32 C
Mumbai
April 24, 2026
Mumbai News Kannada
ಸುದ್ದಿ

ಬೊಯಿಸರ್ ಪಶ್ಚಿಮದ ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಪೂಜಾ ಕಾರ್ಯಕ್ರಮ ಸಂಪನ್ನ.





     ಸುದ್ದಿ ವಿವರ: ಪಿ.ಆರ್.ರವಿಶಂಕರ್

                ಬೊಯಿಸರ್ ಪಶ್ಚಿಮದಲ್ಲಿನ ಸಿಡ್ಕೋ ವಲಯದಲ್ಲಿನ  ಶ್ರೀ ಗಣೇಶ ಅಯ್ಯಪ್ಪ ಮಂದಿರದಲ್ಲಿ ಇದೇ ಡಿಸೆಂಬರ್ ತಾ.18 ನೆಯ ಬುಧವಾರದಂದು ಸಂಜೆ ಶ್ರೀ ಗಣೇಶ ಮತ್ತು ಶ್ರೀ ಅಯ್ಯಪ್ಪ ಸ್ವಾಮಿ ಪೂಜೆಯು ಅದ್ದೂರಿಯಾಗಿ ಜರಗಿತು.

       ಆರಂಭದಲ್ಲಿ   ಮೀರಾ ರೋಡ್ ನ ಪ್ರಸಿದ್ಧ ಲಕ್ಶ್ಮೀನಾರಾಯಣ ಭಜನಾ ಮಂಡಲಿ  ಹಾಗೂ ಅಯ್ಯಪ್ಪ ಭಕ್ತ ಮಂಡಳಿ ಮೀರಾರೊಡ್ ಇವಯರಿಂದ ದೇವರ ಭಜನಾ ಸಂಕೀರ್ತನೆ ಹಾಗೂ ಸ್ವಾಮಿ ಅಯ್ಯಪ್ಪ  ಭಕ್ತಿ ಭಜನಾ ಕಾರ್ಯಕ್ರಮವು ಜರಗಿತು.  ಅಯ್ಯಪ್ಪ ವೃತಧಾರಿಯಾದ ಸಂತೋಷ್ ಶೆಟ್ಟಿ ಸ್ವಾಮಿ ( ತುಂಗಾ  ಹಾಸ್ಪಿಟಲ್ಸ್) ಇವರು  ಈ ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಮಹಾ ಮಂಗಳಾರತಿಯ ಬಳಿಕ ತೀರ್ಥಪ್ರಸಾದ ಹಾಗೂ ಹರಿವರಾಸನಮ್ ಕಾರ್ಯಕ್ರಮ ಜರಗಿತು. 

   ಸರ್ವ ಭಕ್ತಾಭಿಮಾನಿಗಳ ನಿತ್ಯಜೀವನದಲ್ಲಿನ ಉತ್ತಮ ಆರೋಗ್ಯ , ನೆಮ್ಮದಿ ಹಾಗೂ ಸುಭಿಕ್ಷತೆಯ ಪ್ರಾರ್ಥನೆಗಳೊಂದಿಗೆ ಪೂಜಾ ಕಾರ್ಯಕ್ರಮ ಸಂಪನ್ನಗೊಂಡಿತು.

ಮೀರಾ ರೋಡ್ ನ ಅಯ್ಯಪ್ಪ ಭಕ್ತಮಂಡಳಿಯ ಹಿರಿಯ ಶ್ರೀ ಜಯಶೀಲ ಗುರುಸ್ವಾಮಿಯವರ ಉಪಸ್ಥಿತಿಯಲ್ಲಿ ಜರಗಿದ ಈ ಕಾರ್ಯ ಕ್ರಮದಲ್ಲಿ ಸ್ವಾಮಿ ನಿತ್ಯಾನಂದ ಮಂದಿರದ ವಿಶ್ವಸ್ಥರು ಸತ್ಯಾ ಕೋಟ್ಯಾನ್, ಪಾಲ್ಘರ್ ತಾಲೂಕು ಹೋಟೆಲ್ ಅಸೋಸಿಯೇಶನ್ ಅಧ್ಯಕ್ಷ ರಘುರಾಮ್ ಎಮ್.ರೈ , ಮೀರಾ ಡಹಾಣೂ ಬಂಟ್ಸ್ ಸಂಸ್ಥೆಯ ಟ್ರಸ್ಟೀ ಕೆ.ಭುಜಂಗ ಶೆಟ್ಟಿ , ಸ್ಥಳೀಯ ಉದ್ಯಮಿಗಳು , ವಿವಿಧ ಸಂಸ್ಥೆಯ ಪದಾಧಿಕಾರಿಗಳು ,ತುಂಗಾ ಹಾಸ್ಪಿಟಲ್ಸ್ ಸಮೂಹದ ಕರ್ಮಚಾರಿ ಸದಸ್ಯರು ಹಾಗೂ ಸ್ಥಳೀಯ ಅಯ್ಯಪ್ಪ ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಪೂಜೆಯ ಬಳಿಕ ಪ್ರಸಾದ ರೂಪದಲ್ಲಿ ಅನ್ನಸಂತರ್ಪಣೆ ಜರಗಿತು.

ಚಿತ್ರ ಹಾಗೂ ಸುದ್ದಿ : ಪಿ.ಆರ್.ರವಿಶಂಕರ್

8483980035



Related posts

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk

ಖ್ಯಾತ ಬಾಲಿವುಡ್ ನಟ ಮತ್ತು ನಿರ್ದೇಶಕ ಮನೋಜ್ ಕುಮಾರ್ ನಿಧನ

Mumbai News Desk

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘ ಎಸ್.ಕೋಡಿ ತೋಕೂರಿನಲ್ಲಿ ಬೇಸಿಗೆ ಶಿಬಿರ – ಚಿನ್ನರ ಹಬ್ಬ-2025ಕ್ಕೆ ಚಾಲನೆ

Mumbai News Desk

ಜಗದಂಬ ಯುವ ವಿಭಾಗದ ವತಿಯಿಂದ ಮಕ್ಕಳಿಗೆ ಶೈಕ್ಷಣಿಕ ಪರಿಕರ ವಿತರಣೆ.

Mumbai News Desk

ಅವಿಭಜಿತ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಶಾಂತಿ, ಸೌಹಾರ್ದತೆಗೆ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಬದ್ದ : ಪತ್ರಿಕಾಗೋಷ್ಥಿಯಲ್ಲಿ ತೋನ್ಸೆ ಜಯಕೃಷ್ಣ ಎ. ಶೆಟ್ಟಿ.

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಜುಲೈ 10ಕ್ಕೆ ಗುರುಪೂರ್ಣಿಮಾ ಮಹೋತ್ಸವ.

Mumbai News Desk