿಮಾನಿಗಳು ಹಾಗೂ ಮುಂಬಯಿ ಬಿಲ್ಲವರಿಂದ ಎ. 25ರಂದು ಭಜನಾ ಮಂಡಳಿ ಉದ್ಘಾಟನೆ

Mumbai News Desk

ಜುಲೈ 21: ಕುರ್ಲಾ ಬಂಟರ ಭವನದಲ್ಲಿ ಗುರು ಪೂರ್ಣಿಮೆ ಆಚರಣೆ, 

Mumbai News Desk

ಬ್ರಹ್ಮಕಲಶ ಸಂಭ್ರಮದಲ್ಲಿ ಕಾರ್ನಾಡು ಶ್ರೀ ಹರಿಹರ ಕ್ಷೇತ್ರದ ಶ್ರೀ ಮೂರ್ತಿ ದೇವಸ್ಥಾನ

Mumbai News Desk