28.4 C
Mumbai
March 7, 2026
Mumbai News Kannada
ಸುದ್ದಿ

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ ಸಂಪನ್ನ.





     ಸುದ್ದಿ ವಿವರ: ಪಿ.ಆರ್.ರವಿಶಂಕರ್

                ಬೊಯಿಸರ್ ಪಶ್ಚಿಮದಲ್ಲಿನ ಸಿಡ್ಕೋ ವಲಯದಲ್ಲಿನ  ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಇದೇ ಡಿಸೆಂಬರ್ ತಾ.18 ನೆಯ ಬುಧವಾರದಂದು ಸಂಜೆ ಶ್ರೀ ಗಣೇಶ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ಪೂಜೆಯು ಅದ್ದೂರಿಯಾಗಿ ಜರಗಿತು.

       ಆರಂಭದಲ್ಲಿ   ಮೀರಾ ರೋಡ್ ನ ಪ್ರಸಿದ್ಧ ಲಕ್ಶ್ಮೀನಾರಾಯಣ ಭಜನಾ ಮಂಡಲಿ  ಹಾಗೂ ಅಯ್ಯಪ್ಪ ಭಕ್ತ ಮಂಡಳಿ ಮೀರಾರೊಡ್ ಇವಯರಿಂದ ದೇವರ ಭಜನಾ ಸಂಕೀರ್ತನೆ ಹಾಗೂ ಸ್ವಾಮಿ ಅಯ್ಯಪ್ಪ  ಭಕ್ತಿ ಭಜನಾ ಕಾರ್ಯಕ್ರಮವು ಜರಗಿತು.  ಅಯ್ಯಪ್ಪ ವೃತಧಾರಿಯಾದ ಸಂತೋಷ್ ಶೆಟ್ಟಿ ಸ್ವಾಮಿ ( ತುಂಗಾ  ಹಾಸ್ಪಿಟಲ್ಸ್) ಇವರು  ಈ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮಹಾ ಮಂಗಳಾರತಿಯ ಬಳಿಕ ತೀರ್ಥಪ್ರಸಾದ ಹಾಗೂ ಹರಿವರಾಸನಮ್ ಕಾರ್ಯಕ್ರಮ ಜರಗಿತು. 

   ಸರ್ವ ಭಕ್ತಾಭಿಮಾನಿಗಳ ನಿತ್ಯಜೀವನದಲ್ಲಿನ ಉತ್ತಮ ಆರೋಗ್ಯ , ನೆಮ್ಮದಿ ಹಾಗೂ ಸುಭಿಕ್ಷತೆಯ ಪ್ರಾರ್ಥನೆಗಳೊಂದಿಗೆ ಪೂಜಾ ಕಾರ್ಯಕ್ರಮ ಸಂಪನ್ನಗೊಂಡಿತು.

ಮೀರಾ ರೋಡ್ ನ ಅಯ್ಯಪ್ಪ ಭಕ್ತಮಂಡಳಿಯ ಹಿರಿಯ ಶ್ರೀ ಜಯಶೀಲ ಗುರುಸ್ವಾಮಿಯವರ ಉಪಸ್ಥಿತಿಯಲ್ಲಿ ಜರಗಿದ ಈ ಕಾರ್ಯ ಕ್ರಮದಲ್ಲಿ ಸ್ವಾಮಿ ನಿತ್ಯಾನಂದ ಮಂದಿರದ ವಿಶ್ವಸ್ಥರು ಸತ್ಯಾ ಕೋಟ್ಯಾನ್, ಪಾಲ್ಘರ್ ತಾಲೂಕು ಹೋಟೆಲ್ ಅಸೋಸಿಯೇಶನ್ ಅಧ್ಯಕ್ಷ ರಘುರಾಮ್ ಎಮ್.ರೈ , ಮೀರಾ ಡಹಾಣೂ ಬಂಟ್ಸ್ ಸಂಸ್ಥೆಯ ಟ್ರಸ್ಟೀ ಕೆ.ಭುಜಂಗ ಶೆಟ್ಟಿ , ಸ್ಥಳೀಯ ಉದ್ಯಮಿಗಳು , ವಿವಿಧ ಸಂಸ್ಥೆಯ ಪದಾಧಿಕಾರಿಗಳು ,ತುಂಗಾ ಹಾಸ್ಪಿಟಲ್ಸ್ ಸಮೂಹದ ಕರ್ಮಚಾರಿ ಸದಸ್ಯರು ಹಾಗೂ ಸ್ಥಳೀಯ ಅಯ್ಯಪ್ಪ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಪೂಜೆಯ ಬಳಿಕ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ಜರಗಿತು.

ಚಿತ್ರ ಹಾಗೂ ಸುದ್ದಿ : ಪಿ.ಆರ್.ರವಿಶಂಕರ್

8483980035



Related posts

ಮಂಗಳೂರಿನ ಕುಲಾಲ ಭವನ ಲೋಕಾರ್ಪಣೆ; 

Mumbai News Desk

ಕೆಜಿಎಫ್, ಓಂ ಚಿತ್ರದ ಖ್ಯಾತ ನಟ ಹರೀಶ್ ರೈ ಥೈರಾಯ್ಡ್ ಕ್ಯಾನ್ಸರ್ ನಿಂದ ನಿಧನ.

Mumbai News Desk

ಮುಂಬೈಯ ನಾಟ್ಯ ಕಲಾವಿದೆ ಜ್ಯೋತಿ ರಂಜಿತ್ ಶರ್ಮ ಅವರಿಂದ ಅಯೋಧ್ಯೆಯಲ್ಲಿ ನ್ರತ್ಯ ಸೇವೆ.

Mumbai News Desk

ಬಂಟ್ಸ್ ಹಾಸ್ಟೇಲ್ ಗಣೇಶೋತ್ಸವದಲ್ಲಿ ಧಾರ್ಮಿಕ ಸಭೆ

Mumbai News Desk

ಡಹಾಣೂವಿನ ಸಮಾಜ ಸೇವಕ ಅಶೋಕ್  ಎಸ್. ಶೆಟ್ಟಿ ಉಳೆಪಾಡಿ ಇವರಿಗೆ ಸನ್ಮಾನ.

Mumbai News Desk

“ಆನಂದವನ್ನು ನಮ್ಮೊಳಗೆ ಹುಡುಕಬೇಕು” : ಪೂಜ್ಯ ಒಡಿಯೂರು ಶ್ರೀಗಳವರಿಂದ ಸಂದೇಶ

Mumbai News Desk